ಗಂಗಾವತಿ: ಡಿ.9ರಂದು ನಡೆಯಲಿರುವ ಹನುಮ ಜಯಂತಿ ಅಂಗವಾಗಿ ನಗರದಲ್ಲಿ ಸಂಕೀರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳುವ ಹನುಮ ಮಾಲಾಧಾರಿಗಳಿಗೆ ಫಲ-ಪುಷ್ಪ ನೀಡಲು ಅವಕಾಶ ನೀಡಬೇಕು ಎಂದು ಮುಸ್ಲಿಂ ಸಮುದಾಯದ ಮುಖಂಡರು ಆಪೇಕ್ಷೆ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ಜಿಲ್ಲಾ ಎಸ್ಪಿ ಸಂಗೀತಾ ಅವರನ್ನು ಭೇಟಿ ಮಾಡಿದ ನಗರದ ಜುಮ್ಮಾ ಮಸೀದಿ ಅಧ್ಯಕ್ಷ ನವಾಬ್ ಸಾಬ್ ನೇತೃತ್ವದಲ್ಲಿನ ಮುಸ್ಲಿಂ ಮುಖಂಡರು, ಹನುಮನ ಭಕ್ತರಿಗೆ ನಮ್ಮ ಸಮುದಾಯದಿಂದ ಹಣ್ಣು-ಹೂವು ನೀಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದಾರೆ.
ಸಂಕೀರ್ತನಾ ಯಾತ್ರೆ ನಡೆಸುವ ಸಂದರ್ಭದಲ್ಲಿ ಭಕ್ತರಿಗೆ ಮತ್ತು ಮೆರವಣಿಗೆಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡಿಕೊಳ್ಳುತ್ತೇವೆ. ಈ ಮೂಲಕ ಸೌಹಾರ್ದ ಕಾಪಾಡುತ್ತೇವೆ ಎಂದು ಮುಸ್ಲಿಂ ಸಮುದಾಯದ ಮುಖಂಡರು ಮನವಿ ಮಾಡಿದರು.