ETV Bharat / state

ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳಿಗೆ ಧೈರ್ಯ ತುಂಬಿದ ಸಚಿವ ಆಚಾರ್

author img

By

Published : Jul 24, 2022, 1:03 PM IST

ಸಚಿವ ಹಾಲಪ್ಪ ಆಚಾರ್ ಅವರು ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ನಡೆದ ಭೀಕರ ಅಪಘಾತದಲ್ಲಿ ಗಾಯಗೊಂಡು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಲ್ವರ ಆರೋಗ್ಯ ವಿಚಾರಿಸಿ, ಸಾಂತ್ವನ ಹೇಳಿದರು.

Minister Halappa Achar
ಸಚಿವ ಹಾಲಪ್ಪ ಆಚಾರ್

ಕೊಪ್ಪಳ: ಜಿಲ್ಲೆಯ ಭಾನಾಪುರ ಬಳಿ ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಚಿವ ಹಾಲಪ್ಪ ಆಚಾರ್​ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.

ಬಳಿಕ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಸ್ತೆಯಲ್ಲಿ ಸಂಚರಿಸುವಾಗ ಜಾಗೃತರಾಗಿರಬೇಕು. ಇಂತಹ ಘಟನೆಗಳು ನಡೆಯಬಾರದು, ಈ ವರ್ಷದಲ್ಲಿ ನನ್ನ ಕ್ಷೇತ್ರದಲ್ಲಿ ರೀತಿಯ ದುರ್ಘಟನೆಗಳು ನಡೆದಿರಲಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜೊತೆಗೆ ಘಟನೆಗೆ ಕಾರಣವಾದ ಇನ್ನೊಂದು ವಾಹನದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು" ಎಂದರು.

ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಹಾಲಪ್ಪ ಆಚಾರ್

ಇದೇ ಸಂದರ್ಭದಲ್ಲಿ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿ ಸಾಂತ್ವನ ಹೇಳಿದರು.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಸ್ಕಾರ್ಪಿಯೋದಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಕೊಪ್ಪಳ: ಜಿಲ್ಲೆಯ ಭಾನಾಪುರ ಬಳಿ ನಿನ್ನೆ ತಡರಾತ್ರಿ ನಡೆದ ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಸಚಿವ ಹಾಲಪ್ಪ ಆಚಾರ್​ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿ ಧೈರ್ಯ ಹೇಳಿದರು.

ಬಳಿಕ ಘಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "ರಸ್ತೆಯಲ್ಲಿ ಸಂಚರಿಸುವಾಗ ಜಾಗೃತರಾಗಿರಬೇಕು. ಇಂತಹ ಘಟನೆಗಳು ನಡೆಯಬಾರದು, ಈ ವರ್ಷದಲ್ಲಿ ನನ್ನ ಕ್ಷೇತ್ರದಲ್ಲಿ ರೀತಿಯ ದುರ್ಘಟನೆಗಳು ನಡೆದಿರಲಿಲ್ಲ. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು. ಜೊತೆಗೆ ಘಟನೆಗೆ ಕಾರಣವಾದ ಇನ್ನೊಂದು ವಾಹನದ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು" ಎಂದರು.

ಕೊಪ್ಪಳ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಹಾಲಪ್ಪ ಆಚಾರ್

ಇದೇ ಸಂದರ್ಭದಲ್ಲಿ ಕೊಪ್ಪಳ ಗವಿಮಠದ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ಸ್ಥಿತಿ ವಿಚಾರಿಸಿ ಸಾಂತ್ವನ ಹೇಳಿದರು.

ಇದನ್ನೂ ಓದಿ: ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ: ಸ್ಕಾರ್ಪಿಯೋದಲ್ಲಿದ್ದ ಐವರು ಸ್ಥಳದಲ್ಲೇ ಸಾವು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.