ETV Bharat / state

ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ತೋಟಗಾರಿಕೆ ಇಲಾಖೆಯಿಂದ ಮಾರುಕಟ್ಟೆ ವ್ಯವಸ್ಥೆ

author img

By

Published : May 4, 2021, 11:38 AM IST

ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ಮುಂದಾದರೆ ಅಂತಹ ರೈತರಿಗೆ ಇಲಾಖೆಯಿಂದ ಮಾರುಕಟ್ಟೆ ಅನುಕೂಲ ಕಲ್ಪಿಸಿಕೊಡುವುದಾಗಿ ಕೊಪ್ಪಳ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ತಿಳಿಸಿದ್ದಾರೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರು ಹೆಚ್ಚಿನ ಲಾಭ ಗಳಿಸಬಹುದಾಗಿದೆ.

Koppal
ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ತೋಟಗಾರಿಕೆ ಇಲಾಖೆಯಿಂದ ಮಾರುಕಟ್ಟೆ ವ್ಯವಸ್ಥೆ

ಕೊಪ್ಪಳ: ಹಣ್ಣುಗಳ ರಾಜ ಮಾವು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದೆ. ಮಾರುಕಟ್ಟೆಯಲ್ಲಿ ತರಹೇವಾರಿ ಮಾವಿನ ಹಣ್ಣುಗಳು ಗ್ರಾಹಕರನ್ನು ಸೆಳೆಯುತ್ತಿವೆ. ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವಿನ ಹಣ್ಣುಗಳಿಗೆ ತುಸು ಬೇಡಿಕೆ ಜಾಸ್ತಿ. ಹೀಗಾಗಿ, ಮಾವು ಬೆಳೆದ ರೈತರು ನೈಸರ್ಗಿಕವಾಗಿ ಹಣ್ಣಾಗಿಸಿ ನೇರವಾಗಿ ಮಾರಾಟ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು. ಇದಕ್ಕೆ ಬೇಕಾದ ಮಾರುಕಟ್ಟೆ ಅನುಕೂಲ ಕಲ್ಪಿಸಿಕೊಡಲು ಕೊಪ್ಪಳ ತೋಟಗಾರಿಕೆ ಇಲಾಖೆ ಮುಂದಾಗಿದೆ.

ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ತೋಟಗಾರಿಕೆ ಇಲಾಖೆಯಿಂದ ಮಾರುಕಟ್ಟೆ ವ್ಯವಸ್ಥೆ

ಈಗಾಗಲೇ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಜಿಲ್ಲೆಯಲ್ಲಿ ಕೇಸರ್, ದಶಹರಿ, ಬೆನಿಶನ್ ಸೇರಿದಂತೆ ವಿವಿಧ ತಳಿಯ ಮಾವು ಬೆಳೆಯಲಾಗಿದೆ. ಸುಮಾರು 3 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಮಾವಿನ ಬೆಳೆಯಿಂದ ಸುಮಾರು 20 ರಿಂದ 30 ಸಾವಿರ ಟನ್ ಇಳುವರಿ ಬರಲಿದೆ. ಈ ಪೈಕಿ ಈಗಾಗಲೇ ಸುಮಾರು 1,500 ಟನ್‌ನಷ್ಟು ಮಾವು ಬಂದಿದೆ. ಅದರಲ್ಲೂ ನೈಸರ್ಗಿಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳಿಗೆ ತುಸು ಬೇಡಿಕೆ ಹೆಚ್ಚು ಇರುತ್ತದೆ. ಹೀಗಾಗಿ, ಕೆಲ ರೈತರು ತಾವು ಬೆಳೆದಿರುವ ಮಾವಿನ ಕಾಯಿಗಳನ್ನು ನೈಸರ್ಗಿಕವಾಗಿ ಹಣ್ಣು ಮಾಡಿ, ನೇರವಾಗಿ ಮಾರಾಟ ಮಾಡಲು ತಯಾರಿ ನಡೆಸಿದ್ದಾರೆ.

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ಕರ್ಫ್ಯೂ ಜಾರಿಯಲ್ಲಿದೆ. ಹೀಗಾಗಿ, ರೈತರು ತಾವು ಬೆಳೆದಿರುವ ಮಾವನ್ನು ಹೇಗೆ ಮಾರಾಟ ಮಾಡೋದು ಎಂಬ ಚಿಂತೆಯಲ್ಲಿದ್ದರು. ಆದ್ರೀಗ, ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ಮುಂದಾದರೆ ಅಂತಹ ರೈತರಿಗೆ ಇಲಾಖೆಯಿಂದ ಮಾರುಕಟ್ಟೆ ಅನುಕೂಲ ಕಲ್ಪಿಸಿಕೊಡುವುದಾಗಿ ಕೊಪ್ಪಳ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರು ಲಾಭ ಗಳಿಸಬಹುದಾಗಿದೆ.

ಇದನ್ನೂ ಓದಿ: ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿಸುತ್ತಿರುವ ಕಾರ್ಪೋರೇಟರ್​ ಗಣೇಶ್

ಕೊಪ್ಪಳ: ಹಣ್ಣುಗಳ ರಾಜ ಮಾವು ಈಗಾಗಲೇ ಮಾರುಕಟ್ಟೆ ಪ್ರವೇಶಿಸಿದೆ. ಮಾರುಕಟ್ಟೆಯಲ್ಲಿ ತರಹೇವಾರಿ ಮಾವಿನ ಹಣ್ಣುಗಳು ಗ್ರಾಹಕರನ್ನು ಸೆಳೆಯುತ್ತಿವೆ. ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವಿನ ಹಣ್ಣುಗಳಿಗೆ ತುಸು ಬೇಡಿಕೆ ಜಾಸ್ತಿ. ಹೀಗಾಗಿ, ಮಾವು ಬೆಳೆದ ರೈತರು ನೈಸರ್ಗಿಕವಾಗಿ ಹಣ್ಣಾಗಿಸಿ ನೇರವಾಗಿ ಮಾರಾಟ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು. ಇದಕ್ಕೆ ಬೇಕಾದ ಮಾರುಕಟ್ಟೆ ಅನುಕೂಲ ಕಲ್ಪಿಸಿಕೊಡಲು ಕೊಪ್ಪಳ ತೋಟಗಾರಿಕೆ ಇಲಾಖೆ ಮುಂದಾಗಿದೆ.

ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ತೋಟಗಾರಿಕೆ ಇಲಾಖೆಯಿಂದ ಮಾರುಕಟ್ಟೆ ವ್ಯವಸ್ಥೆ

ಈಗಾಗಲೇ ಮಾವಿನ ಹಣ್ಣಿನ ಸೀಸನ್ ಆರಂಭವಾಗಿದೆ. ಜಿಲ್ಲೆಯಲ್ಲಿ ಕೇಸರ್, ದಶಹರಿ, ಬೆನಿಶನ್ ಸೇರಿದಂತೆ ವಿವಿಧ ತಳಿಯ ಮಾವು ಬೆಳೆಯಲಾಗಿದೆ. ಸುಮಾರು 3 ಸಾವಿರ ಹೆಕ್ಟೇರ್ ಪ್ರದೇಶದಲ್ಲಿರುವ ಮಾವಿನ ಬೆಳೆಯಿಂದ ಸುಮಾರು 20 ರಿಂದ 30 ಸಾವಿರ ಟನ್ ಇಳುವರಿ ಬರಲಿದೆ. ಈ ಪೈಕಿ ಈಗಾಗಲೇ ಸುಮಾರು 1,500 ಟನ್‌ನಷ್ಟು ಮಾವು ಬಂದಿದೆ. ಅದರಲ್ಲೂ ನೈಸರ್ಗಿಕವಾಗಿ ಹಣ್ಣು ಮಾಡಿದ ಮಾವಿನ ಹಣ್ಣುಗಳಿಗೆ ತುಸು ಬೇಡಿಕೆ ಹೆಚ್ಚು ಇರುತ್ತದೆ. ಹೀಗಾಗಿ, ಕೆಲ ರೈತರು ತಾವು ಬೆಳೆದಿರುವ ಮಾವಿನ ಕಾಯಿಗಳನ್ನು ನೈಸರ್ಗಿಕವಾಗಿ ಹಣ್ಣು ಮಾಡಿ, ನೇರವಾಗಿ ಮಾರಾಟ ಮಾಡಲು ತಯಾರಿ ನಡೆಸಿದ್ದಾರೆ.

ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ಕೊರೊನಾ ಕರ್ಫ್ಯೂ ಜಾರಿಯಲ್ಲಿದೆ. ಹೀಗಾಗಿ, ರೈತರು ತಾವು ಬೆಳೆದಿರುವ ಮಾವನ್ನು ಹೇಗೆ ಮಾರಾಟ ಮಾಡೋದು ಎಂಬ ಚಿಂತೆಯಲ್ಲಿದ್ದರು. ಆದ್ರೀಗ, ನೈಸರ್ಗಿಕವಾಗಿ ಹಣ್ಣಾಗಿಸಿದ ಮಾವು ಮಾರಾಟಕ್ಕೆ ಮುಂದಾದರೆ ಅಂತಹ ರೈತರಿಗೆ ಇಲಾಖೆಯಿಂದ ಮಾರುಕಟ್ಟೆ ಅನುಕೂಲ ಕಲ್ಪಿಸಿಕೊಡುವುದಾಗಿ ಕೊಪ್ಪಳ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ ಕೃಷ್ಣ ಉಕ್ಕುಂದ ಅವರು ತಿಳಿಸಿದ್ದಾರೆ. ಇದರಿಂದಾಗಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ರೈತರು ಲಾಭ ಗಳಿಸಬಹುದಾಗಿದೆ.

ಇದನ್ನೂ ಓದಿ: ಅನಾಥ ಮೃತದೇಹಗಳ ಅಂತ್ಯ ಸಂಸ್ಕಾರ ನೆರವೇರಿಸಿಸುತ್ತಿರುವ ಕಾರ್ಪೋರೇಟರ್​ ಗಣೇಶ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.