ಕೊಪ್ಪಳ: ಚಾಲಕನ ಅಜಾಗರೂಕತೆಯಿಂದಾಗಿ ಲಾರಿಯೊಂದು ಹೋಟೆಲ್ನೊಳಗೆ ನುಗ್ಗಿದ ಘಟನೆ ಜಿಲ್ಲೆಯ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ 50ರ ಚತುಷ್ಪತ ರಸ್ತೆಯಲ್ಲಿ ನಡೆದಿದೆ.
ಹೊಸಪೇಟೆಯಿಂದ ಇಳಕಲ್ ಮಾರ್ಗವಾಗಿ ಹೋಗುತ್ತಿದ್ದ ಲಾರಿ, ಚಾಲಕನ ಅಜಾಗರೂಕತೆಯಿಂದ ಹೋಟೆಲ್, ಪಾನ್ ಶಾಪ್ ಹಾಗೂ ದಿನಸಿ ಅಂಗಡಿಗೆ ನುಗ್ಗಿದೆ. ಪರಿಣಾಮವಾಗಿ ಈ ಮೂರು ಅಂಗಡಿಗಳು ಜಖಂಗೊಂಡಿವೆ. ದೇವರ ದಯೆ ಯಾವುದೇ ಪ್ರಾಣಹಾನಿಯಾಗಿಲ್ಲ. ಈ ಸಂಬಂಧ ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.