ETV Bharat / state

ಕೊಪ್ಪಳ: ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಶಾಸಕ ಹಿಟ್ನಾಳ್​​ ಭೇಟಿ - ಕೊಪ್ಪಳದಲ್ಲಿ ನಿನ್ನೆ ಸುರಿದ ಭೀಕರ ಮಳೆ

ಕೊಪ್ಪಳದಲ್ಲಿ ನಿನ್ನೆ ಸುರಿದ ಭೀಕರ ಮಳೆಯಿಂದಾಗಿ ಕುವೆಂಪು ನಗರದ ಕೆಲ ಮನೆಗಳಿಗೆ ನೀರು ನುಗ್ಗಿದ್ದು, ಇಂದು ಶಾಸಕ ರಾಘವೇಂದ್ರ ಹಿಟ್ನಾಳ್​​ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಹಿಟ್ನಾಲ್
author img

By

Published : Sep 26, 2019, 5:31 PM IST

ಕೊಪ್ಪಳ: ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಕೊಪ್ಪಳದ ಕುವೆಂಪು ನಗರಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು.

ಗವಿಮಠದ ಹಿಂಭಾಗದಲ್ಲಿರುವ ಕುವೆಂಪು ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು ಹಾಗೂ ಪುಸ್ತಕಗಳು ಸೇರಿದಂತೆ ವಸ್ತುಗಳು ಹಾನಿಗೊಳಗಾಗಿವೆ ಎಂದು ಶಾಸಕರ ಎದುರು ಜನರು ಅಳಲು ತೋಡಿಕೊಂಡರು.

ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಹಿಟ್ನಾಲ್

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ನಗರದ ಎರಡು ವಾರ್ಡ್ ಗಳಲ್ಲಿ‌ ಮಳೆಯಿಂದು ಸುಮಾರು 17 ಕುಟುಂಬಗಳಿಗೆ ತೊಂದರೆಯಾಗಿದೆ. ಮನೆಯಲ್ಲಿದ್ದ ಆಹಾರ ಸಾಮಾಗ್ರಿ ಹಾಗೂ ಇತರೆ ವಸ್ತುಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವಂತೆ ಈಗಾಗಲೇ ತಹಸೀಲ್ದಾರರಿಗೆ ಸೂಚಿಸಲಾಗಿದೆ. ಶೀಘ್ರವೇ ಅವರಿಗೆ ನಿಯಮಾನುಸಾರವಾಗಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಕೊಪ್ಪಳ: ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ಹಿನ್ನೆಲೆಯಲ್ಲಿ ಕೊಪ್ಪಳದ ಕುವೆಂಪು ನಗರಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು.

ಗವಿಮಠದ ಹಿಂಭಾಗದಲ್ಲಿರುವ ಕುವೆಂಪು ನಗರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನೀರು ನುಗ್ಗಿದ ಪರಿಣಾಮ ದವಸ ಧಾನ್ಯಗಳು ಹಾಗೂ ಪುಸ್ತಕಗಳು ಸೇರಿದಂತೆ ವಸ್ತುಗಳು ಹಾನಿಗೊಳಗಾಗಿವೆ ಎಂದು ಶಾಸಕರ ಎದುರು ಜನರು ಅಳಲು ತೋಡಿಕೊಂಡರು.

ಹಾನಿ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ ಹಿಟ್ನಾಲ್

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ನಗರದ ಎರಡು ವಾರ್ಡ್ ಗಳಲ್ಲಿ‌ ಮಳೆಯಿಂದು ಸುಮಾರು 17 ಕುಟುಂಬಗಳಿಗೆ ತೊಂದರೆಯಾಗಿದೆ. ಮನೆಯಲ್ಲಿದ್ದ ಆಹಾರ ಸಾಮಾಗ್ರಿ ಹಾಗೂ ಇತರೆ ವಸ್ತುಗಳು ಹಾನಿಗೊಳಗಾಗಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವಂತೆ ಈಗಾಗಲೇ ತಹಸೀಲ್ದಾರರಿಗೆ ಸೂಚಿಸಲಾಗಿದೆ. ಶೀಘ್ರವೇ ಅವರಿಗೆ ನಿಯಮಾನುಸಾರವಾಗಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

Intro:


Body:ಕೊಪ್ಪಳ:- ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಗಳಿಗೆ ನೀರು ನುಗ್ಗಿದ ಕೊಪ್ಪಳದ ಕುವೆಂಪು ನಗರಕ್ಕೆ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ತಹಸೀಲ್ದಾರ್ ಜೆ.ಬಿ. ಮಜ್ಜಗಿ ಹಾಗೂ ನಗರಸಭೆ ಅಧಿಕಾರಿಗಳು ಭೇಟಿ ನೀಡಿದರು. ಗವಿಮಠದ ಹಿಂಭಾಗದಲ್ಲಿರುವ ಕುವೆಂಪು ನಗರಕ್ಕೆ ಭೇಟಿ ನೀಡಿದ ಅವರು, ಮಳೆಯಿಂದಾಗಿ‌ ನೀರು ನುಗ್ಗಿದ್ದ ಮನಿಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ನೀರು ನುಗ್ಗಿದ ಪರಿಣಾಮದಿಂದ ದವಸ ಧಾನ್ಯಗಳು ಹಾಗೂ ಪುಸ್ತಕಗಳು ಸೇರಿದಂತೆ ವಸ್ತುಗಳು ಹಾನಿಗೊಳಗಾಗಿವೆ ಎಂದು ಶಾಸಕರ ಎದುರು ಜನರು ಅಳಲು ತೋಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಅವರು, ನಗರದ ಎರಡು ವಾರ್ಡ್ ಗಳಲ್ಲಿ‌ ಮಳೆಯಿಂದು ಸುಮಾರು 17 ಕುಟುಂಬಗಳಿಗೆ ತೊಂದರೆಯಾಗಿದೆ. ಮನೆಯಲ್ಲಿದ್ದ ಆಹಾರ ಸಾಮಾಗ್ರಿ ಹಾಗೂ ಇತರೆ ವಸ್ತುಗಳಜ ಹಾನಿಗೊಳಗಾಗಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯುವಂತೆ ಈಗಾಗಲೇ ತಹಸೀಲ್ದಾರರಿಗೆ ಸೂಚಿಸಲಾಗಿದೆ. ಶೀಘ್ರವೇ ಅವರಿಗೆ ನಿಯಮಾನುಸಾರವಾಗಿ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಬೈಟ್1:- ಕೆ. ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕ.


Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.