ETV Bharat / state

ಕೊಪ್ಪಳದ ನ್ಯಾಯಾಲಯ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ - Drive to Corona Awareness Jatha in Koppal

ಕೊಪ್ಪಳ ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು. ಅಲ್ಲದೇ ಕುಷ್ಟಗಿಯ ನ್ಯಾಯಾಲಯ ಆವರಣದಲ್ಲಿಯೂ ಕೋವಿಡ್ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು.

Drive to Corona Awareness Jatha in Koppal
ಕೊಪ್ಪಳದ ನ್ಯಾಯಾಲಯದ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ
author img

By

Published : Oct 17, 2020, 5:44 PM IST

ಕೊಪ್ಪಳ/ಕುಷ್ಟಗಿ: ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಬೇಕಿದೆ. ಈ ಸೋಂಕು ವ್ಯಕ್ತಿಯನ್ನು ನೋಡಿ ತಗುಲುವುದಿಲ್ಲ. ಯಾರಿಗೆ ಬೇಕಾದರೂ ಸೋಂಕು ತಗುಲಬಹುದು. ಈ ಸಾಂಕ್ರಾಮಿಕ ರೋಗಕ್ಕೆ ಇನ್ನೂ ಔಷಧ ಇಲ್ಲ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಬಿ.ಎಸ್.ರೇಖಾ ಹೇಳಿದರು.

ಕೊರೊನಾ ಜಾಗೃತಿ ಜಾಥಾಗೆ ಚಾಲನೆ

ಕುಷ್ಟಗಿಯಲ್ಲಿ ಜಾಗೃತಿ ಆಂದೋಲನ:

ಕುಷ್ಟಗಿಯ ನ್ಯಾಯಾಲಯದ ಆವರಣದಲ್ಲಿ ಕೋವಿಡ್ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ, ಮಾತನಾಡಿದ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಎಸ್.ಹೊನ್ನುಸ್ವಾಮಿ, ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ಸೋಪಿನಿಂದ ಕೈ ತೊಳೆಯುವುದನ್ನು ದಿನಚರಿಯಾಗಿಸಿಕೊಳ್ಳಬೇಕು ಎಂದರು.

ಕೊಪ್ಪಳ/ಕುಷ್ಟಗಿ: ನಗರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಆವರಣದಲ್ಲಿ ಕೊರೊನಾ ಜಾಗೃತಿ ಜಾಥಾಗೆ ಚಾಲನೆ ನೀಡಲಾಯಿತು.

ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರಲ್ಲಿ ಜಾಗೃತಿ ಮೂಡಬೇಕಿದೆ. ಈ ಸೋಂಕು ವ್ಯಕ್ತಿಯನ್ನು ನೋಡಿ ತಗುಲುವುದಿಲ್ಲ. ಯಾರಿಗೆ ಬೇಕಾದರೂ ಸೋಂಕು ತಗುಲಬಹುದು. ಈ ಸಾಂಕ್ರಾಮಿಕ ರೋಗಕ್ಕೆ ಇನ್ನೂ ಔಷಧ ಇಲ್ಲ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶೆ ಬಿ.ಎಸ್.ರೇಖಾ ಹೇಳಿದರು.

ಕೊರೊನಾ ಜಾಗೃತಿ ಜಾಥಾಗೆ ಚಾಲನೆ

ಕುಷ್ಟಗಿಯಲ್ಲಿ ಜಾಗೃತಿ ಆಂದೋಲನ:

ಕುಷ್ಟಗಿಯ ನ್ಯಾಯಾಲಯದ ಆವರಣದಲ್ಲಿ ಕೋವಿಡ್ ಜಾಗೃತಿ ಆಂದೋಲನಕ್ಕೆ ಚಾಲನೆ ನೀಡಲಾಯಿತು. ಈ ವೇಳೆ, ಮಾತನಾಡಿದ ಹಿರಿಯ ಶ್ರೇಣಿ ನ್ಯಾಯಾಧೀಶ ಬಿ.ಎಸ್.ಹೊನ್ನುಸ್ವಾಮಿ, ಸಾರ್ವಜನಿಕರು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಯ್ದು ಕೊಳ್ಳುವುದು, ಸೋಪಿನಿಂದ ಕೈ ತೊಳೆಯುವುದನ್ನು ದಿನಚರಿಯಾಗಿಸಿಕೊಳ್ಳಬೇಕು ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.