ETV Bharat / state

ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ

author img

By

Published : May 22, 2019, 8:41 AM IST

ನಾಳೆ ನಡೆಯಲಿರುವ ಮತ ಎಣಿಕೆ ಕಾರ್ಯಕ್ಕೆ ಕೊಪ್ಪಳ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಡಿಸಿ ಸುನೀಲ್ ಕುಮಾರ್ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್

ಕೊಪ್ಪಳ: ನಾಳೆ ನಡೆಯಲಿರುವ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್

ಮತ ಎಣಿಕೆಯ ಸಿದ್ಧತೆ ಕುರಿತಂತೆ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಪ್ರಾರಂಭವಾಗಲಿದೆ. ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್​ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ್ತು ಅಂಚೆ ಮತಗಳ ಎಣಿಕೆಯು ಚುನಾವಣಾಧಿಕಾರಿಗಳ ಕೊಠಡಿಯಲ್ಲಿ ನಾಲ್ಕು ಟೇಬಲ್​ಗಳಲ್ಲಿ ನಡೆಯಲಿದೆ.

ಬೆಳಗ್ಗೆ 7.45ಕ್ಕೆ ಇವಿಎಂಗಳಿರುವ ಸ್ಟ್ರಾಂಗ್ ರೂಂ ಓಪನ್ ಮಾಡಲಾಗುತ್ತದೆ. ಮತ ಎಣಿಕೆ ಸಿಬ್ಬಂದಿ ಸೇರಿದಂತೆ ಏಜೆಂಟರಿಗೆ ಪ್ರವೇಶ ಪತ್ರ ನೀಡಲಾಗಿದೆ. ಪ್ರವೇಶ ಪತ್ರ ಇಲ್ಲದವರಿಗೆ ಯಾವುದೇ ಕಾರಣಕ್ಕೂ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ. ಮತ ಎಣಿಕೆಯ ಪ್ರತಿ ಸುತ್ತಿನ ಮಾಹಿತಿಯನ್ನು ಸುವಿಧ ಮೂಲಕ ಮತ್ತು ಸಾರ್ವಜನಿಕರಿಗೆ ಹೊರಗೆ ಧ್ವನಿವರ್ಧಕದ ಮೂಲಕ ನೀಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಬೂತ್​ನಂತೆ ಲಾಟರಿ ಮೂಲಕ ಆಯ್ಕೆ ಮಾಡಿಕೊಂಡು ವಿವಿ ಪ್ಯಾಟ್​ಗಳ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೊಪ್ಪಳ: ನಾಳೆ ನಡೆಯಲಿರುವ ಲೋಕಸಭಾ ಚುನಾವಣೆಯ ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್

ಮತ ಎಣಿಕೆಯ ಸಿದ್ಧತೆ ಕುರಿತಂತೆ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ನಾಳೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಪ್ರಾರಂಭವಾಗಲಿದೆ. ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿದ್ದು, ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್​ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ್ತು ಅಂಚೆ ಮತಗಳ ಎಣಿಕೆಯು ಚುನಾವಣಾಧಿಕಾರಿಗಳ ಕೊಠಡಿಯಲ್ಲಿ ನಾಲ್ಕು ಟೇಬಲ್​ಗಳಲ್ಲಿ ನಡೆಯಲಿದೆ.

ಬೆಳಗ್ಗೆ 7.45ಕ್ಕೆ ಇವಿಎಂಗಳಿರುವ ಸ್ಟ್ರಾಂಗ್ ರೂಂ ಓಪನ್ ಮಾಡಲಾಗುತ್ತದೆ. ಮತ ಎಣಿಕೆ ಸಿಬ್ಬಂದಿ ಸೇರಿದಂತೆ ಏಜೆಂಟರಿಗೆ ಪ್ರವೇಶ ಪತ್ರ ನೀಡಲಾಗಿದೆ. ಪ್ರವೇಶ ಪತ್ರ ಇಲ್ಲದವರಿಗೆ ಯಾವುದೇ ಕಾರಣಕ್ಕೂ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ. ಮತ ಎಣಿಕೆಯ ಪ್ರತಿ ಸುತ್ತಿನ ಮಾಹಿತಿಯನ್ನು ಸುವಿಧ ಮೂಲಕ ಮತ್ತು ಸಾರ್ವಜನಿಕರಿಗೆ ಹೊರಗೆ ಧ್ವನಿವರ್ಧಕದ ಮೂಲಕ ನೀಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಬೂತ್​ನಂತೆ ಲಾಟರಿ ಮೂಲಕ ಆಯ್ಕೆ ಮಾಡಿಕೊಂಡು ವಿವಿ ಪ್ಯಾಟ್​ಗಳ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

Intro:


Body:ಕೊಪ್ಪಳ:- ಇದೇ ಮೇ. 23 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಕೊಪ್ಪಳ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಕೊಪ್ಪಳ ಜಿಲ್ಲಾಡಳಿತ ಸಕಲ ರೀತಿಯಲ್ಲಿ ಸಜ್ಜಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪಿ. ಸುನಿಲ್ ಕುಮಾರ್ ಹೇಳಿದ್ದಾರೆ. ಮತ ಎಣಿಕೆಯ ಸಿದ್ಧತೆ ಕುರಿತಂತೆ ನಗರದ ಶ್ರೀ ಗವಿಸಿದ್ಧೇಶ್ವರ ಪದವಿ ಮಹಾವಿದ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೇ. 23 ರಂದು ಬೆಳಗ್ಗೆ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ನಗರದ ಗವಿಸಿದ್ದೇಶ್ವರ ಮಹಾವಿದ್ಯಾಲಯದಲ್ಲಿ ಪ್ರಾರಂಭವಾಗಲಿದೆ. ಕೊಪ್ಪಳ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕ್ಷೇತ್ರದಲ್ಲಿ ಒಟ್ಟು ಎಂಟು ವಿಧಾನಸಭಾ ಕ್ಷೇತ್ರಗಳಿದ್ದು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 14 ಟೇಬಲ್ ಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಮತ್ತು ಅಂಚೆ ಮತಗಳ ಎಣಿಕೆಯು ಚುನಾವಣಾಧಿಕಾರಿಗಳ ಕೊಠಡಿಯಲ್ಲಿ ನಾಲ್ಕು ಟೇಬಲ್ ಗಳಲ್ಲಿ ನಡೆಯಲಿದೆ. ಅಂದಜ ಬೆಳಗ್ಗೆ 7.45 ಕ್ಕೆ ಇವಿಎಂಗಳಿರುವ ಸ್ಟ್ರಾಂಗ್ ರೂಂ ಓಪನ್ ಮಾಡಲಾಗುತ್ತದೆ. ಮತ ಎಣಿಕೆ ಸಿಬ್ಬಂದಿ ಸೇರಿದಂತೆ ಏಜೆಂಟರಿಗೆ ಪ್ರವೇಶಪತ್ರ ನೀಡಲಾಗಿದೆ. ಪ್ರವೇಶಪತ್ರ ಇಲ್ಲದವರಿಗೆ ಯಾವುದೇ ಕಾರಣಕ್ಕೂ ಮತ ಎಣಿಕೆ ಕೇಂದ್ರಕ್ಕೆ ಪ್ರವೇಶ ನೀಡಲಾಗುವುದಿಲ್ಲ. ಮತ ಎಣಿಕೆಯ ಪ್ರತಿ ಸುತ್ತಿನ ಮಾಹಿತಿಯನ್ನು ಸುವಿಧ ಮೂಲಕ ಮತ್ತು ಸಾರ್ವಜನಿಕರಿಗೆ ಹೊರಗೆ ಧ್ವನಿವರ್ಧಕದ ಮೂಲಕ ನೀಡಲಾಗುತ್ತದೆ. ಪ್ರತಿ ವಿಧಾನಸಭಾ ಕ್ಷೇತ್ರಗಳಲ್ಲಿ ಐದು ಬೂತ್ ನಂತೆ ಲಾಟರಿ ಮೂಲಕ ಆಯ್ಕೆ ಮಾಡಿಕೊಂಡು ವಿವಿ ಪ್ಯಾಟ್ ಗಳತ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ ಎಂದು ಹೇಳಿದರು. ಯಾವುದೇ ರೀತಿಯ ಗೊಂದಲಗಳಾಗದಂತೆ ಮತ ಎಣಿಕೆ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೇಣುಕಾ ಸುಕುಮಾರ್ ಉಪಸ್ಥಿತರಿದ್ದರು.



Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.