ETV Bharat / state

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಖದೀಮರಿಂದ ಕನ್ನ

author img

By

Published : Aug 2, 2021, 10:46 AM IST

ಕೊಪ್ಪಳದ ಕಿನ್ನಾಳ ರಸ್ತೆ ಬಳಿಯಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದಲ್ಲಿ ಕಳ್ಳತನ ನಡೆದಿದೆ.

Hemaraddy Mallamma Temple
ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಕನ್ನ

ಕೊಪ್ಪಳ: ತಡರಾತ್ರಿ ನಗರದ ಕಿನ್ನಾಳ ರಸ್ತೆ ಬಳಿಯಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ಖದೀಮರು, ದೇವರ ಮೂರ್ತಿ, ಹುಂಡಿ ಹಣ ಹಾಗೂ ಆಭರಣ ದೋಚಿ ಪರಾರಿಯಾಗಿದ್ದಾರೆ.

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಕನ್ನ

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಬೆಟ್ಟದ ಮೇಲಿದ್ದು, ರಾತ್ರಿ ವೇಳೆ ಇಲ್ಲಿ ಜನರ ಸಂಚಾರವಿರುವುದಿಲ್ಲ. ಹೀಗಾಗಿ ರಾತ್ರಿ ದೇಗುಕ್ಕೆ ನುಗ್ಗಿದ ಖದೀಮರು, ತಮ್ಮ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಬಾರದೆಂದು ಸಂಪರ್ಕ ಕಟ್ ಮಾಡಿದ್ದಾರೆ. ಬಳಿಕ ಅರ್ಧ ಕೆಜಿ ತೂಕದ ದೇವರ ಮೂರ್ತಿ, ದೇವಿಗೆ ಹಾಕಿದ್ದ 150 ಗ್ರಾಂ ಚಿನ್ನ ಹಾಗೂ ಹುಂಡಿ ಹಣಕ್ಕೆ ಕನ್ನ ಹಾಕಿದ್ದಾರೆ. ಹುಂಡಿಯಲ್ಲಿದ್ದ ಚಿಲ್ಲರೆ ಹಣ ಅಲ್ಲಿಯೇ ಬಿಟ್ಟು ನೋಟುಗಳನ್ನು ತೆಗೆದುಕೊಂಡಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ: ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್‌ ಉದ್ಯಮಿ ಅರೆಸ್ಟ್‌

ಕೊಪ್ಪಳ: ತಡರಾತ್ರಿ ನಗರದ ಕಿನ್ನಾಳ ರಸ್ತೆ ಬಳಿಯಿರುವ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ನುಗ್ಗಿದ ಖದೀಮರು, ದೇವರ ಮೂರ್ತಿ, ಹುಂಡಿ ಹಣ ಹಾಗೂ ಆಭರಣ ದೋಚಿ ಪರಾರಿಯಾಗಿದ್ದಾರೆ.

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಕನ್ನ

ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಬೆಟ್ಟದ ಮೇಲಿದ್ದು, ರಾತ್ರಿ ವೇಳೆ ಇಲ್ಲಿ ಜನರ ಸಂಚಾರವಿರುವುದಿಲ್ಲ. ಹೀಗಾಗಿ ರಾತ್ರಿ ದೇಗುಕ್ಕೆ ನುಗ್ಗಿದ ಖದೀಮರು, ತಮ್ಮ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಬಾರದೆಂದು ಸಂಪರ್ಕ ಕಟ್ ಮಾಡಿದ್ದಾರೆ. ಬಳಿಕ ಅರ್ಧ ಕೆಜಿ ತೂಕದ ದೇವರ ಮೂರ್ತಿ, ದೇವಿಗೆ ಹಾಕಿದ್ದ 150 ಗ್ರಾಂ ಚಿನ್ನ ಹಾಗೂ ಹುಂಡಿ ಹಣಕ್ಕೆ ಕನ್ನ ಹಾಕಿದ್ದಾರೆ. ಹುಂಡಿಯಲ್ಲಿದ್ದ ಚಿಲ್ಲರೆ ಹಣ ಅಲ್ಲಿಯೇ ಬಿಟ್ಟು ನೋಟುಗಳನ್ನು ತೆಗೆದುಕೊಂಡಿದ್ದಾರೆ.

ಘಟನೆ ಹಿನ್ನೆಲೆಯಲ್ಲಿ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಶ್ವಾನದಳ ಹಾಗೂ ಬೆರಳಚ್ಚು ತಜ್ಞರಿಂದ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಸೈಟ್ ಕೊಡಿಸುವುದಾಗಿ ಹಣ ಪಡೆದು ವಂಚನೆ: ಬೆಂಗಳೂರಿನಲ್ಲಿ ರಿಯಲ್ ಎಸ್ಟೇಟ್‌ ಉದ್ಯಮಿ ಅರೆಸ್ಟ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.