ETV Bharat / state

ಕೊಪ್ಪಳ ಜಿಲ್ಲೆಯಲ್ಲಿ ಇಂದು ಮತ್ತೆ 8 ಜನರಿಗೆ ಕೊರೊನಾ ದೃಢ

author img

By

Published : Jul 8, 2020, 8:01 PM IST

ಕೊಪ್ಪಳ ಜಿಲ್ಲೆಯಲ್ಲಿ ಇಂದು 8 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಈವರೆಗೂ ಒಟ್ಟು 157 ಜನರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 87 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಇಂದು ಮತ್ತೆ 8 ಜನರಿಗೆ ಕೊರೊನಾ ದೃಢ
ಕೊಪ್ಪಳ ಜಿಲ್ಲೆಯಲ್ಲಿ ಇಂದು ಮತ್ತೆ 8 ಜನರಿಗೆ ಕೊರೊನಾ ದೃಢ

ಕೊಪ್ಪಳ: ಇಬ್ಬರು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಇಂದು 8 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಸೋಂಕಿತರ ಸಂಖ್ಯೆ 157ಕ್ಕೆ ಏರಿದೆ.

8 ಜನರಿಗೆ ಕೊರೊನಾ ದೃಢ
8 ಜನರಿಗೆ ಕೊರೊನಾ ದೃಢ

ಈ ಕುರಿತು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್ ಸುರಾಳ್ಕರ್ ಮಾಹಿತಿ ನೀಡಿದ್ದು, ಗಂಗಾವತಿ ತಾಲೂಕಿನಲ್ಲಿ 1 ಹಾಗೂ ಕೊಪ್ಪಳ ತಾಲೂಕಿನಲ್ಲಿ ಏಳು ಜನರಿಗೆ ಇಂದು ಪಾಸಿಟಿವ್ ದೃಢಪಟ್ಟಿದೆ. ಕೊಪ್ಪಳದ 37 ವರ್ಷದ ಹಾಗೂ 32 ವರ್ಷದ ಆರೋಗ್ಯ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್​​​ನ 65 ವರ್ಷದ ಪುರುಷ, ಹಿಟ್ನಾಳ್ ಗ್ರಾಮದ 48 ವರ್ಷದ ಮಹಿಳೆ, ಕೊಪ್ಪಳ ನಗರದ 26 ವರ್ಷದ ಮಹಿಳೆ, 20 ವರ್ಷದ ಮಹಿಳೆ, ಕಾರವಾರದ ಟ್ರಾವೆಲ್ ಹಿಸ್ಟರಿ ಇರುವ ಹೊಸಗೊಂಡಬಾಳ ಗ್ರಾಮದ 38 ವರ್ಷದ ಪುರುಷನಿಗೆ ಕೋವಿಡ್​ ದೃಢಪಟ್ಟಿದೆ.

ಬೆಂಗಳೂರು ಟ್ರಾವೆಲ್ ಹಿಸ್ಟರಿ ಇರುವ ಗಂಗಾವತಿ ನಗರದ 41 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 157 ಜನರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 87 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕುಷ್ಟಗಿ ತಾಲೂಕಿನ ದೊಣ್ಣೆಗುಡ್ಡದ ಓರ್ವ ಸೋಂಕಿತ ಬೆಂಗಳೂರಿನ ಬಿಬಿಎಂಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. 67 ಸಕ್ರಿಯ ಪ್ರಕರಣಗಳಿಗೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.

ಕೊಪ್ಪಳ: ಇಬ್ಬರು ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಜಿಲ್ಲೆಯಲ್ಲಿ ಇಂದು 8 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದ್ದು, ಸೋಂಕಿತರ ಸಂಖ್ಯೆ 157ಕ್ಕೆ ಏರಿದೆ.

8 ಜನರಿಗೆ ಕೊರೊನಾ ದೃಢ
8 ಜನರಿಗೆ ಕೊರೊನಾ ದೃಢ

ಈ ಕುರಿತು ಜಿಲ್ಲಾಧಿಕಾರಿ ವಿಕಾಸ್‌ ಕಿಶೋರ್ ಸುರಾಳ್ಕರ್ ಮಾಹಿತಿ ನೀಡಿದ್ದು, ಗಂಗಾವತಿ ತಾಲೂಕಿನಲ್ಲಿ 1 ಹಾಗೂ ಕೊಪ್ಪಳ ತಾಲೂಕಿನಲ್ಲಿ ಏಳು ಜನರಿಗೆ ಇಂದು ಪಾಸಿಟಿವ್ ದೃಢಪಟ್ಟಿದೆ. ಕೊಪ್ಪಳದ 37 ವರ್ಷದ ಹಾಗೂ 32 ವರ್ಷದ ಆರೋಗ್ಯ ಸಿಬ್ಬಂದಿಗೆ ಕೊರೊನಾ ದೃಢಪಟ್ಟಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್​​​ನ 65 ವರ್ಷದ ಪುರುಷ, ಹಿಟ್ನಾಳ್ ಗ್ರಾಮದ 48 ವರ್ಷದ ಮಹಿಳೆ, ಕೊಪ್ಪಳ ನಗರದ 26 ವರ್ಷದ ಮಹಿಳೆ, 20 ವರ್ಷದ ಮಹಿಳೆ, ಕಾರವಾರದ ಟ್ರಾವೆಲ್ ಹಿಸ್ಟರಿ ಇರುವ ಹೊಸಗೊಂಡಬಾಳ ಗ್ರಾಮದ 38 ವರ್ಷದ ಪುರುಷನಿಗೆ ಕೋವಿಡ್​ ದೃಢಪಟ್ಟಿದೆ.

ಬೆಂಗಳೂರು ಟ್ರಾವೆಲ್ ಹಿಸ್ಟರಿ ಇರುವ ಗಂಗಾವತಿ ನಗರದ 41 ವರ್ಷದ ಪುರುಷನಿಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 157 ಜನರಿಗೆ ಕೊರೊನಾ ಪಾಸಿಟಿವ್​ ದೃಢಪಟ್ಟಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ. 87 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕುಷ್ಟಗಿ ತಾಲೂಕಿನ ದೊಣ್ಣೆಗುಡ್ಡದ ಓರ್ವ ಸೋಂಕಿತ ಬೆಂಗಳೂರಿನ ಬಿಬಿಎಂಪಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾನೆ. 67 ಸಕ್ರಿಯ ಪ್ರಕರಣಗಳಿಗೆ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಾಳ್ಕರ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.