ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗುಂದಿ ಬಳಿಯ ನವ ವೃಂದಾವನಕ್ಕೆ ಬಳ್ಳಾರಿ ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಭೇಟಿ ನೀಡಿದರು.
ಇತ್ತೀಚಿಗೆ ನಿಧಿಯಾಸೆಗಾಗಿ ದುಷ್ಕರ್ಮಿಗಳು ವ್ಯಾಸರಾಜ ತೀರ್ಥರ ವೃಂದಾವನವನ್ನು ಧ್ವಂಸಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ನವ ವೃಂದಾವನಕ್ಕೆ ಆಗಮಿಸಿದ ಆನಂದ್ ಸಿಂಗ್, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಧ್ವಂಸಗೊಂಡಿದ್ದ ವೃಂದಾವನವನ್ನು ಈಗ ಪುನರ್ ನಿರ್ಮಾಣ ಮಾಡಲಾಗಿದ್ದು, ಶಾಸಕ ಆನಂದ್ ಸಿಂಗ್ ವೃಂದಾನವನದ ದರ್ಶನ ಪಡೆದರು.