ETV Bharat / state

ಅನರ್ಹ ಶಾಸಕರ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಸಚಿವ ಸಿ.ಸಿ. ಪಾಟೀಲ್

author img

By

Published : Nov 1, 2019, 8:47 PM IST

ಅನರ್ಹ ಶಾಸಕರ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ.

ಸಚಿವ ಸಿ.ಸಿ. ಪಾಟೀಲ್

ಕೊಪ್ಪಳ: ಅನರ್ಹ ಶಾಸಕರ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಪಕ್ಷಕ್ಕಿಂತ ನಾವು ದೊಡ್ಡವರಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

ಉಪಚುನಾವಣೆಯ ಸಿದ್ದತಾ ಸಭೆಯಲ್ಲಿ ಸಿಎಂ ಬಿಎಸ್​ವೈ ಬೇಸರ ವ್ಯಕ್ತಪಡಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಸತ್ಯಕ್ಕೆ ದೂರವಾದ ಮಾತು. ಯಡಿಯೂರಪ್ಪರಿಗೆ ಬೇಸರವಾಗಿದ್ದನ್ನು ನಿಮಗೆ ಯಾರು ಹೇಳಿದರು? ಎಂದು ಮರು ಪ್ರಶ್ನಿಸಿದರು.

ಸಚಿವ ಸಿ.ಸಿ. ಪಾಟೀಲ್

ಉಪಚುನಾವಣೆಯ ಏಳೆಂಟು ಮತ ಕ್ಷೇತ್ರದ ಕುರಿತಾಗಿ ಈಗಾಗಲೇ ಸಿದ್ದತೆ ಸಭೆ ನಡೆದಿದೆ. ಒಂದೆರಡು ಕ್ಷೇತ್ರದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ ನಿಜ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯಡಿಯೂರಪ್ಪ, ಪಕ್ಷದ ಅಧ್ಯಕ್ಷರು ಹಾಗೂ ಕೋರ್ ಕಮಿಟಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಉಪ ಚುನಾವಣೆಯನ್ನು ನಾವು ಯಶಸ್ವಿಯಾಗಿ ಗೆಲ್ಲುತ್ತೇವೆ. ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ನಾವು ಅವರನ್ನು ಗೆಲ್ಲಿಸುತ್ತೇವೆ ಎಂದರು.

ಕೊಪ್ಪಳ: ಅನರ್ಹ ಶಾಸಕರ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಪಕ್ಷಕ್ಕಿಂತ ನಾವು ದೊಡ್ಡವರಲ್ಲ, ಹೈಕಮಾಂಡ್ ನಿರ್ಧಾರವೇ ಅಂತಿಮ ಎಂದರು.

ಉಪಚುನಾವಣೆಯ ಸಿದ್ದತಾ ಸಭೆಯಲ್ಲಿ ಸಿಎಂ ಬಿಎಸ್​ವೈ ಬೇಸರ ವ್ಯಕ್ತಪಡಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಸತ್ಯಕ್ಕೆ ದೂರವಾದ ಮಾತು. ಯಡಿಯೂರಪ್ಪರಿಗೆ ಬೇಸರವಾಗಿದ್ದನ್ನು ನಿಮಗೆ ಯಾರು ಹೇಳಿದರು? ಎಂದು ಮರು ಪ್ರಶ್ನಿಸಿದರು.

ಸಚಿವ ಸಿ.ಸಿ. ಪಾಟೀಲ್

ಉಪಚುನಾವಣೆಯ ಏಳೆಂಟು ಮತ ಕ್ಷೇತ್ರದ ಕುರಿತಾಗಿ ಈಗಾಗಲೇ ಸಿದ್ದತೆ ಸಭೆ ನಡೆದಿದೆ. ಒಂದೆರಡು ಕ್ಷೇತ್ರದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ ನಿಜ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಯಡಿಯೂರಪ್ಪ, ಪಕ್ಷದ ಅಧ್ಯಕ್ಷರು ಹಾಗೂ ಕೋರ್ ಕಮಿಟಿಯ ತೀರ್ಮಾನವೇ ಅಂತಿಮವಾಗಿರುತ್ತದೆ. ಉಪ ಚುನಾವಣೆಯನ್ನು ನಾವು ಯಶಸ್ವಿಯಾಗಿ ಗೆಲ್ಲುತ್ತೇವೆ. ಬಿಜೆಪಿಯಿಂದ ಯಾರೇ ಅಭ್ಯರ್ಥಿಯಾದರೂ ನಾವು ಅವರನ್ನು ಗೆಲ್ಲಿಸುತ್ತೇವೆ ಎಂದರು.

Intro:Body:ಕೊಪ್ಪಳ:-ಅನರ್ಹ ಶಾಸಕರ ಬಗ್ಗೆ ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಸಿ.ಸಿ. ಪಾಟೀಲ್ ಹೇಳಿದ್ದಾರೆ. ಕೊಪ್ಪಳದಲ್ಲಿ ಮಾತನಾಡಿದ ಅವರು, ಅನರ್ಹ ಶಾಸಕರ ಪರವಾಗಿ ಪಕ್ಷದ ಹೈಕಮಾಂಡ್ ತಿರ್ಮಾನ ಕೈಗೊಳ್ಳುತ್ತದೆ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾವೆಲ್ಲರೂ ಬದ್ಧವಾಗಿರುತ್ತೇವೆ.‌ ಪಕ್ಷಕ್ಕಿಂತ ನಾವ್ಯಾರು ದೊಡ್ಡವರಲ್ಲ ಎಂದು ಸಚಿವ ಸಿ.ಸಿ. ಪಾಟೀಲ್ ಹೇಳಿದರು. ಇನ್ನು ಉಪಚುನಾವಣೆಯ ಸಿದ್ದತಾ ಸಭೆಯಲ್ಲಿ ಯಡಿಯೂರಪ್ಪ ಅವರು ಬೇಸರ ವ್ಯಕ್ತಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದೆಲ್ಲ ಸತ್ಯಕ್ಕೆ ದೂರವಾದ ಮಾತು. ಯಡಿಯೂರಪ್ಪ ಅವರಿಗೆ ಬೇಸರವಾಗಿದ್ದನ್ನು ನಿಮಗೆ ಯಾರು ಹೇಳಿದರು ಎಂದು ಪ್ರಶ್ನಿಸಿದರು. ಇನ್ನು ಏಳೆಂಟು ಮತ ಕ್ಷೇತ್ರದ ಸಿದ್ದತೆ ಸಭೆ ನಡೆದಿದೆ. ಒಂದೆರಡು ಕ್ಷೇತ್ರದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಪಕ್ಷದ ಅಧ್ಯಕ್ಷರ, ಯಡಿಯೂರಪ್ಪ ಹಾಗೂ ಕೋರ್ ಕಮೀಟಿಯ ತೀರ್ಮಾನ ಅಂತಿಮ. ಈ ತೀರ್ಮಾನಕ್ಕೆ ನಾವು ಬದ್ದವಾಗಿರುತ್ತೇವೆ‌. ಉಪ ಚುನಾವಣೆಯನ್ನು ನಾವು ಯಶಸ್ವಿಯಾಗಿ ಗೆಲ್ಲುತ್ತೇವೆ. ಬಿಜೆಪಿ ಪರ ಅಭ್ಯರ್ಥಿಗಳು ಯಾರೆ ಆದರೂ ಅವರನ್ನು ನಾವು ಗೆಲ್ಲಿಸುತ್ತೇವೆ ಎಂದು ಸಚಿವ ಸಿ.ಸಿ. ಪಾಟೀಲ್ ಇದೇ ಸಂದರ್ಭದಲ್ಲಿ ಹೇಳಿದರು.

ಬೈಟ್1:- ಸಿ.ಸಿ. ಪಾಟೀಲ್, ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ.Conclusion:

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.