ETV Bharat / state

ಅಕ್ರಮ ರೆಸಾರ್ಟ್: ಕ್ರಮ ಜರುಗಿಸಲು ಗಂಗಾವತಿ ತಹಶೀಲ್ದಾರ್​​ಗೆ 48 ಗಂಟೆ ಗಡುವು

author img

By

Published : Dec 29, 2021, 9:17 AM IST

ಅನಧಿಕೃತವಾಗಿ ತಲೆಯೆತ್ತಿರುವ ರೆಸಾರ್ಟ್​ಗಳ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳದೇ ಹೋದಲ್ಲಿ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗೆ ಶಿಫಾರಸು ಮಾಡುವುದಾಗಿ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಗಂಗಾವತಿ ತಹಶೀಲ್ದಾರ್ ನಾಗರಾಜ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಗಂಗಾವತಿ: ತಾಲೂಕಿನ ಆನೆಗುಂದಿ ಹೋಬಳಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ರೆಸಾರ್ಟ್​ಗಳ ಮೇಲೆ ನಿಯಮಾನುಸಾರ 48 ಗಂಟೆಯೊಳಗೆ ಕ್ರಮ‌ ಕೈಗೊಂಡು, ವರದಿ ನೀಡುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಗಂಗಾವತಿ ತಹಶೀಲ್ದಾರ್‌ಗೆ ಗಡುವು ನೀಡಿದ್ದಾರೆ.

ಸೂಚನಾ ಪತ್ರ
ಸೂಚನಾ ಪತ್ರ

ಈ ಬಗ್ಗೆ ತಹಶೀಲ್ದಾರ್​​ಗೆ ಪತ್ರ ಬರೆದಿರುವ ಜಿಲ್ಲಾಧಿಕಾರಿ, ಮೂರು ತಿಂಗಳ ಹಿಂದೆಯೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಪಟ್ಟಾಭೂಮಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ರೆಸಾರ್ಟ್​ಗಳ ವಿದ್ಯುತ್ ಸಂಪರ್ಕ ಕಡಿತ ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸೂಚನಾ ಪತ್ರ
ಸೂಚನಾ ಪತ್ರ

ನಿಗಧಿತ ಅವಧಿಯೊಳಗೆ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗೆ ಶಿಫಾರಸು ಮಾಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

ಗಂಗಾವತಿ: ತಾಲೂಕಿನ ಆನೆಗುಂದಿ ಹೋಬಳಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿರುವ ರೆಸಾರ್ಟ್​ಗಳ ಮೇಲೆ ನಿಯಮಾನುಸಾರ 48 ಗಂಟೆಯೊಳಗೆ ಕ್ರಮ‌ ಕೈಗೊಂಡು, ವರದಿ ನೀಡುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ಗಂಗಾವತಿ ತಹಶೀಲ್ದಾರ್‌ಗೆ ಗಡುವು ನೀಡಿದ್ದಾರೆ.

ಸೂಚನಾ ಪತ್ರ
ಸೂಚನಾ ಪತ್ರ

ಈ ಬಗ್ಗೆ ತಹಶೀಲ್ದಾರ್​​ಗೆ ಪತ್ರ ಬರೆದಿರುವ ಜಿಲ್ಲಾಧಿಕಾರಿ, ಮೂರು ತಿಂಗಳ ಹಿಂದೆಯೇ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದರೂ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು. ಪಟ್ಟಾಭೂಮಿಯಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ರೆಸಾರ್ಟ್​ಗಳ ವಿದ್ಯುತ್ ಸಂಪರ್ಕ ಕಡಿತ ಸೇರಿದಂತೆ ಇನ್ನಿತರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಸೂಚನಾ ಪತ್ರ
ಸೂಚನಾ ಪತ್ರ

ನಿಗಧಿತ ಅವಧಿಯೊಳಗೆ ಯಾವುದೇ ಕ್ರಮ ಕೈಗೊಳ್ಳದೇ ಹೋದಲ್ಲಿ ನಿಮ್ಮ ವಿರುದ್ಧ ಶಿಸ್ತು ಕ್ರಮಕ್ಕೆ ಮೇಲಧಿಕಾರಿಗೆ ಶಿಫಾರಸು ಮಾಡುವುದಾಗಿ ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.