ETV Bharat / state

ಹಥ್ರಾಸ್​ ಅತ್ಯಾಚಾರ ಪ್ರಕರಣ: ತಾವರಗೇರಾದಲ್ಲಿ ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ

author img

By

Published : Oct 1, 2020, 7:45 AM IST

ತಾವರಗೇರಾ ಪಟ್ಟಣದಲ್ಲಿ ಹಥ್ರಾಸ್​ ಅತ್ಯಾಚಾರ ಪ್ರಕರಣದ ಸಂತ್ತಸ್ತೆಗೆ ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Hathras rape case; Shraddhanjali in kushtagi
ಹಥ್ರಾಸ್​ ಅತ್ಯಾಚಾರ ಪ್ರಕರಣ: ತಾವರಗೇರಾದಲ್ಲಿ ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ

ಕುಷ್ಟಗಿ(ಕೊಪ್ಪಳ): ತಾವರಗೇರಾ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಥ್ರಾಸ್​ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶ್ರೀ ಬಸವೇಶ್ವರ ವೃತ್ತದಿಂದ ನೂರಾರು ಜನರು ಮೇಣದ ಬತ್ತಿ ಹಿಡಿದುಕೊಂಡು ಮೆರವಣಿಗೆ ನಡೆಸಿದರು. ಮೆರವಣಿಗೆಯು ಮಹರ್ಷಿ ವಾಲ್ಮೀಕಿ ವೃತ್ತದ ಮೂಲಕ ಡಾ. ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ಬಂದು ತಲುಪಿತು. ನಂತರ ಉತ್ತರ ಪ್ರದೇಶದ ಕಾಮುಕರಿಂದ ಅತ್ಯಾಚಾರಕ್ಕೆ ಒಳಗಾಗಿ ಮೃತಳಾದ ಸಂತ್ರಸ್ತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು.

ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ

ಮೆರವಣಿಗೆಯುದ್ದಕ್ಕೂ ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್​​ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ, ಕಾಮುಕರಿಗೆ ಗಲ್ಲು ಶಿಕ್ಷೆ ನೀಡಬೇಕು. ದಲಿತ ವಿರೋಧಿಗಳಿಗೆ ಶಿಕ್ಷೆಯಾಗಲೇಬೇಕು ಎಂದು ಘೋಷಣೆ ಹಾಕುತ್ತಾ ನಡೆದರು. ನಂತರ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ದಲಿತ ಮುಖಂಡ ಆನಂದ ಭಂಡಾರಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜಾನಾಯಕ, ವಾಲ್ಮೀಕಿ ಸಮುದಾಯದ ಮುಖಂಡ ಶರಣಪ್ಪ ಅಂಚಿ, ವಾಲ್ಮೀಕಿ ನಾಯಕ ಸಮಾಜದ ಹೋಬಳಿ ಅಧ್ಯಕ್ಷ ವೆಂಕಟೇಶ ಗೋತಗಿ ಮಾತನಾಡಿದರು.

ಮೆರವಣಿಗೆಯಲ್ಲಿ ವಾಲ್ಮೀಕಿ ನಾಯಕ, ಸಮುದಾಯದ ತಾಲೂಕು ಉಪಾಧ್ಯಕ್ಷ ಹನುಮೇಶ ನಾಯಕ, ಮುಖಂಡರಾದ ನರಹರಿ ಬಿಳೇಗುಡ್ಡ, ರಾಘವೇಂದ್ರ ನಾಯಕ, ಅಮರೇಶ ಚಲುವಾದಿ, ಸುರೇಶ, ವಿಜಯ, ನಬಿಸಾಬ ಸೇರಿದಂತೆ ವಿವಿಧ ಸಮುದಾಯದ ಮತ್ತು ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕುಷ್ಟಗಿ(ಕೊಪ್ಪಳ): ತಾವರಗೇರಾ ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಹಥ್ರಾಸ್​ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಶ್ರೀ ಬಸವೇಶ್ವರ ವೃತ್ತದಿಂದ ನೂರಾರು ಜನರು ಮೇಣದ ಬತ್ತಿ ಹಿಡಿದುಕೊಂಡು ಮೆರವಣಿಗೆ ನಡೆಸಿದರು. ಮೆರವಣಿಗೆಯು ಮಹರ್ಷಿ ವಾಲ್ಮೀಕಿ ವೃತ್ತದ ಮೂಲಕ ಡಾ. ಬಿ.ಆರ್.ಅಂಬೇಡ್ಕರ್ ವೃತ್ತಕ್ಕೆ ಬಂದು ತಲುಪಿತು. ನಂತರ ಉತ್ತರ ಪ್ರದೇಶದ ಕಾಮುಕರಿಂದ ಅತ್ಯಾಚಾರಕ್ಕೆ ಒಳಗಾಗಿ ಮೃತಳಾದ ಸಂತ್ರಸ್ತೆ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮೊಂಬತ್ತಿ ಹಿಡಿದು ಶ್ರದ್ಧಾಂಜಲಿ ಸಲ್ಲಿಸಿದರು.

ಮೊಂಬತ್ತಿ ಬೆಳಗುವ ಮೂಲಕ ಶ್ರದ್ಧಾಂಜಲಿ

ಮೆರವಣಿಗೆಯುದ್ದಕ್ಕೂ ಉತ್ತರ ಪ್ರದೇಶ ಸಿಎಂ ಯೋಗಿ ಅದಿತ್ಯನಾಥ್​​ ಸರ್ಕಾರದ ವಿರುದ್ಧ ಧಿಕ್ಕಾರ ಹಾಕಿ, ಕಾಮುಕರಿಗೆ ಗಲ್ಲು ಶಿಕ್ಷೆ ನೀಡಬೇಕು. ದಲಿತ ವಿರೋಧಿಗಳಿಗೆ ಶಿಕ್ಷೆಯಾಗಲೇಬೇಕು ಎಂದು ಘೋಷಣೆ ಹಾಕುತ್ತಾ ನಡೆದರು. ನಂತರ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ದಲಿತ ಮುಖಂಡ ಆನಂದ ಭಂಡಾರಿ, ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾದ ರಾಜಾನಾಯಕ, ವಾಲ್ಮೀಕಿ ಸಮುದಾಯದ ಮುಖಂಡ ಶರಣಪ್ಪ ಅಂಚಿ, ವಾಲ್ಮೀಕಿ ನಾಯಕ ಸಮಾಜದ ಹೋಬಳಿ ಅಧ್ಯಕ್ಷ ವೆಂಕಟೇಶ ಗೋತಗಿ ಮಾತನಾಡಿದರು.

ಮೆರವಣಿಗೆಯಲ್ಲಿ ವಾಲ್ಮೀಕಿ ನಾಯಕ, ಸಮುದಾಯದ ತಾಲೂಕು ಉಪಾಧ್ಯಕ್ಷ ಹನುಮೇಶ ನಾಯಕ, ಮುಖಂಡರಾದ ನರಹರಿ ಬಿಳೇಗುಡ್ಡ, ರಾಘವೇಂದ್ರ ನಾಯಕ, ಅಮರೇಶ ಚಲುವಾದಿ, ಸುರೇಶ, ವಿಜಯ, ನಬಿಸಾಬ ಸೇರಿದಂತೆ ವಿವಿಧ ಸಮುದಾಯದ ಮತ್ತು ವಿವಿಧ ಸಂಘಟನೆಗಳ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.