ETV Bharat / state

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯದ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಆಕ್ರೋಶ - ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯದ ಸಮಾಜ ಕಲ್ಯಾಣ ಇಲಾಖೆ

ಅರ್ಧ ಶೈಕ್ಷಣಿಕ ವರ್ಷ ಕಳೆದರೂ ಸಮಾಜ ಕಲ್ಯಾಣ‌ ಇಲಾಖೆ ಈವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆದಿಲ್ಲವೆಂದು ಕೊಪ್ಪಳ ಮತ್ತು ಗಂಗಾವತಿಯಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆಯದ ಸಮಾಜ ಕಲ್ಯಾಣ ಇಲಾಖೆ ವಿರುದ್ಧ ಆಕ್ರೋಶ
author img

By

Published : Nov 6, 2019, 5:54 PM IST

ಕೊಪ್ಪಳ: ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು ಹಾಗೂ ವಿದ್ಯಾರ್ಥಿಗಳ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನೆ ನಡೆಸಿ, ತಹಶಿಲ್ದಾರ್​ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಮಾಜ ಕಲ್ಯಾಣ‌ ಇಲಾಖೆ ಈವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆದಿಲ್ಲ. ಈಗಾಗಲೇ ಅರ್ಧ ಶೈಕ್ಷಣಿಕ ವರ್ಷ ಮುಗಿದಿದೆ. ಆದರೂ ಅರ್ಜಿ ಕರೆದಿಲ್ಲ. ವಿದ್ಯಾರ್ಥಿಗಳು ಹಾಗೂ ಪಾಲಕರು ನಿತ್ಯವೂ ಸೈಬರ್ ಸೆಂಟರ್​ಗಳಿಗೆ ಹಾಗೂ ಶಾಲೆಗಳಿಗೆ ಅರ್ಜಿ ಹಾಕಲು ಓಡಾಡುತ್ತಿದ್ದಾರೆ. ಅರ್ಜಿ ಸಲ್ಲಿಸದಿದ್ದರೆ ಹೊಸ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗುತ್ತಾರೆ. ಹೀಗಾಗಿ ಕೂಡಲೇ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನು, ಹಿಂದುಳಿದ ವರ್ಗಗಳ ಇಲಾಖೆಯು ವಿದ್ಯಾರ್ಥಿ ವೇತನದ ಅರ್ಜಿ ವಿಷಯದಲ್ಲಿ ಸಾಕಷ್ಟು ಗೊಂದಲ ಉಂಟುಮಾಡಿದೆ. ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳನ್ನೂ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಬೇಕು ಹಾಗೂ ಎಲ್ಲಾ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮತ್ತೊಂದೆಡೆ ಗಂಗಾವತಿಯಲ್ಲೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಾಲೂಕು ಪಂಚಾಯತ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

ಕೊಪ್ಪಳ: ಅರ್ಜಿ ಸಲ್ಲಿಸಿದ ಎಲ್ಲ ವಿದ್ಯಾರ್ಥಿಗಳಿಗೂ ಸರ್ಕಾರ ವಿದ್ಯಾರ್ಥಿ ವೇತನ ನೀಡಬೇಕು ಹಾಗೂ ವಿದ್ಯಾರ್ಥಿಗಳ ಇನ್ನಿತರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಎಸ್ಎಫ್ಐ ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಪ್ರತಿಭಟನೆ ನಡೆಸಿದರು.

ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಿಂದ ಅಶೋಕ ವೃತ್ತದವರೆಗೆ ಪ್ರತಿಭಟನೆ ನಡೆಸಿ, ತಹಶಿಲ್ದಾರ್​ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಸಮಾಜ ಕಲ್ಯಾಣ‌ ಇಲಾಖೆ ಈವರೆಗೆ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಕರೆದಿಲ್ಲ. ಈಗಾಗಲೇ ಅರ್ಧ ಶೈಕ್ಷಣಿಕ ವರ್ಷ ಮುಗಿದಿದೆ. ಆದರೂ ಅರ್ಜಿ ಕರೆದಿಲ್ಲ. ವಿದ್ಯಾರ್ಥಿಗಳು ಹಾಗೂ ಪಾಲಕರು ನಿತ್ಯವೂ ಸೈಬರ್ ಸೆಂಟರ್​ಗಳಿಗೆ ಹಾಗೂ ಶಾಲೆಗಳಿಗೆ ಅರ್ಜಿ ಹಾಕಲು ಓಡಾಡುತ್ತಿದ್ದಾರೆ. ಅರ್ಜಿ ಸಲ್ಲಿಸದಿದ್ದರೆ ಹೊಸ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದಿಂದ ವಂಚಿತರಾಗುತ್ತಾರೆ. ಹೀಗಾಗಿ ಕೂಡಲೇ ವಿದ್ಯಾರ್ಥಿ ವೇತನಕ್ಕಾಗಿ ಆನ್ಲೈನ್ ಅರ್ಜಿ ಕರೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಇನ್ನು, ಹಿಂದುಳಿದ ವರ್ಗಗಳ ಇಲಾಖೆಯು ವಿದ್ಯಾರ್ಥಿ ವೇತನದ ಅರ್ಜಿ ವಿಷಯದಲ್ಲಿ ಸಾಕಷ್ಟು ಗೊಂದಲ ಉಂಟುಮಾಡಿದೆ. ಅರ್ಜಿ ಸಲ್ಲಿಸುವ ಎಲ್ಲ ವಿದ್ಯಾರ್ಥಿಗಳನ್ನೂ ವಿದ್ಯಾರ್ಥಿ ವೇತನಕ್ಕೆ ಪರಿಗಣಿಸಬೇಕು ಹಾಗೂ ಎಲ್ಲಾ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಮತ್ತೊಂದೆಡೆ ಗಂಗಾವತಿಯಲ್ಲೂ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ತಾಲೂಕು ಪಂಚಾಯತ್​ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.

Intro:ವಿದ್ಯಾಥರ್ಿ ವೇತನ ಸ್ಥಗಿತಗೊಳಿಸಿ ರಾಜ್ಯ ಸಕರ್ಾರದ ನಡೆಯನ್ನು ವಿರೋಧಿಸಿ ನಗರದ ವಿವಿಧ ಕಾಲೇಜು, ಶಾಲೆಯ ನೂರಾರು ಮಕ್ಕಳು ಇಲ್ಲಿನ ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಆಕಿ ಪ್ರತಿಭಟನೆ ನಡೆಸಿದರು.
Body:ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿದ ವಿದ್ಯಾಥರ್ಿಗಳು
ಗಂಗಾವತಿ:
ವಿದ್ಯಾಥರ್ಿ ವೇತನ ಸ್ಥಗಿತಗೊಳಿಸಿ ರಾಜ್ಯ ಸಕರ್ಾರದ ನಡೆಯನ್ನು ವಿರೋಧಿಸಿ ನಗರದ ವಿವಿಧ ಕಾಲೇಜು, ಶಾಲೆಯ ನೂರಾರು ಮಕ್ಕಳು ಇಲ್ಲಿನ ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಆಕಿ ಪ್ರತಿಭಟನೆ ನಡೆಸಿದರು.
ವಿದ್ಯಾಥರ್ಿ ಸಂಘಟನೆ ಎಸ್ಎಫ್ಐನ ಗಂಗಾವತಿ ತಾಲ್ಲೂಕು ಘಟಕದ ನೇತೃತ್ವದಲ್ಲಿ ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಿದ ವಿದ್ಯಾಥರ್ಿಗಳು ಸಕರ್ಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಕೆಲಕಾಲ ಪ್ರತಿಭಟನೆ ನಡೆಸಿದರು.
ಸಂಘಟನೆಯ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಮರೇಶ ಕಡಗದ ಮಾತನಾಡಿ, ವಿದ್ಯಾಥರ್ಿ ವೇತನ ಹಿಂಪಡೆಯುವ ಮೂಲಕ ರಾಜ್ಯ ಸಕರ್ಾರ ದಲಿತ, ಶೋಷಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿದರು.


Conclusion:ಸಂಘಟನೆಯ ಕೊಪ್ಪಳ ಜಿಲ್ಲಾ ಘಟಕದ ಅಧ್ಯಕ್ಷ ಅಮರೇಶ ಕಡಗದ ಮಾತನಾಡಿ, ವಿದ್ಯಾಥರ್ಿ ವೇತನ ಹಿಂಪಡೆಯುವ ಮೂಲಕ ರಾಜ್ಯ ಸಕರ್ಾರ ದಲಿತ, ಶೋಷಿತ ಮತ್ತು ಹಿಂದುಳಿದ ವರ್ಗಗಳ ಮಕ್ಕಳ ಶಿಕ್ಷಣದ ಹಕ್ಕನ್ನು ಕಸಿಯುತ್ತಿದೆ ಎಂದು ಆರೋಪಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.