ಕುಷ್ಟಗಿ(ಕೊಪ್ಪಳ): ಕುಷ್ಟಗಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಪುಣ್ಯತಿಥಿ ಆಚರಿಸಲಾಯಿತು. ಬಳಿಕ ಇಲ್ಲಿನ ಅಂಬೇಡ್ಕರ ವೃತ್ತದಲ್ಲಿ ಸಾಂಕೇತಿಕ ನ್ಯಾಯ ಯೋಜನೆ ಹಮ್ಮಿಕೊಳ್ಳಲಾಗಿತ್ತು
ಈ ವೇಳೆ, ಬಡವರು, ದಿನಗೂಲಿಗಾರರು, ನಿರ್ಗತಿಕರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾಂಕೇತಿಕವಾಗಿ ಧನ ಸಹಾಯ ಮಾಡಿದರು. ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಲಾಡ್ಲೆಮಷಕ್ ದೋಟಿಹಾಳ, ನಾಗರಾಜ ಭೋವಿ ಮತ್ತಿತರಿದ್ದರು.