ಗಂಗಾವತಿ: ಕೊರೊನಾ ಹಿನ್ನೆಲೆ ಕರ್ನಾಟಕ ಆರೋಗ್ಯ ಸಂವರ್ಧನ ಪ್ರತಿಷ್ಠಾನದಿಂದ ಗಂಗಾವತಿ ಹಾಗೂ ಕನಕಗಿರಿ ತಾಲೂಕಿನಲ್ಲಿರುವ ಹೆಚ್ಐವಿ ಪೀಡಿತ ಮಕ್ಕಳಿಗೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳ ಕಿಟ್ ಉಚಿತವಾಗಿ ವಿತರಿಸಲಾಯಿತು.
ಇಲ್ಲಿನ ಸರ್ಕಾರಿ ಉಪವಿಭಾಗ ಆಸ್ಪತ್ರೆಯಲ್ಲಿ ಕಿಟ್ಗಳನ್ನು ಕೊಪ್ಪಳದ ಸುರಕ್ಷಾ ಎಂಬ ಸರ್ಕಾರೇತರ ಸಂಸ್ಥೆಯ ಸಿಬ್ಬಂದಿ ಮೂಲಕ ಹೆಚ್ಐವಿ ಸೋಂಕಿತ 70 ಮಕ್ಕಳಿಗೆ ವಿತರಿಸಲಾಯಿತು. ಲಾಕ್ಡೌನ್ ಸಂದರ್ಭದಲ್ಲಿ ಕೆಲಸವಿಲ್ಲದ ಪಾಲಕರ ಮಕ್ಕಳಿಗೆ ಉತ್ತಮ ಆಹಾರ ಸಿಗಲಿ ಎಂಬ ಕಾರಣಕ್ಕೆ ಈ ಕಿಟ್ ವಿತರಿಸಲಾಯಿತು ಎಂದು ವಿತರಣೆಯ ನೇತೃತ್ವ ವಹಿಸಿದ್ದ ಎನ್ಜಿಒ ಸಂಸ್ಥೆಯ ಪಾರ್ವತಿ ಹೇಳಿದರು.
ಅಕ್ಕಿ, ಬೇಳೆ, ಎಣ್ಣೆ, ಸಕ್ಕರೆ, ಬೆಲ್ಲ, ಜೀರಿಗೆ, ಸಾಸಿವೆ, ಉಪ್ಪಿಟ್ಟು ರವೆ, ಸೋಪು ಸೇರಿದಂತೆ ಇತರೆ ಪೌಷ್ಟಿಕಾಂಶಯುಕ್ತ ಆಹಾರ ಪದಾರ್ಥಗಳ ಕಿಟ್ ನೀಡಲಾಗಿದೆ.