ಕೊಪ್ಪಳ: ಕೊರೊನಾ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಅಲ್ಲಲ್ಲಿ ಸಾಕಷ್ಟು ಕೆಲಸಗಳಾಗುತ್ತಿವೆ. ಜಿಲ್ಲೆಯ ಕೋವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಂಗೀತ ಕಾರ್ಯಕ್ರಮ ನಡೆದಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿಯಲ್ಲಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ಸಂಗೀತ ಕಾರ್ಯಕ್ರಮ ನಡೆದಿದೆ. ಮಲ್ಲಿಕಾರ್ಜನಸ್ವಾಮಿ ಎಂಬುವವರು ನಡೆಸಿಕೊಟ್ಟಿರುವ ಈ ಸಂಗೀತ ಕಾರ್ಯಕ್ರಮಕ್ಕೆ ದುರ್ಗಾ ಪ್ರಸಾದ್ ಎಂಬುವವರು ತಬಲಾ ನುಡಿಸಿ ಸಾಥ್ ನೀಡಿದರು.
ಇದನ್ನೂ ಓದಿ: ಹೂವಿನ ವ್ಯಾಪಾರ ಕುಸಿತ: ಬೆಳೆ ನಾಶಪಡಿಸಿದ ರೈತ
ಈ ಕೋವಿಡ್ ಕೇರ್ ಸೆಂಟರ್ನಲ್ಲಿ ಸುಮಾರು 30 ಜನ ಸೋಂಕಿತರು ಇದ್ದಾರೆ. ಸೋಂಕಿತರಿಗೆ ಯಾವುದೇ ರೀತಿಯ ಬೇಸರವಾಗಬಾರದು, ಮಾನಸಿಕವಾಗಿ ಕುಗ್ಗಬಾರದು ಎಂಬ ಉದ್ದೇಶದಿಂದ ಹಾಗೂ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಸಂಗೀತ ಕಾರ್ಯಕ್ರಮ ನಡೆಸಲಾಗಿದೆ. ಸೋಂಕಿತರು ಈ ಸಂಗೀತ ಕಾರ್ಯಕ್ರಮವನ್ನು ಆನಂದಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.