ETV Bharat / state

ಕೊರೊನಾಗಿಂತ ಹಣ ಮುಖ್ಯ ಸ್ವಾಮಿ!! ಸಾಮಾಜಿಕ ಅಂತರ ಗಾಳಿಗೆ ತೂರಿ ಬ್ಯಾಂಕ್​ ಮುಂದೆ ಜನಜಾತ್ರೆ

author img

By

Published : May 25, 2021, 12:28 PM IST

ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿದ ಕೂಲಿ ಹಣ ಜಮಾ ಆಗಿರುವುದನ್ನು ತೆಗೆದುಕೊಳ್ಳಲು ಮತ್ತು ವಿವಿಧ ಬ್ಯಾಂಕಿನ ವ್ಯವಹಾರಕ್ಕಾಗಿ ಜನರು ಬ್ಯಾಂಕುಗಳ ಮುಂದೆ ಸೇರಿದ್ದಾರೆ. ಸಾಮಾಜಿಕ ಅಂತರ ಅನ್ನೋದು ಅಲ್ಲಿ ಮಂಗಮಾಯವಾಗಿತ್ತು..

Koppal
Koppal

ಕೊಪ್ಪಳ : ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿಯಾಗಿರುವ ನಡುವೆಯೂ ಮಂಗಳವಾರ ಹಾಗೂ ಬುಧವಾರ ಮಧ್ಯಾಹ್ನವರೆಗೆ ಬ್ಯಾಂಕ್ ವ್ಯವಹಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಗರದಲ್ಲಿ ಬ್ಯಾಂಕುಗಳ ಮುಂದೆ ಜನ ಮುಗಿಬಿದ್ದಿದ್ದಾರೆ.

ಸಾಮಾಜಿಕ ಅಂತರ ಗಾಳಿಗೆ ತೂರಿ ಬ್ಯಾಂಕ್​ ಮುಂದೆ ಜನ..

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ ವಾರ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಬ್ಯಾಂಕುಗಳು ಸಹ ಬಂದ್ ಆಗಿದ್ದವು. ನಿನ್ನೆಯಿಂದ ಮತ್ತೆ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದೆ‌.

ಈ ನಡುವೆ ಜಿಲ್ಲಾಡಳಿತ ಮಂಗಳವಾರ ಹಾಗೂ ಬುಧವಾರ ಎರಡು ದಿನ ಮಧ್ಯಾಹ್ನ 12 ಗಂಟೆಯವರೆಗೆ ಬ್ಯಾಂಕ್ ವ್ಯವಹಾರಕ್ಕೆ ಅವಕಾಶ ನೀಡಿದೆ. ಹೀಗಾಗಿ, ನಗರದ ಬ್ಯಾಂಕುಗಳ ಮುಂದೆ ಬೆಳಗ್ಗೆಯಿಂದಲೇ ಜನರು ಸಾಲುಗಟ್ಟಿ ನಿಂತಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿದ ಕೂಲಿ ಹಣ ಜಮಾ ಆಗಿರುವುದನ್ನು ತೆಗೆದುಕೊಳ್ಳಲು ಮತ್ತು ವಿವಿಧ ಬ್ಯಾಂಕಿನ ವ್ಯವಹಾರಕ್ಕಾಗಿ ಜನರು ಬ್ಯಾಂಕುಗಳ ಮುಂದೆ ಸೇರಿದ್ದಾರೆ. ಸಾಮಾಜಿಕ ಅಂತರ ಅನ್ನೋದು ಅಲ್ಲಿ ಮಂಗಮಾಯವಾಗಿತ್ತು.

ಕೊಪ್ಪಳ : ಜಿಲ್ಲೆಯಲ್ಲಿ ಸಂಪೂರ್ಣ ಲಾಕ್​ಡೌನ್ ಜಾರಿಯಾಗಿರುವ ನಡುವೆಯೂ ಮಂಗಳವಾರ ಹಾಗೂ ಬುಧವಾರ ಮಧ್ಯಾಹ್ನವರೆಗೆ ಬ್ಯಾಂಕ್ ವ್ಯವಹಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ನಗರದಲ್ಲಿ ಬ್ಯಾಂಕುಗಳ ಮುಂದೆ ಜನ ಮುಗಿಬಿದ್ದಿದ್ದಾರೆ.

ಸಾಮಾಜಿಕ ಅಂತರ ಗಾಳಿಗೆ ತೂರಿ ಬ್ಯಾಂಕ್​ ಮುಂದೆ ಜನ..

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಕಳೆದ ವಾರ ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್ ಜಾರಿ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ಬ್ಯಾಂಕುಗಳು ಸಹ ಬಂದ್ ಆಗಿದ್ದವು. ನಿನ್ನೆಯಿಂದ ಮತ್ತೆ ಮೇ 30ರವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಯಲ್ಲಿದೆ‌.

ಈ ನಡುವೆ ಜಿಲ್ಲಾಡಳಿತ ಮಂಗಳವಾರ ಹಾಗೂ ಬುಧವಾರ ಎರಡು ದಿನ ಮಧ್ಯಾಹ್ನ 12 ಗಂಟೆಯವರೆಗೆ ಬ್ಯಾಂಕ್ ವ್ಯವಹಾರಕ್ಕೆ ಅವಕಾಶ ನೀಡಿದೆ. ಹೀಗಾಗಿ, ನಗರದ ಬ್ಯಾಂಕುಗಳ ಮುಂದೆ ಬೆಳಗ್ಗೆಯಿಂದಲೇ ಜನರು ಸಾಲುಗಟ್ಟಿ ನಿಂತಿದ್ದಾರೆ.

ಉದ್ಯೋಗ ಖಾತ್ರಿ ಯೋಜನೆಯಲ್ಲಿ ದುಡಿದ ಕೂಲಿ ಹಣ ಜಮಾ ಆಗಿರುವುದನ್ನು ತೆಗೆದುಕೊಳ್ಳಲು ಮತ್ತು ವಿವಿಧ ಬ್ಯಾಂಕಿನ ವ್ಯವಹಾರಕ್ಕಾಗಿ ಜನರು ಬ್ಯಾಂಕುಗಳ ಮುಂದೆ ಸೇರಿದ್ದಾರೆ. ಸಾಮಾಜಿಕ ಅಂತರ ಅನ್ನೋದು ಅಲ್ಲಿ ಮಂಗಮಾಯವಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.