ETV Bharat / state

ರಂಗೇರಿದ ಲೋಕಸಭಾ ಸಮರ: ಕೊಪ್ಪಳದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ಕೈ ನಾಯಕರು - undefined

ಕೊಪ್ಪಳ‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಬಂದು ಇಂದು ನಾಮಪತ್ರ ಸಲ್ಲಿಸಿದರು. ಬಳಿಕ ನಡೆದ ಸಮಾವೇಶದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಕೊಪ್ಪಳದಲ್ಲಿ ಕಾಂಗ್ರೆಸ್​ ಮುಖಂಡರ ಬೃಹತ್ ಸಮಾವೇಶ ಹಾಗೂ ಮೆರವಣಿಗೆ
author img

By

Published : Apr 4, 2019, 10:02 PM IST

ಕೊಪ್ಪಳ: ಕೊಪ್ಪಳ ಲೋಕಸಭಾ ಚುನಾವಣೆ ರಂಗು ಪಡೆದುಕೊಂಡಿದ್ದು, ನಗರದಲ್ಲಿ ಬೃಹತ್ ಸಮಾವೇಶ ಹಾಗೂ ಮೆರವಣಿಗೆ ನಡೆಸುವ ಮೂಲಕ ಕಾಂಗ್ರೆಸ್ ಅಬ್ಬರಿಸಿದೆ.

ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದ ಬಳಿಕ ಬೃಹತ್ ಸಮಾವೇಶ ನಡೆಸಿದರು.‌ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ರಣಕಹಳೆ ಊದಿದರು.

ತಮ್ಮ ಭಾಷಣದುದ್ದಕ್ಕೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕಳೆದ ಬಾರಿ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಮೋದಿ ಈಡೇರಿಸಿಲ್ಲ. ಅವರ ಸಾಧನೆ ಎರಡೇ, ಒಂದು ಮನ್ ಕಿ ಬಾತ್ ಹಾಗೂ ಮತ್ತೊಂದು ವಿದೇಶಿ ಪ್ರವಾಸ. ಪ್ರತಿಯೊಬ್ಬರಿಗೂ 15 ಲಕ್ಷ ರೂಪಾಯಿ ಅಕೌಂಟ್​ಗೆ ಹಾಕ್ತಿನಿ ಎಂದು‌ ಹೇಳಿದ್ದರು.‌ 15 ಪೈಸಾ ಕೂಡ ಹಾಕಿಲ್ಲ, ಉದ್ಯೋಗ ಸೃಷ್ಠಿಸದ್ದಕ್ಕೆ ನಿರುದ್ಯೋಗ ತಾಂಡವವಾಡುತ್ತಿದೆ. ರೈತರಿಗೆ ಏನು ಯೋಜನೆ ಮಾಡಿದ್ದೀರಿ? ರೈತರ ಸಾಲ‌ಮನ್ನಾ ಮಾಡಿ ಎಂದು ನಾನು ಸಿಎಂ ಆಗಿದ್ದಾಗ ಪ್ರಧಾನಿ ಬಳಿ ಹೋಗಿ ಕೈಮುಗಿದು ಕೇಳಿದ್ದೆ. ಆದರೆ ಸಾಲಮನ್ನಾ ಮಾಡೋಕೆ ಆಗೋದಿಲ್ಲ ಎಂದು ಹೇಳಿದ್ದರು ಎಂದು ಹರಿಹಾಯ್ದರು.

ಕೊಪ್ಪಳದಲ್ಲಿ ಕಾಂಗ್ರೆಸ್​ ಮುಖಂಡರ ಬೃಹತ್ ಸಮಾವೇಶ ಹಾಗೂ ಮೆರವಣಿಗೆ

ಇಂದು ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ರೈತರ 2 ಲಕ್ಷದವರೆಗಿನ ಸಾಲ‌ ಮನ್ನಾ ಮಾಡುತ್ತಿದ್ದಾರೆ. ಮಹಾನ್ ಸುಳ್ಳುಗಾರನಾಗಿರುವ ಮೋದಿ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕು. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಅವರಿಗೆ ಮತ‌ ನೀಡಿ ಗೆಲ್ಲಿಸುವಂತೆ ಇದೇ ಸಂದರ್ಭದಲ್ಲಿ‌ ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.‌ ಪಾಟೀಲ್, ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವರಾದ ಶಿವರಾಜ್​ ತಂಗಡಗಿ, ಬಸವರಾಜ ರಾಯರೆಡ್ಡಿ, ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಸೇರಿದಂತೆ ಮೊದಲಾದವರು ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವೇದಿಕೆ ಕಾರ್ಯಕ್ರಮಕ್ಕೂ‌‌ ಮೊದಲು ನಗರದ ಸಿರಸಪ್ಪಯ್ಯಸ್ವಾಮಿ ಮಠದಿಂದ ಸಾರ್ವಜನಿಕ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು.

ಕೊಪ್ಪಳ: ಕೊಪ್ಪಳ ಲೋಕಸಭಾ ಚುನಾವಣೆ ರಂಗು ಪಡೆದುಕೊಂಡಿದ್ದು, ನಗರದಲ್ಲಿ ಬೃಹತ್ ಸಮಾವೇಶ ಹಾಗೂ ಮೆರವಣಿಗೆ ನಡೆಸುವ ಮೂಲಕ ಕಾಂಗ್ರೆಸ್ ಅಬ್ಬರಿಸಿದೆ.

ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದ ಬಳಿಕ ಬೃಹತ್ ಸಮಾವೇಶ ನಡೆಸಿದರು.‌ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ರಣಕಹಳೆ ಊದಿದರು.

ತಮ್ಮ ಭಾಷಣದುದ್ದಕ್ಕೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕಳೆದ ಬಾರಿ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಮೋದಿ ಈಡೇರಿಸಿಲ್ಲ. ಅವರ ಸಾಧನೆ ಎರಡೇ, ಒಂದು ಮನ್ ಕಿ ಬಾತ್ ಹಾಗೂ ಮತ್ತೊಂದು ವಿದೇಶಿ ಪ್ರವಾಸ. ಪ್ರತಿಯೊಬ್ಬರಿಗೂ 15 ಲಕ್ಷ ರೂಪಾಯಿ ಅಕೌಂಟ್​ಗೆ ಹಾಕ್ತಿನಿ ಎಂದು‌ ಹೇಳಿದ್ದರು.‌ 15 ಪೈಸಾ ಕೂಡ ಹಾಕಿಲ್ಲ, ಉದ್ಯೋಗ ಸೃಷ್ಠಿಸದ್ದಕ್ಕೆ ನಿರುದ್ಯೋಗ ತಾಂಡವವಾಡುತ್ತಿದೆ. ರೈತರಿಗೆ ಏನು ಯೋಜನೆ ಮಾಡಿದ್ದೀರಿ? ರೈತರ ಸಾಲ‌ಮನ್ನಾ ಮಾಡಿ ಎಂದು ನಾನು ಸಿಎಂ ಆಗಿದ್ದಾಗ ಪ್ರಧಾನಿ ಬಳಿ ಹೋಗಿ ಕೈಮುಗಿದು ಕೇಳಿದ್ದೆ. ಆದರೆ ಸಾಲಮನ್ನಾ ಮಾಡೋಕೆ ಆಗೋದಿಲ್ಲ ಎಂದು ಹೇಳಿದ್ದರು ಎಂದು ಹರಿಹಾಯ್ದರು.

ಕೊಪ್ಪಳದಲ್ಲಿ ಕಾಂಗ್ರೆಸ್​ ಮುಖಂಡರ ಬೃಹತ್ ಸಮಾವೇಶ ಹಾಗೂ ಮೆರವಣಿಗೆ

ಇಂದು ಸಮ್ಮಿಶ್ರ ಸರ್ಕಾರದಲ್ಲಿ ಸಿಎಂ ಕುಮಾರಸ್ವಾಮಿ ರೈತರ 2 ಲಕ್ಷದವರೆಗಿನ ಸಾಲ‌ ಮನ್ನಾ ಮಾಡುತ್ತಿದ್ದಾರೆ. ಮಹಾನ್ ಸುಳ್ಳುಗಾರನಾಗಿರುವ ಮೋದಿ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕು. ಕೊಪ್ಪಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಅವರಿಗೆ ಮತ‌ ನೀಡಿ ಗೆಲ್ಲಿಸುವಂತೆ ಇದೇ ಸಂದರ್ಭದಲ್ಲಿ‌ ಮನವಿ ಮಾಡಿದರು.

ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಹೆಚ್.ಕೆ.‌ ಪಾಟೀಲ್, ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವರಾದ ಶಿವರಾಜ್​ ತಂಗಡಗಿ, ಬಸವರಾಜ ರಾಯರೆಡ್ಡಿ, ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಸೇರಿದಂತೆ ಮೊದಲಾದವರು ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವೇದಿಕೆ ಕಾರ್ಯಕ್ರಮಕ್ಕೂ‌‌ ಮೊದಲು ನಗರದ ಸಿರಸಪ್ಪಯ್ಯಸ್ವಾಮಿ ಮಠದಿಂದ ಸಾರ್ವಜನಿಕ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಸಲಾಯಿತು.

Intro:


Body:ಕೊಪ್ಪಳ:- ಕೊಪ್ಪಳ ಲೋಕಸಭಾ ಚುನಾವಣೆ ರಂಗು ಪಡೆದುಕೊಂಡಿದ್ದು ಕಾಂಗ್ರೆಸ್ ಇಂದು ರಣಕಹಳೆ ಊದಿದೆ. ನಗರದಲ್ಲಿ ಬೃಹತ್ ಸಮಾವೇಶ ಹಾಗೂ ಮೆರವಣಿಗೆ ನಡೆಸುವ ಮೂಲಕ ಕಾಂಗ್ರೆಸ್ ಅಬ್ಬರಿಸಿದೆ. ಸಿದ್ಧರಾಮಯ್ಯ ಸೇರಿದಂತೆ ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಮುಗಿಬಿದ್ದು ವಾಗ್ದಾಳಿ‌‌ ನಡೆಸಿದರು. ಕೊಪ್ಪಳ‌ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ನಾಮಪತ್ರ ಸಲ್ಲಿಸಿದ ಬಳಿಕ ಬೃಹತ್ ಸಮಾವೇಶ ನಡೆಸಿದರು.‌ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಅವರು, ನರೇಂದ್ರ ಮೋದಿ ಸೇರಿದಂತೆ ಬಿಜೆಪಿ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ರಣಕಹಳೆ ಊದಿದರು. ತಮ್ಮ ಭಾಷಣದುದ್ದಕ್ಕೂ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಕಳೆದ ಬಾರಿ ಚುನಾವಣೆಯ ಸಂದರ್ಭದಲ್ಲಿ ನೀಡಿದ್ದ ಭರವಸೆಯನ್ನು ಮೋದಿ ಈಡೇರಿಸಿಲ್ಲ. ಅವರದು ಕಾಮ್‌ಕಿ ಬಾತ್ ಇಲ್ಲ. ಮೋದಿ ಅವರ ಸಾಧನೆ ಎರಡೆ. ಒಂದು ಮನ್ ಕಿ ಬಾತ್ ಹಾಗೂ ಮತ್ತೊಂದು ವಿದೇಶಿ ಪ್ರವಾಸ. ಪ್ರತಿಯೊಬ್ಬರಿಗೂ ೧೫ ಲಕ್ಷ‌ ರುಪಾಯಿ ಅಕೌಂಟ್ ಗೆ ಹಾಕ್ತಿನಿ ಎಂದು‌ ಹೇಳಿದ್ದರು.‌ ೧೫ ಪೈಸಾ ಕೂಡಾ ಹಾಕಿಲ್ಲ. ಉದ್ಯೋಗ ಸೃಷ್ಠಿ ಮಾಡಿಲ್ಲ. ನಿರುದ್ಯೋಗ ತಾಂಡವವಾಡುತ್ತಿದೆ. ರೈತರಿಗೆ ಏನು ಯೋಜನೆ ಮಾಡಿದ್ದೀರಿ? ರೈತರ ಸಾಲ‌ಮನ್ನಾ ಮಾಡಿ ಎಂದು ನಾನು ಸಿಎಂ ಆಗಿದ್ದಾಗ ಸರ್ವ ಪಕ್ಷದ ನಾಯಕರನ್ನು ಪ್ರಧಾನಿ ಬಳಿ ಹೋಗಿ ಕೈಮುಗಿದು ಕೇಳಿದ್ದೆ. ಆದರೆ ಸಾಲ ಮನ್ನಾ ಮಾಡೋಕೆ ಆಗೋದಿಲ್ಲ ಎಂದು ಹೇಳಿದ್ದರು. ಆ ಸಂದರ್ಭದಲ್ಲಿದ್ದ ಬಿಜೆಪಿ ನಾಯಕರು ಬಾಯಿಬಿಡಲಿಲ್ಲ ಎಂದು ಹರಿಹಾಯ್ದರು. ನಾನು ಅಂದು ಸೊಸೈಟಿ ಸಾಲ‌‌ಮನ್ನಾ ಮಾಡಿದೆ.‌ ಇಂದು ಸಮ್ಮಿಶ್ರ ಸರ್ಕಾರದ ಸಿಎಂ ಕುಮಾರಸ್ಚಾಮಿ ರೈತರ ೨ ಲಕ್ಷದವರೆಗಿನ ಸಾಲ‌ಮನ್ನಾ ಮಾಡುತ್ತಿದ್ದಾರೆ. ಮಹಾನ್ ಸುಳ್ಳುಗಾರನಾಗಿರುವ ಮೋದಿ ಹಾಗೂ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕು. ಕೊಪ್ಪಳ ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ್ ಅವರಿಗೆ ಮತ‌ ನೀಡಿ ಗೆಲ್ಲಿಸುವಂತೆ ಇದೇ ಸಂದರ್ಭದಲ್ಲಿ‌ ಮನವಿ ಮಾಡಿದರು. ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ್, ಪ್ರಚಾರ ಸಮಿತಿ ಅಧ್ಯಕ್ಷ ಎಚ್.ಕೆ.‌ಪಾಟೀಲ್, ಸಚಿವ ವೆಂಕಟರಾವ್ ನಾಡಗೌಡ, ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ, ಮಾಜಿ ಸಚಿವರಾದ ಶಿವರಾಜ ತಂಗಡಗಿ, ಬಸವರಾಜ ರಾಯರೆಡ್ಡಿ, ಶಾಸಕ ಅಮರೇಗೌಡ ಪಾಟೀಲ್ ಭಯ್ಯಾಪುರ ಸೇರಿದಂತೆ ಮೊದಲಾದವರು ಮಾತನಾಡಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ವೇದಿಕೆ ಕಾರ್ಯಕ್ರಮಕ್ಕೂ‌‌ ಮೊದಲು ನಗರದ ಸಿರಸಪ್ಪಯ್ಯಸ್ವಾಮಿ ಮಠದ ಬಳಿಯಿಂದ ಸಾರ್ವಜನಿಕ ಮೈದಾನದವರೆಗೆ ಬೃಹತ್ ಮೆರವಣಿಗೆ ನಡೆಯಿತು.



Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.