ETV Bharat / state

ಕೊರೊನಾದಿಂದ ವ್ಯಕ್ತಿ ಸಾವು: ಶವ ಸಂಸ್ಕಾರ ಮಾಡದೆ ತೆರಳಿದ್ರಾ ಆರೋಗ್ಯ ಸಿಬ್ಬಂದಿ?

author img

By

Published : Sep 21, 2020, 2:17 PM IST

ಗಂಗಾವತಿಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದ ವ್ಯಕ್ತಿಯ ಅಂತ್ಯ ಸಂಸ್ಕಾರಕ್ಕೆ ಆರೋಗ್ಯ ಸಿಬ್ಬಂದಿ ಹಿಂದೇಟು ಹಾಕಿ ಸ್ಥಳದಿಂದ ಹೊರಟಿರುವ ಆರೋಪ ಕೇಳಿ ಬಂದಿದೆ.

dsd
ಶವಸಂಸ್ಕಾರ ಮಾಡದೇ ತೆರಳಿದ ಆರೋಗ್ಯ ಸಿಬ್ಬಂದಿ

ಗಂಗಾವತಿ: ಕೊರೊನಾ ಸೋಂಕಿನಿಂದ ಒಂದು ವಾರದಿಂದ ಹೋಂ ಐಸೋಲೇಷನ್​​ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕೊರೊನಾ ನಿಯಮಾವಳಿಯಂತೆ ಅಂತ್ಯಕ್ರಿಯೆ ಮಾಡಲು ಬಂದಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶವ ಸಂಸ್ಕಾರ ಮಾಡದೆ ತೆರಳಿದ ಘಟನೆ ಬೆಳಕಿಗೆ ಬಂದಿದೆ.

ಶವ ಸಂಸ್ಕಾರ ಮಾಡದೆ ತೆರಳಿದ ಆರೋಗ್ಯ ಸಿಬ್ಬಂದಿ?

ತಾಲೂಕಿನ ಅರಳಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ವ್ಯಕ್ತಿ ಕೋವಿಡ್​ನಿಂದ ಮೃತಪಟ್ಟಿದ್ದ. ಈ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಯಾವುದೇ ಪಿಪಿಇ ಕಿಟ್ ಧರಿಸದೆ, ಹಗ್ಗದ ಮೂಲಕ ಮೃತ ವ್ಯಕ್ತಿಯನ್ನು ಎಳೆದೊಯ್ಯಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಸಿಬ್ಬಂದಿ ತಂದಿದ್ದ ಪರಿಕರ, ಔಷಧಿಗಳನ್ನು ಸ್ಥಳದಲ್ಲಿ ಬಿಟ್ಟು ಅಗತ್ಯವಿದ್ದರೆ ನೀವೇ ಅಂತ್ಯ ಸಂಸ್ಕಾರ ಮಾಡಿಕೊಳ್ಳಿ ಎಂದು ಹೊರಟು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಸ್ಥಳೀಯರು ಆರೋಗ್ಯ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾವತಿ: ಕೊರೊನಾ ಸೋಂಕಿನಿಂದ ಒಂದು ವಾರದಿಂದ ಹೋಂ ಐಸೋಲೇಷನ್​​ನಲ್ಲಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಕೊರೊನಾ ನಿಯಮಾವಳಿಯಂತೆ ಅಂತ್ಯಕ್ರಿಯೆ ಮಾಡಲು ಬಂದಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಶವ ಸಂಸ್ಕಾರ ಮಾಡದೆ ತೆರಳಿದ ಘಟನೆ ಬೆಳಕಿಗೆ ಬಂದಿದೆ.

ಶವ ಸಂಸ್ಕಾರ ಮಾಡದೆ ತೆರಳಿದ ಆರೋಗ್ಯ ಸಿಬ್ಬಂದಿ?

ತಾಲೂಕಿನ ಅರಳಿಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, 55 ವರ್ಷದ ವ್ಯಕ್ತಿ ಕೋವಿಡ್​ನಿಂದ ಮೃತಪಟ್ಟಿದ್ದ. ಈ ಬಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಆರೋಗ್ಯ ಇಲಾಖೆಯ ಇಬ್ಬರು ಸಿಬ್ಬಂದಿ ಯಾವುದೇ ಪಿಪಿಇ ಕಿಟ್ ಧರಿಸದೆ, ಹಗ್ಗದ ಮೂಲಕ ಮೃತ ವ್ಯಕ್ತಿಯನ್ನು ಎಳೆದೊಯ್ಯಲು ಯತ್ನಿಸಿದ್ದಾರೆ ಎನ್ನಲಾಗಿದೆ.

ಇದಕ್ಕೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಸಿಬ್ಬಂದಿ ತಂದಿದ್ದ ಪರಿಕರ, ಔಷಧಿಗಳನ್ನು ಸ್ಥಳದಲ್ಲಿ ಬಿಟ್ಟು ಅಗತ್ಯವಿದ್ದರೆ ನೀವೇ ಅಂತ್ಯ ಸಂಸ್ಕಾರ ಮಾಡಿಕೊಳ್ಳಿ ಎಂದು ಹೊರಟು ಹೋಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಸ್ಥಳೀಯರು ಆರೋಗ್ಯ ಸಿಬ್ಬಂದಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.