ETV Bharat / state

ಸಾಮಾಜಿಕ ಅರಣ್ಯ ಯೋಜನೆ ಹಾಗೂ ನರೇಗಾದಡಿ ಕೈಗೊಂಡ ಕಾಮಗಾರಿ ಬಗ್ಗೆ ತನಿಖೆಗೆ ಆಗ್ರಹ - ಕೊಪ್ಪಳ ಸುದ್ದಿ

ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇಲ್ಲಿ ಭ್ರಷ್ಟಾಚಾರ ನಡೆದಿರುವ ಅನುಮಾನ ವ್ಯಕ್ತವಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರನ್ನು ಆಗ್ರಹಿಸಿದ್ದಾರೆ.

ಸಾಮಾಜಿಕ ಅರಣ್ಯ ಯೋಜನೆ ಹಾಗೂ ನರೇಗಾದಡಿ ಕೈಗೊಂಡ ಕಾಮಗಾರಿ ಬಗ್ಗೆ ತನಿಖೆಗೆ ಆಗ್ರಹ
ಸಾಮಾಜಿಕ ಅರಣ್ಯ ಯೋಜನೆ ಹಾಗೂ ನರೇಗಾದಡಿ ಕೈಗೊಂಡ ಕಾಮಗಾರಿ ಬಗ್ಗೆ ತನಿಖೆಗೆ ಆಗ್ರಹ
author img

By

Published : Sep 9, 2020, 5:30 PM IST

ಕೊಪ್ಪಳ: ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯ ಯೋಜನೆಯಲ್ಲಿ ಹಾಗೂ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದ್ದು ತನಿಖೆ ನಡೆಸುವಂತೆ ಸರ್. ಜಗದೀಶ್ ಚಂದ್ರ ಬೋಸ್ ಅರಣ್ಯ ಇಲಾಖೆ ದಿನಗೂಲಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ತಳಕಲ್ ಆಗ್ರಹಿಸಿದ್ದಾರೆ.

ಜಗದೀಶ್ ಚಂದ್ರ ಬೋಸ್ ಅರಣ್ಯ ಇಲಾಖೆ ದಿನಗೂಲಿ ಕಾರ್ಮಿಕರ ಸಂಘ ಸುದ್ದಿಗೋಷ್ಠಿ

ನಗರದ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗದಲ್ಲಿ ನೆಡುತೋಪು ಕಾವಲುಗಾರರಿಗೆ ಈ ಹಿಂದಿನಂತೆ ಇಲಾಖೆಯ ಅನುದಾನದಲ್ಲಿ ವೇತನ ನೀಡಬೇಕು ಎಂದು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಮುಂದೆ ಕಳೆದ‌ ಮೂರು ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದೇವೆ.

ಕೋವಿಡ್ -19 ಕಾರಣ ನೀಡಿ ಅನುದಾನವಿಲ್ಲವೆಂದು ಮೇ ತಿಂಗಳಿನಿಂದ ನರೇಗಾ ಯೋಜನೆಯಡಿಯಲ್ಲಿ ವೇತನ ನೀಡುತ್ತಿದ್ದಾರೆ. ಆದರೆ, ಸಾಮಾಜಿಕ ಅರಣ್ಯ ಯೋಜನೆಯ ಕಾಮಗಾರಿಗಳ ನಿರ್ವಹಣೆ ಹಾಗೂ ಮಾಲಿಗಳ ವೇತನಕ್ಕೆ 1 ಮತ್ತು 2 ನೇ ಕಂತಿನಲ್ಲಿ ಒಟ್ಟು 119.68 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇಲ್ಲಿ ಭ್ರಷ್ಟಾಚಾರ ನಡೆದಿರುವ ಅನುಮಾನ ವ್ಯಕ್ತವಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರನ್ನು ಆಗ್ರಹಿಸಿದ್ದಾರೆ.

ಕೊಪ್ಪಳ: ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯ ಯೋಜನೆಯಲ್ಲಿ ಹಾಗೂ ನರೇಗಾ ಯೋಜನೆಯಡಿ ಕೈಗೊಂಡ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದ್ದು ತನಿಖೆ ನಡೆಸುವಂತೆ ಸರ್. ಜಗದೀಶ್ ಚಂದ್ರ ಬೋಸ್ ಅರಣ್ಯ ಇಲಾಖೆ ದಿನಗೂಲಿ ಕಾರ್ಮಿಕರ ಸಂಘದ ಜಿಲ್ಲಾಧ್ಯಕ್ಷ ರಮೇಶ್ ತಳಕಲ್ ಆಗ್ರಹಿಸಿದ್ದಾರೆ.

ಜಗದೀಶ್ ಚಂದ್ರ ಬೋಸ್ ಅರಣ್ಯ ಇಲಾಖೆ ದಿನಗೂಲಿ ಕಾರ್ಮಿಕರ ಸಂಘ ಸುದ್ದಿಗೋಷ್ಠಿ

ನಗರದ ಮೀಡಿಯಾ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗದಲ್ಲಿ ನೆಡುತೋಪು ಕಾವಲುಗಾರರಿಗೆ ಈ ಹಿಂದಿನಂತೆ ಇಲಾಖೆಯ ಅನುದಾನದಲ್ಲಿ ವೇತನ ನೀಡಬೇಕು ಎಂದು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಡಳಿತ ಭವನದ ಮುಂದೆ ಕಳೆದ‌ ಮೂರು ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದೇವೆ.

ಕೋವಿಡ್ -19 ಕಾರಣ ನೀಡಿ ಅನುದಾನವಿಲ್ಲವೆಂದು ಮೇ ತಿಂಗಳಿನಿಂದ ನರೇಗಾ ಯೋಜನೆಯಡಿಯಲ್ಲಿ ವೇತನ ನೀಡುತ್ತಿದ್ದಾರೆ. ಆದರೆ, ಸಾಮಾಜಿಕ ಅರಣ್ಯ ಯೋಜನೆಯ ಕಾಮಗಾರಿಗಳ ನಿರ್ವಹಣೆ ಹಾಗೂ ಮಾಲಿಗಳ ವೇತನಕ್ಕೆ 1 ಮತ್ತು 2 ನೇ ಕಂತಿನಲ್ಲಿ ಒಟ್ಟು 119.68 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳನ್ನು ಕೇಳಿದರೆ ತಪ್ಪು ಮಾಹಿತಿ ನೀಡುತ್ತಿದ್ದಾರೆ. ಇಲ್ಲಿ ಭ್ರಷ್ಟಾಚಾರ ನಡೆದಿರುವ ಅನುಮಾನ ವ್ಯಕ್ತವಾಗುತ್ತಿದ್ದು ಈ ಬಗ್ಗೆ ಪರಿಶೀಲನೆಗೆ ತಂಡ ರಚಿಸಿ ತನಿಖೆ ನಡೆಸಬೇಕು ಎಂದು ಜಿಲ್ಲಾ ಪಂಚಾಯತ್ ಸಿಇಓ ಅವರನ್ನು ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.