ETV Bharat / state

ಕೊಪ್ಪಳದ ನೆರೆ ಸಂತ್ರಸ್ತರಿಗೆ ಅಭಯ ನೀಡಿದ್ರು ಸಚಿವ ಸಿ.ಸಿ‌. ಪಾಟೀಲ್

author img

By

Published : Aug 22, 2019, 4:41 PM IST

ಕೊಪ್ಪಳದ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಸಿ.ಸಿ‌. ಪಾಟೀಲ್ ಅವರು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಿದರು. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡುವುದಾಗಿ ಧೈರ್ಯ ತುಂಬಿದರು.

minister c.c.patil visit the koppal flood residential area

ಕೊಪ್ಪಳ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಸಿ.ಸಿ‌. ಪಾಟೀಲ್ ಭೇಟಿ ನೀಡಿ, ಪರಿಶೀಲನೆ ಬಳಿಕ ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದರು. ಬಳಿಕ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕೊಪ್ಪಳ ತಾಲೂಕಿನ ಮುನಿರಾಬಾದ್​ನ ಅಂಬೇಡ್ಕರ್‌ ನಗರ, ಪಂಪಾವನ, ತುಂಗಭದ್ರಾ ಜಲಾಶಯ ಎಡದಂಡೆ ಕಾಲುವೆ, ಮುದ್ಲಾಪುರ ಸೇರಿದಂತೆ ವಿವಿಧ ಪ್ರದೇಶಗಳನ್ನು ಪರಿಶೀಲಿಸಿ ಸಂತ್ರಸ್ತರ ಸಮಸ್ಯೆಗಳನ್ನು ಸಚಿವ ಪಾಟೀಲ್​ ಆಲಿಸಿದರು. ಈ ಕೂಡಲೇ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓಗೆ ಸೂಚಿಸಿದ್ರು.

ಸಚಿವ ಸಿ.ಸಿ‌.ಪಾಟೀಲ್

ಸಚಿವ ಸಂಪುಟ ರಚನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್​ .ಯಡಿಯೂರಪ್ಪ ಅವರು ಏಕಾಂಗಿಯಾಗಿ ಸಂಚರಿಸಿ ಪ್ರವಾಹ ಪೀಡಿತರ ನೆರವಿಗೆ ನಿಂತಿದ್ದರು. ಸಂಪುಟ ರಚನೆಯಾದ ಬಳಿಕ ನೆರೆಪೀಡಿತ ಪ್ರದೇಶಗಳಿಗೆ ಭೇಡಿ ನೀಡುವಂತೆ ಸಿಎಂ ಸೂಚಿಸಿದ್ದರು. ಅದರಂತೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಪ್ರವಾಹದಿಂದ ಮನೆ ಹಾನಿಯಾದವರಿಗೆ ಕ್ರಮವಾಗಿ ₹ 25 ಸಾವಿರ, ₹ 50 ಸಾವಿರ ಹಾಗೂ ₹ 5 ಲಕ್ಷ‌ ಪರಿಹಾರ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಪರಿಹಾರ ನೀಡಲು ತನ್ನದೇ ಆದ ನಿಯಮಗಳನ್ನು ಹೊಂದಿದೆ. ಇದಕ್ಕಾಗಿ ಅಧಿಕಾರಿಗಳನ್ನು ಇಲ್ಲಿಗೆ ಕಳುಹಿಸಿ ಅಧ್ಯಯನ ನಡೆಸಬೇಕು. ಸಮೀಕ್ಷೆ ನಂತರ ಎಷ್ಟು ಪರಿಹಾರ ನೀಡಬೇಕು ಎಂಬುದರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಪಕ್ಷದಲ್ಲಿ ಎದ್ದಿರುವ ಭಿನ್ನಮತದ ಕುರಿತು ಕೇಳಿದ ಪ್ರಶ್ನೆಗೆ, ನಿಮಗೆ ಕೈಮುಗಿದು ಕೇಳುತ್ತೇನೆ. ನಾವು ಪ್ರವಾಹದ ಪರಿಹಾರದ ಪರಿಸ್ಥಿತಿ ಅವಲೋಕಿಸುತ್ತಿದ್ದು, ಭಿನ್ನಮತದ ಬಗ್ಗೆ ದಯವಿಟ್ಟು ಮಾತು ಬೇಡ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದರು. ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್​ ಇದ್ದರು.

ಕೊಪ್ಪಳ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಸಚಿವ ಸಿ.ಸಿ‌. ಪಾಟೀಲ್ ಭೇಟಿ ನೀಡಿ, ಪರಿಶೀಲನೆ ಬಳಿಕ ಸಂತ್ರಸ್ತರಿಗೆ ಪರಿಹಾರದ ಭರವಸೆ ನೀಡಿದರು. ಬಳಿಕ ಹಿರಿಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಕೊಪ್ಪಳ ತಾಲೂಕಿನ ಮುನಿರಾಬಾದ್​ನ ಅಂಬೇಡ್ಕರ್‌ ನಗರ, ಪಂಪಾವನ, ತುಂಗಭದ್ರಾ ಜಲಾಶಯ ಎಡದಂಡೆ ಕಾಲುವೆ, ಮುದ್ಲಾಪುರ ಸೇರಿದಂತೆ ವಿವಿಧ ಪ್ರದೇಶಗಳನ್ನು ಪರಿಶೀಲಿಸಿ ಸಂತ್ರಸ್ತರ ಸಮಸ್ಯೆಗಳನ್ನು ಸಚಿವ ಪಾಟೀಲ್​ ಆಲಿಸಿದರು. ಈ ಕೂಡಲೇ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓಗೆ ಸೂಚಿಸಿದ್ರು.

ಸಚಿವ ಸಿ.ಸಿ‌.ಪಾಟೀಲ್

ಸಚಿವ ಸಂಪುಟ ರಚನೆಗೂ ಮುನ್ನ ಮುಖ್ಯಮಂತ್ರಿ ಬಿ.ಎಸ್​ .ಯಡಿಯೂರಪ್ಪ ಅವರು ಏಕಾಂಗಿಯಾಗಿ ಸಂಚರಿಸಿ ಪ್ರವಾಹ ಪೀಡಿತರ ನೆರವಿಗೆ ನಿಂತಿದ್ದರು. ಸಂಪುಟ ರಚನೆಯಾದ ಬಳಿಕ ನೆರೆಪೀಡಿತ ಪ್ರದೇಶಗಳಿಗೆ ಭೇಡಿ ನೀಡುವಂತೆ ಸಿಎಂ ಸೂಚಿಸಿದ್ದರು. ಅದರಂತೆ ಭೇಟಿ ನೀಡುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಪ್ರವಾಹದಿಂದ ಮನೆ ಹಾನಿಯಾದವರಿಗೆ ಕ್ರಮವಾಗಿ ₹ 25 ಸಾವಿರ, ₹ 50 ಸಾವಿರ ಹಾಗೂ ₹ 5 ಲಕ್ಷ‌ ಪರಿಹಾರ ನೀಡಲಾಗುತ್ತದೆ. ಕೇಂದ್ರ ಸರ್ಕಾರ ಪರಿಹಾರ ನೀಡಲು ತನ್ನದೇ ಆದ ನಿಯಮಗಳನ್ನು ಹೊಂದಿದೆ. ಇದಕ್ಕಾಗಿ ಅಧಿಕಾರಿಗಳನ್ನು ಇಲ್ಲಿಗೆ ಕಳುಹಿಸಿ ಅಧ್ಯಯನ ನಡೆಸಬೇಕು. ಸಮೀಕ್ಷೆ ನಂತರ ಎಷ್ಟು ಪರಿಹಾರ ನೀಡಬೇಕು ಎಂಬುದರ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಪಕ್ಷದಲ್ಲಿ ಎದ್ದಿರುವ ಭಿನ್ನಮತದ ಕುರಿತು ಕೇಳಿದ ಪ್ರಶ್ನೆಗೆ, ನಿಮಗೆ ಕೈಮುಗಿದು ಕೇಳುತ್ತೇನೆ. ನಾವು ಪ್ರವಾಹದ ಪರಿಹಾರದ ಪರಿಸ್ಥಿತಿ ಅವಲೋಕಿಸುತ್ತಿದ್ದು, ಭಿನ್ನಮತದ ಬಗ್ಗೆ ದಯವಿಟ್ಟು ಮಾತು ಬೇಡ. ಅದನ್ನು ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ ಎಂದರು. ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್​ ಇದ್ದರು.

Intro:


Body:ಕೊಪ್ಪಳ:- ಜಿಲ್ಲೆಯ ತುಂಗಭದ್ರಾ ನದಿ ನೆರೆಪೀಡಿತ ಪ್ರದೇಶಕ್ಕೆ ಸಚಿವ ಸಿ.ಸಿ‌. ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಾಕೂಕಿನ ಮುನಿರಾಬಾದ್ ನ ಅಂಬೇಡ್ಕರ್‌ ನಗರ, ಪಂಪಾವನ, ಕಿತ್ತುಹೋಗಿದ್ದ ತುಂಗಭದ್ರಾ ಜಲಾಶಯ ಎಡದಂಡೆ ಮೇಲ್ಮಟ್ಟದ ಕಾಲುವೆಯ ಸ್ಥಳ, ಹೊಳೆ ಮುದ್ಲಾಪುರ ಸೇರಿದಂತೆ ವಿವಿಧ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ಮುನಿರಾಬಾದ್ ನ ಅಂಬೇಡ್ಕರ್ ನಗರ್ ಜನರೊಂದಿಗೆ ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು. ಮುನಿರಾಬಾದ್ ಗೆ ತತಕ್ಷಣ ಕುಡಿಯುವ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಸೂಚಿಸಿದರು. ಸಚಿವ ಸಂಪುಟ ರಚನೆಗೂ ಮುನ್ನ ಸಿಎಂ ಯಡಿಯೂರಪ್ಪ ಅವರು ಒಬ್ಬರೇ ಏಕಾಂಗಿಯಾಗಿ ಓಡಾಡಿ ಪ್ರವಾಹ ಪೀಡಿತರ ನೆರವಿಗೆ ನಿಂತಿದ್ದರು. ಈಗ ಸಚಿವ ಸಂಪುಟ ರಚನೆಯಾದ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿವಂತೆ ಸೂಚಿಸಿದ್ದಾರೆ. ಅದರಂತೆ ನಾವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದೇವೆ ಎಂದರು. ಇನ್ನು ಪ್ರವಾಹದಿಂದ ಮನೆ ಹಾನಿಯಾದ ಪ್ರಮಾಣಕ್ಕನುಗುಣವಾಗಿ ಕ್ರಮವಾಗಿ 25 ಸಾವಿರ ರುಪಾಯಿ, 50 ಸಾವಿರ ರುಪಾಯಿ ಹಾಗೂ 5 ಲಕ್ಷ‌ ರುಪಾಯಿ ಪರಿಹಾರ ನೀಡಲಾಗುತ್ತದೆ. ಪ್ರವಾಹದ ಪರಿಹಾರ ನೀಡಲು ತನ್ನದೇ ಆದ ನಿಯಮವಿದೆ. ಇದಕ್ಕಾಗಿ ಕೇಂದ್ರ ಸರ್ಕಾರ ಅಧಿಕಾರಿಗಳನ್ನು ಕಳಿಸುತ್ತದೆ. ನಂತರ ಪರಿಹಾರ ನೀಡುತ್ತದೆ ಎಂದು ಪ್ರಶ್ನೆಯೊಂದಕ್ಕೆ ಸಚಿವ ಸಿಸಿ ಪಾಟೀಲ್ ಉತ್ತರಿಸಿದರು. ಇನ್ನು ಭಿನ್ನಮತ ಕುರಿತಂತೆ ಪಕ್ಷದ ವರಿಷ್ಠರು ನೋಡಿಕೊಳ್ಳುತ್ತಾರೆ. ನಿಮಗೆ ಕೈಮುಗಿದು ಕೇಳುತ್ತೇನೆ ನಾವು ಪ್ರವಾಹದ ಪರಿಹಾರದ ಕುರಿತು ಆದ್ಯತೆ ನೀಡುತ್ತಿದ್ದು, ಭಿನ್ನಮತದ ಬಗ್ಗೆ ದಯವಿಟ್ಟು ಬೇಡಿ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದರು. ಸಂಸದ ಸಂಗಣ್ಣ ಕರಡಿ, ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್, ಪರಣ್ಣ ಮುನವಳ್ಳಿ, ಹಾಲಪ್ಪ ಆಚಾರ್, ಬಸವರಾಜ ದಡೇಸೂಗೂರು ಸೇರಿದಂತೆ‌ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೈಟ್1:- ಸಿ.ಸಿ. ಪಾಟೀಲ್, ಸಚಿವ.



Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.