ETV Bharat / state

ಆನೆಗುಂದಿ ಉತ್ಸವಕ್ಕೆ ಚಾಲನೆ: ಐತಿಹಾಸಿಕ ತಾಣಗಳಿಗೆ ಧಕ್ಕೆ ಮಾಡಿದರೆ ತಕ್ಕ ಶಾಸ್ತಿ: ಡಿಸಿಎಂ

author img

By

Published : Jan 10, 2020, 6:23 AM IST

ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು 'ಐತಿಹಾಸಿಕ ತಾಣವಾಗಿರುವ ಆನೆಗುಂದಿಯ ಇತಿಹಾಸವನ್ನು ಕೆಲ ಕಿಡಿಗೇಡಿಗಳು ಹಾಳು ಮಾಡುತ್ತಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಅಂತಹ ಕಿಡಿಗೇಡಿಗಳಿಗೆ ಸಾರ್ವಜನಿಕರು ಸಹ ಪಾಠ ಕಲಿಸುವ ಮೂಲಕ ಇತಿಹಾಸವನ್ನು ಉಳಿಸುವ ಕೆಲಸ ಮಾಡಬೇಕು' ಎಂದರು.

anegundhi Festival
ಐತಿಹಾಸಿಕ ಆನೆಗುಂದಿ ಉತ್ಸವ

ಕೊಪ್ಪಳ: ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಉಪಮುಖ್ಯಮಂತ್ರಿ/ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಚಾಲನೆ ನೀಡಿದರು.

ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರು ದೀಪ ಬೆಳಗಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ನಡೆದ ಉತ್ಸವದಲ್ಲಿ ಪಾಲ್ಗೊಂಡಿದ್ದೆ. ಈಗ ಡಿಸಿಎಂ ಆಗಿ ಎರಡನೇ ಬಾರಿ ಉತ್ಸವದಲ್ಲಿ ಭಾಗವಹಿಸಿರೋದು ನನ್ನ ಸೌಭಾಗ್ಯ ಎಂದರು.

ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಚಾಲನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ

ಐತಿಹಾಸಿಕ ತಾಣವಾಗಿರುವ ಆನೆಗುಂದಿಯ ಇತಿಹಾಸವನ್ನು ಕೆಲ ಕಿಡಿಗೇಡಿಗಳು ಹಾಳು ಮಾಡುತ್ತಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಅಂತಹ ಕಿಡಿಗೇಡಿಗಳಿಗೆ ಸಾರ್ವಜನಿಕರು ಸಹ ಪಾಠ ಕಲಿಸುವ ಮೂಲಕ ಇತಿಹಾಸವನ್ನು ಉಳಿಸುವ ಕೆಲಸ ಮಾಡಬೇಕು. ಈ ಭಾಗದ ಎಲ್ಲ ಐತಿಹಾಸಿಕ ಪ್ರದೇಶಗಳಿಗೆ ದೇಶದ ಪ್ರವಾಸಿಗರು ಬರುವಂತೆ ಮಾಡುವ ಜವಾಬ್ದಾರಿಯನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರ ಹೆಗಲಿಗೆ ಹಾಕುತ್ತೇನೆ ಎಂದರು.

ಸಚಿವ ಸಿ.ಟಿ. ರವಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ರಾಜವಂಶಸ್ಥ ಶ್ರೀರಂಗದೇವರಾಯಲು, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

ಕೊಪ್ಪಳ: ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಉಪಮುಖ್ಯಮಂತ್ರಿ/ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಅವರು ಚಾಲನೆ ನೀಡಿದರು.

ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರು ದೀಪ ಬೆಳಗಿಸುವ ಮೂಲಕ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ನಡೆದ ಉತ್ಸವದಲ್ಲಿ ಪಾಲ್ಗೊಂಡಿದ್ದೆ. ಈಗ ಡಿಸಿಎಂ ಆಗಿ ಎರಡನೇ ಬಾರಿ ಉತ್ಸವದಲ್ಲಿ ಭಾಗವಹಿಸಿರೋದು ನನ್ನ ಸೌಭಾಗ್ಯ ಎಂದರು.

ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಚಾಲನೆ ನೀಡಿದ ಡಿಸಿಎಂ ಲಕ್ಷ್ಮಣ ಸವದಿ

ಐತಿಹಾಸಿಕ ತಾಣವಾಗಿರುವ ಆನೆಗುಂದಿಯ ಇತಿಹಾಸವನ್ನು ಕೆಲ ಕಿಡಿಗೇಡಿಗಳು ಹಾಳು ಮಾಡುತ್ತಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಅಂತಹ ಕಿಡಿಗೇಡಿಗಳಿಗೆ ಸಾರ್ವಜನಿಕರು ಸಹ ಪಾಠ ಕಲಿಸುವ ಮೂಲಕ ಇತಿಹಾಸವನ್ನು ಉಳಿಸುವ ಕೆಲಸ ಮಾಡಬೇಕು. ಈ ಭಾಗದ ಎಲ್ಲ ಐತಿಹಾಸಿಕ ಪ್ರದೇಶಗಳಿಗೆ ದೇಶದ ಪ್ರವಾಸಿಗರು ಬರುವಂತೆ ಮಾಡುವ ಜವಾಬ್ದಾರಿಯನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರ ಹೆಗಲಿಗೆ ಹಾಕುತ್ತೇನೆ ಎಂದರು.

ಸಚಿವ ಸಿ.ಟಿ. ರವಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ರಾಜವಂಶಸ್ಥ ಶ್ರೀರಂಗದೇವರಾಯಲು, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Intro:


Body:ಕೊಪ್ಪಳ:- ಐತಿಹಾಸಿಕ ಆನೆಗುಂದಿ ಉತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ಚಾಲನೆ ನೀಡಿದರು. ಝಗಮಗಿಸುವ ಭವ್ಯವಾದ ಶ್ರೀ ಕೃಷ್ಣದೇವರಾಯ ವೇದಿಕೆಯಲ್ಲಿ ಸಿಎಂ ಯಡಿಯೂರಪ್ಪ ಅವರ ಅನುಪಸ್ಥಿತಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಅವರು ದೀಪ ಬೆಳಗಿಸುವ ಮೂಲಕ ಅದ್ದೂರಿ ಉತ್ಸವಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಡಿಸಿಎಂ ಲಕ್ಷ್ಮಣ ಸವದಿ, ಐತಿಹಾಸಿಕ ಆನೆಗುಂದಿ ಉತ್ಸವದಲ್ಲಿ ನಾನು ಎರಡನೇ ಬಾರಿ ಭಾಗವಹಿಸುತ್ತಿದ್ದೇನೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದಾಗ ನಡೆದ ಉತ್ಸವದಲ್ಲಿ ಪಾಲ್ಗೊಂಡಿದ್ದೆ ಈಗ ಡಿಸಿಎಂ ಆಗಿ ಎರಡನೇ ಬಾರಿ ಉತ್ಸವದಲ್ಲಿ ಭಾಗವಹಿಸಿರೋದು ನನ್ನ ಸೌಭಾಗ್ಯ ಎಂದರು. ಆನೆಗುಂದಿ ವಿಜಯನಗರ ಸಾಮ್ರಾಜ್ಯ ಮೊದಲ ರಾಜಧಾನಿ. ಭವ್ಯ ಪರಂಪರೆ ಇತಿಹಾಸವನ್ನು ಹೊಂದಿದೆ. ಇತಿಹಾಸವನ್ನು ಮುಂದಿನ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ಕೆಲಸ ಮಾಡುವ ಜವಾಬ್ದಾರಿ ನಮ್ಮ ಸರ್ಕಾರದ‌ ಮೇಲೆ ಇದೆ. ಅದರಂತೆ ನಮ್ಮ ಸರ್ಕಾರವೂ ಸಹ ಆ ಕೆಲಸ ಮಾಡುತ್ತಿದೆ. ಐತಿಹಾಸಿಕ ತಾಣವಾಗಿರುವ ಆನೆಗುಂದಿಯ ಇತಿಹಾಸವನ್ನು ಕೆಲ ಕಿಡಿಗೇಡಿಗಳು ಹಾಳು ಮಾಡುತ್ತಿರುವ ಬಗ್ಗೆ ತಿಳಿದುಕೊಂಡಿದ್ದೇನೆ. ಅಂತಹ ಕಿಡಿಗೇಡಿಗಳಿಗೆ ಸಾರ್ವಜನಿಕರು ಸಹ ಪಾಠ ಕಲಿಸುವ ಮೂಲಕ ಇತಿಹಾಸವನ್ನು ಉಳಿಸುವ ಕೆಲಸ ಮಾಡಬೇಕು. ಈ ಭಾಗದ ಎಲ್ಲ ಐತಿಹಾಸಿಕ ಪ್ರದೇಶಗಳಿಗೆ ದೇಶದ ಪ್ರವಾಸಿಗರು ಇತ್ತ ಬರುವಂತೆ ಮಾಡುವ ಜವಾಬ್ದಾರಿಯನ್ನು ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ ಅವರ ಹೆಗಲಿಗೆ ಹಾಕುತ್ತೇನೆ ಎಂದು ಹೇಳಿದರು. ಸಚಿವ ಸಿ.ಟಿ. ರವಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಅಮರೇಗೌಡ ಪಾಟೀಲ್ ಭಯ್ಯಾಪುರ, ಬಸವರಾಜ ದಡೇಸೂಗೂರು, ಮಾಜಿ ಸಚಿವ ಹಾಗೂ ರಾಜವಂಶಸ್ಥ ಶ್ರೀರಂಗದೇವರಾಯಲು, ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಸಂಗೀತಾ ಸೇರಿದಂತೆ ಮೊದಲಾದ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬೈಟ್1:- ಲಕ್ಷ್ಮಣ ಸವದಿ, ಡಿಸಿಎಂ


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.