ETV Bharat / state

ಹನುಮ ಜಯಂತಿ.. ಅಂಜನಾದ್ರಿಗೆ ಹರಿದು ಬಂದ ಭಕ್ತ ಸಾಗರ.. - ಅಂಜನಾದ್ರಿ ಬೆಟ್ಟದಲ್ಲಿ ಹನುಮಜಯಂತಿ

ಹನುಮ ಜಯಂತಿ ಅಂಗವಾಗಿ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಶನಿವಾರ ಭಕ್ತ ಸಾಗರವೇ ಹರಿದು ಬಂದಿತ್ತು. ರಾಜ್ಯದ ವಿವಿಧ ಭಾಗಗಳಿಂದ 35 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದು, ಕೇವಲ ಕೊಪ್ಪಳ ಜಿಲ್ಲೆಯೊಂದರಿಂದಲೇ 20 ಸಾವಿರ ಹನುಮ ಮಾಲಾಧಾರಿಗಳು ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳನ್ನೂ ಪೂರೈಸಿದರು..

Hanuma Jayanti in Anjanadri hill in Koppal
ಅಂಜನಾದ್ರಿಗೆ ಹರಿದ ಬಂದ ಜನಸಾಗರ: ಕೇಂದ್ರ ಸಚಿವ ಖೂಬಾ ಭಾಗಿ
author img

By

Published : Apr 16, 2022, 2:49 PM IST

ಗಂಗಾವತಿ, ಕೊಪ್ಪಳ : ಹನುಮ ಜಯಂತಿ ಅಂಗವಾಗಿ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಶನಿವಾರ ಭಕ್ತ ಸಾಗರವೇ ಹರಿದು ಬಂದಿತ್ತು. ರಾಜ್ಯದ ನಾನಾ ಜಿಲ್ಲೆ ತಾಲೂಕಿನಿಂದ 35 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಕೇವಲ ಕೊಪ್ಪಳ ಜಿಲ್ಲೆಯೊಂದರಿಂದಲೇ 20 ಸಾವಿರ ಹನುಮಮಾಲಾಧಾರಿಗಳು ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳನ್ನೂ ಪೂರೈಸಿದರು. ಹನುಮ ಮಾಲಾಧಾರಿಗಳು ಸೇರಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಲಿದ್ದಾರೆ ಎಂದು ಜಿಲ್ಲಾಡಳಿತ ನಿರೀಕ್ಷಿಸಿತ್ತು. ಆದರೆ, ಕೇವಲ 33ರಿಂದ 35 ಸಾವಿರ ಭಕ್ತರು ಆಗಮಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ಭಗವಂತ ಖೂಬಾ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಂಚಮಸಾಲಿ ಪೀಠದ ಯೋಗಗುರು ವಚನಾನಂದ ಸ್ವಾಮೀಜಿ ಹಾಗೂ ಭವರಲಾಲ್ ಆರ್ಯ ನೆರೆದ ಭಕ್ತರಿಗೆ ಯೋಗ ಮತ್ತು ಸೂರ್ಯನಮಸ್ಕಾರ ತಿಳಿಸಿಕೊಟ್ಟರು. ಹನುಮಮಾಲೆ ಧರಿಸಿದ್ದ ಮಾಜಿ ಸಚಿವ ಶಿವರಾಜ ತಂಗಡಗಿ, ಹಾಲಿ ಶಾಸಕ ಬಸವರಾಜ ದಢೇಸ್ಗೂರು ಅಂಜನಾದ್ರಿಗೆ ಆಗಮಿಸಿ ಮಾಲಾ ವಿರಮಣ ಮಾಡಿದರು.

ಅಂಜನಾದ್ರಿಯಲ್ಲಿ ಹನುಮ ಜಯಂತಿ

ಬೆಳಗ್ಗೆ ಮೂರು ಗಂಟೆಯಿಂದಲೇ ಅರ್ಚಕ ವಿದ್ಯಾದಾಸ ಬಾಬಾ ನೇತೃತ್ವದಲ್ಲಿ ಅಂಜನಾದ್ರಿಯಲ್ಲಿ ವಿಶೇಷ ಪೂಜೆ, ಹವನ, ಪವಮಾನ ಹೋಮ ಹಮ್ಮಿಕೊಳ್ಳಲಾಗಿತ್ತು. ಶಾಸಕರಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ ಸೇರಿದಂತೆ ರಾಜಕೀಯ ನಾಯಕರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಇದನ್ನೂ ಓದಿ: ಮಾಜಿ ಸಚಿವ ಈಶ್ವರಪ್ಪ ನಿವಾಸಕ್ಕೆ ವಿವಿಧ ಮಠಾಧೀಶರು ಭೇಟಿ

ಗಂಗಾವತಿ, ಕೊಪ್ಪಳ : ಹನುಮ ಜಯಂತಿ ಅಂಗವಾಗಿ ಗಂಗಾವತಿ ತಾಲೂಕಿನ ಅಂಜನಾದ್ರಿ ಪರ್ವತಕ್ಕೆ ಶನಿವಾರ ಭಕ್ತ ಸಾಗರವೇ ಹರಿದು ಬಂದಿತ್ತು. ರಾಜ್ಯದ ನಾನಾ ಜಿಲ್ಲೆ ತಾಲೂಕಿನಿಂದ 35 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಿದ್ದರು. ಕೇವಲ ಕೊಪ್ಪಳ ಜಿಲ್ಲೆಯೊಂದರಿಂದಲೇ 20 ಸಾವಿರ ಹನುಮಮಾಲಾಧಾರಿಗಳು ಆಗಮಿಸಿ ಧಾರ್ಮಿಕ ಕಾರ್ಯಕ್ರಮಗಳನ್ನೂ ಪೂರೈಸಿದರು. ಹನುಮ ಮಾಲಾಧಾರಿಗಳು ಸೇರಿ ಸುಮಾರು 50 ಸಾವಿರಕ್ಕೂ ಹೆಚ್ಚು ಭಕ್ತರು ಆಗಮಿಸಲಿದ್ದಾರೆ ಎಂದು ಜಿಲ್ಲಾಡಳಿತ ನಿರೀಕ್ಷಿಸಿತ್ತು. ಆದರೆ, ಕೇವಲ 33ರಿಂದ 35 ಸಾವಿರ ಭಕ್ತರು ಆಗಮಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೇಂದ್ರ ಸಚಿವರಾದ ಭಗವಂತ ಖೂಬಾ ಅಂಜನಾದ್ರಿಗೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಪಂಚಮಸಾಲಿ ಪೀಠದ ಯೋಗಗುರು ವಚನಾನಂದ ಸ್ವಾಮೀಜಿ ಹಾಗೂ ಭವರಲಾಲ್ ಆರ್ಯ ನೆರೆದ ಭಕ್ತರಿಗೆ ಯೋಗ ಮತ್ತು ಸೂರ್ಯನಮಸ್ಕಾರ ತಿಳಿಸಿಕೊಟ್ಟರು. ಹನುಮಮಾಲೆ ಧರಿಸಿದ್ದ ಮಾಜಿ ಸಚಿವ ಶಿವರಾಜ ತಂಗಡಗಿ, ಹಾಲಿ ಶಾಸಕ ಬಸವರಾಜ ದಢೇಸ್ಗೂರು ಅಂಜನಾದ್ರಿಗೆ ಆಗಮಿಸಿ ಮಾಲಾ ವಿರಮಣ ಮಾಡಿದರು.

ಅಂಜನಾದ್ರಿಯಲ್ಲಿ ಹನುಮ ಜಯಂತಿ

ಬೆಳಗ್ಗೆ ಮೂರು ಗಂಟೆಯಿಂದಲೇ ಅರ್ಚಕ ವಿದ್ಯಾದಾಸ ಬಾಬಾ ನೇತೃತ್ವದಲ್ಲಿ ಅಂಜನಾದ್ರಿಯಲ್ಲಿ ವಿಶೇಷ ಪೂಜೆ, ಹವನ, ಪವಮಾನ ಹೋಮ ಹಮ್ಮಿಕೊಳ್ಳಲಾಗಿತ್ತು. ಶಾಸಕರಾದ ಅಮರೇಗೌಡ ಬಯ್ಯಾಪುರ, ಪರಣ್ಣ ಮುನವಳ್ಳಿ ಸೇರಿದಂತೆ ರಾಜಕೀಯ ನಾಯಕರು ಭೇಟಿ ನೀಡಿ ದೇವರ ದರ್ಶನ ಪಡೆದರು.

ಇದನ್ನೂ ಓದಿ: ಮಾಜಿ ಸಚಿವ ಈಶ್ವರಪ್ಪ ನಿವಾಸಕ್ಕೆ ವಿವಿಧ ಮಠಾಧೀಶರು ಭೇಟಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.