ETV Bharat / state

ಬಿಜೆಪಿ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಡಿಕೆಶಿ

ಬಿಜೆಪಿ ಸರ್ಕಾರ ಸಮಾಜವನ್ನು ಒಡೆಯುವ ಕೆಲಸ ಮಾಡ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ. ಅಭಿವೃದ್ಧಿ ಪ್ರಾಧಿಕಾರ ರಚನೆ, ಬೆಂಬಲ ಬೆಲೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಇದೇ 30 ರಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿ ಬಳಿಕ ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

author img

By

Published : Nov 23, 2020, 12:12 PM IST

KPCC President D.K. Shivakumar
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ಕೊಪ್ಪಳ: ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರವೇ‌ ಮುಖ್ಯವಾಗಿದೆ. ರೈತರ ಸಮಸ್ಯೆಗೆ ಸ್ಪಂದಿಸುವುದು ಮುಖ್ಯವಾಗದೆ ಸರ್ಕಾರ ಉಳಿಸಿಕೊಳ್ಳುವುದು ಅವರಿಗೆ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿರುವ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ನಿವಾಸದಲ್ಲಿ ಮಾತನಾಡಿದ ಅವರು, ಭತ್ತ ಹಾಗೂ ಮೆಕ್ಕೆಜೋಳದ ಬೆಲೆಗಳು ಕುಸಿತಗೊಂಡು ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಎಂದರೆ ಎಲ್ಲರೂ ಒಂದೇ. ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹಧನ ಘೋಷಿಸಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಬಿಜೆಪಿ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಡಿಕೆಶಿ

ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಬೆಂಬಲ ಬೆಲೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಇದೇ 30 ರಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿ ಬಳಿಕ ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ. ಇನ್ನು ಈ ಸರ್ಕಾರ ಸಮಾಜ ಒಡೆಯುವುದಕ್ಕೆ ಏನೇನು ಬೇಕೋ ಅದನ್ನು ಮಾಡುತ್ತಿದೆ. ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

ಶಾಲೆ ಆರಂಭ ಕುರಿತಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷರು, ಶಿಕ್ಷಣ ಕ್ಷೇತ್ರ ಕುರಿತಂತೆ ಸರ್ಕಾರ ನಮ್ಮ ಜೊತೆ ಚರ್ಚಿಸಿಲ್ಲ. ಈ ಹಿಂದೆ ಒಂದು ಬಾರಿ ಕೇಳಿದ್ದರು. ಅವರಿಗೆ ಒಂದು ಅವಕಾಶವಿದೆ ತೀರ್ಮಾನ ಮಾಡಿಕೊಳ್ಳಲಿ. ಅವರ ತೀರ್ಮಾನದ ಬಳಿಕ ನಾವು ಮಾತನಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್​ನ ಮಾಜಿ ಸಚಿವರು ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ ಬಿಜೆಪಿ ಕಡೆಯಿಂದ ಎಷ್ಟು ಜನ ಕಾಂಗ್ರೆಸ್​ಗೆ ಬರ್ತಾರೆ ಎಂದು ನೀವು ಕೇಳ್ತೀರಾ ಎಂದು ಪ್ರಶ್ನಿಸಿದರು.

ಈ ವೇಳೆ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಲು ಡಿಕೆಶಿ ನಿರಾಕರಿಸಿದರು.

ಕೊಪ್ಪಳ: ಮುಖ್ಯಮಂತ್ರಿ ಹಾಗೂ ಸಚಿವರಿಗೆ ಅಧಿಕಾರವೇ‌ ಮುಖ್ಯವಾಗಿದೆ. ರೈತರ ಸಮಸ್ಯೆಗೆ ಸ್ಪಂದಿಸುವುದು ಮುಖ್ಯವಾಗದೆ ಸರ್ಕಾರ ಉಳಿಸಿಕೊಳ್ಳುವುದು ಅವರಿಗೆ ಆದ್ಯತೆಯಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ತಾಲೂಕಿನ ಹಿಟ್ನಾಳ್ ಗ್ರಾಮದಲ್ಲಿರುವ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ನಿವಾಸದಲ್ಲಿ ಮಾತನಾಡಿದ ಅವರು, ಭತ್ತ ಹಾಗೂ ಮೆಕ್ಕೆಜೋಳದ ಬೆಲೆಗಳು ಕುಸಿತಗೊಂಡು ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಎಂದರೆ ಎಲ್ಲರೂ ಒಂದೇ. ಭತ್ತಕ್ಕೆ 500 ರೂಪಾಯಿ ಪ್ರೋತ್ಸಾಹಧನ ಘೋಷಿಸಬೇಕು ಎಂದು ನಾನು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಬಿಜೆಪಿ ಸರ್ಕಾರ ಸಮಾಜ ಒಡೆಯುವ ಕೆಲಸ ಮಾಡುತ್ತಿದೆ: ಡಿಕೆಶಿ

ಅಭಿವೃದ್ಧಿ ಪ್ರಾಧಿಕಾರ ಸ್ಥಾಪನೆ, ಬೆಂಬಲ ಬೆಲೆ ಸೇರಿದಂತೆ ಇನ್ನಿತರೆ ವಿಷಯಗಳ ಕುರಿತು ಇದೇ 30 ರಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಸಭೆ ನಡೆಸಿ ಬಳಿಕ ನಮ್ಮ ನಿಲುವನ್ನು ಸ್ಪಷ್ಟಪಡಿಸುತ್ತೇವೆ. ಇನ್ನು ಈ ಸರ್ಕಾರ ಸಮಾಜ ಒಡೆಯುವುದಕ್ಕೆ ಏನೇನು ಬೇಕೋ ಅದನ್ನು ಮಾಡುತ್ತಿದೆ. ಸಮಾಜವನ್ನು ಒಗ್ಗೂಡಿಸುವ ಕೆಲಸ ಮಾಡುತ್ತಿಲ್ಲ ಎಂದು ಡಿಕೆಶಿ ವಾಗ್ದಾಳಿ ನಡೆಸಿದರು.

ಶಾಲೆ ಆರಂಭ ಕುರಿತಂತೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷರು, ಶಿಕ್ಷಣ ಕ್ಷೇತ್ರ ಕುರಿತಂತೆ ಸರ್ಕಾರ ನಮ್ಮ ಜೊತೆ ಚರ್ಚಿಸಿಲ್ಲ. ಈ ಹಿಂದೆ ಒಂದು ಬಾರಿ ಕೇಳಿದ್ದರು. ಅವರಿಗೆ ಒಂದು ಅವಕಾಶವಿದೆ ತೀರ್ಮಾನ ಮಾಡಿಕೊಳ್ಳಲಿ. ಅವರ ತೀರ್ಮಾನದ ಬಳಿಕ ನಾವು ಮಾತನಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್​ನ ಮಾಜಿ ಸಚಿವರು ಬಿಜೆಪಿ ಸೇರ್ಪಡೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಡಿಕೆಶಿ ಬಿಜೆಪಿ ಕಡೆಯಿಂದ ಎಷ್ಟು ಜನ ಕಾಂಗ್ರೆಸ್​ಗೆ ಬರ್ತಾರೆ ಎಂದು ನೀವು ಕೇಳ್ತೀರಾ ಎಂದು ಪ್ರಶ್ನಿಸಿದರು.

ಈ ವೇಳೆ ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ನಡೆದಿರುವ ಸಿಬಿಐ ದಾಳಿ ಕುರಿತು ಪ್ರತಿಕ್ರಿಯಿಸಲು ಡಿಕೆಶಿ ನಿರಾಕರಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.