ಗಂಗಾವತಿ: ಸರ್ಕಾರಿ ಶಾಲೆಗಳಿಂದ ಮಕ್ಕಳು ವಿಮುಖರಾಗುತ್ತಿರುವುದನ್ನು ಮನಗಂಡ ಯುವ ಇಂಜಿನಿಯರ್ವೊಬ್ಬರು ತಾಲೂಕಿನ ನಾನಾ ಗ್ರಾಮಗಳಲ್ಲಿನ ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅವುಗಳಿಗೆ ಸುಣ್ಣ ಬಣ್ಣ ಬಳಿದು ಗಮನ ಸೆಳೆಯುತ್ತಿದ್ದಾರೆ.
ನಗರದ ಯುವ ಇಂಜಿನಿಯರ್ ಸಂಗಮೇಶ ಎಂಬುವವರು ಸುಗ್ರೀವಾ ಜನ ಸೇವಾ ಸಂಘ ಎಂಬ ಸಂಸ್ಥೆಯನ್ನು ಕಟ್ಟಿಕೊಂಡು ಸಮಾನ ಮನಸ್ಕ ಯುವಕರೊಂದಿಗೆ ಸರ್ಕಾರಿ ಶಾಲೆಗಳ ಸಬಲೀಕರಣಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಮಾತನಾಡಿದ ಸಂಗಮೇಶ, ಈ ಮೊದಲು ಬೇರೆ ಬೇರೆ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿತ್ತು. ಇದೀಗ ಮೊದಲ ಬಾರಿಗೆ ಗಂಗಾವತಿ ತಾಲೂಕಿನಲ್ಲಿ ಈ ಕೆಲಸಕ್ಕೆ ಕೈಹಾಕಿದ್ದು, ಆನೆಗೊಂದಿ ಪ್ರೌಢ ಶಾಲೆಯನ್ನು ಮೊದಲಿಗೆ ಆಯ್ದುಕೊಳ್ಳಲಾಗಿದೆ ಎಂದರು.