ಕೊಪ್ಪಳ/ಕುಷ್ಟಗಿ: ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.
ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಬೇಕಿದೆ. ಈ ಸೋಂಕು ವ್ಯಕ್ತಿಯನ್ನು ನೋಡಿ ತಗುಲುವುದಿಲ್ಲ. ಯಾರಿಗೆ ಬೇಕಾದರೂ ಸೋಂಕು ತಗುಲಬಹುದು. ಈ ಸಾಂಕ್ರಾಮಿಕ ರೋಗಕ್ಕೆ ಇನ್ನೂ ಔಷಧ ಇಲ್ಲ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಬಿ.ಎಸ್.ರೇಖಾ ಹೇಳಿದರು.
ಕುಷ್ಟಗಿಯಲ್ಲಿ ಜಾಗೃತಿ ಆಂದೋಲನ:
ಕುಷ್ಟಗಿಯ ನ್ಯಾಯಾಲಯದ ಆವರಣದಲ್ಲಿ ಕೋವಿಡ್ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ, ಮಾತನಾಡಿದ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಎಸ್.ಹೊನ್ನುಸ್ವಾಮಿ, ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ಸೋಪಿನಿಂದ ಕೈ ತೊಳೆಯುವುದನ್ನು ದಿನಚರಿಯಾಗಿಸಿಕೊಳ್ಳಬೇಕು ಎಂದರು.