ETV Bharat / state

ಹಬ್ಬಕ್ಕೂ ಮುಂಚೆ ವ್ಯಾಪಾರಿಗಳಿಗೆ  ಶಾಕ್ ನೀಡಿದ ಅಧಿಕಾರಿಗಳು - Plot farm road clearing operation in gangavati

ಕೊಪ್ಪಳ ಜಿಲ್ಲೆ ಗಂಗಾವತಿಯ ಮಹಾತ್ಮ ಗಾಂಧಿ ವೃತ್ತದಲ್ಲಿನ ಅತಿಕ್ರಮವಾಗಿ ತೆರೆಯಲಾಗಿದ್ದ ಗೂಡಂಗಡಿಗಳನ್ನು ನಗರಸಭೆ ಹಾಗೂ ಡಿವೈಎಸ್​ಪಿ ನೇತೃತ್ವದಲ್ಲಿ ತೆರವುಗೊಳಿಸಲಾಯಿತು. ದೀಪಾವಳಿ ಮುನ್ನ ತೆರವು ಕಾರ್ಯ ಕೈಗೊಂಡಿದ್ದು, ಬೀದಿಬದಿ ವ್ಯಾಪಾರಿಗಳಿಗೆ ನುಗ್ಗಲಾರದ ತುತ್ತಾಗಿದೆ.

ನಗರಸಭೆ ಹಾಗೂ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ಪಾದಚಾರಿ ರಸ್ತೆ ತೆರವು ಕಾರ್ಯಾಚರಣೆ
author img

By

Published : Oct 23, 2019, 10:07 AM IST

ಗಂಗಾವತಿ: ಇನ್ನೇನು ದೀಪಾವಳಿ ಹಬ್ಬ ಆರಂಭವಾಯಿತು ಎನ್ನುವಷ್ಟರಲ್ಲಿ ಪೊಲೀಸ್, ಜೆಸ್ಕಾಂ ಮತ್ತು ನಗರಸಭೆಯ ಅಧಿಕಾರಿಗಳು ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿನ ಬೀದಿಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.

ನಗರಸಭೆ ಹಾಗೂ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ಪಾದಚಾರಿ ರಸ್ತೆ ತೆರವು ಕಾರ್ಯಾಚರಣೆ

ಹಲವು ವರ್ಷಗಳಿಂದ ತಮ್ಮ ಅಂಗಡಿ ಮುಂದಿನ ಪಾದಚಾರಿ ರಸ್ತೆಯನ್ನು ಆಕ್ರಮಿಸಿದ್ದ, ವ್ಯಾಪಾರಿಗಳಿಗೆ ಹಾಗೂ ಪಾದಚಾರಿ ರಸ್ತೆ ಮೇಲೆ ಇಟ್ಟಿದ್ದ ಸಣ್ಣ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡಲಾಯಿತು.

ನಗರಸಭೆ ಪೌರಾಯುಕ್ತ ದೇವಾನಂದ ದೊಡ್ಡಮನಿ ಹಾಗೂ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರು ಸೇರಿ ತೆರವು ಕಾರ್ಯಾಚರಣೆ ನಡೆಸಿದರು.

ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿ, ದೊಡ್ಡ ಅಂಗಡಿಗಳನ್ನು ಕಟ್ಟಿಕೊಂಡಿರುವ ನೂರಾರು ವ್ಯಾಪಾರ ಸಂಕಿರಣ ಕಟ್ಟಡಗಳು ನಗರದ ಪಾದಚಾರಿ ರಸ್ತೆ ಆಕ್ರಮಿಸಿವೆ. ಈ ಬಗ್ಗೆ ಗಮನ ಹರಿಸದ ಅಧಿಕಾರಿಗಳು, ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ ಎಂದು ಗೂಡಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗಂಗಾವತಿ: ಇನ್ನೇನು ದೀಪಾವಳಿ ಹಬ್ಬ ಆರಂಭವಾಯಿತು ಎನ್ನುವಷ್ಟರಲ್ಲಿ ಪೊಲೀಸ್, ಜೆಸ್ಕಾಂ ಮತ್ತು ನಗರಸಭೆಯ ಅಧಿಕಾರಿಗಳು ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿನ ಬೀದಿಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.

ನಗರಸಭೆ ಹಾಗೂ ಪೊಲೀಸ್​ ಅಧಿಕಾರಿಗಳ ನೇತೃತ್ವದಲ್ಲಿ ಪಾದಚಾರಿ ರಸ್ತೆ ತೆರವು ಕಾರ್ಯಾಚರಣೆ

ಹಲವು ವರ್ಷಗಳಿಂದ ತಮ್ಮ ಅಂಗಡಿ ಮುಂದಿನ ಪಾದಚಾರಿ ರಸ್ತೆಯನ್ನು ಆಕ್ರಮಿಸಿದ್ದ, ವ್ಯಾಪಾರಿಗಳಿಗೆ ಹಾಗೂ ಪಾದಚಾರಿ ರಸ್ತೆ ಮೇಲೆ ಇಟ್ಟಿದ್ದ ಸಣ್ಣ ಅಂಗಡಿಗಳ ತೆರವು ಕಾರ್ಯಾಚರಣೆ ಮಾಡಲಾಯಿತು.

ನಗರಸಭೆ ಪೌರಾಯುಕ್ತ ದೇವಾನಂದ ದೊಡ್ಡಮನಿ ಹಾಗೂ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರು ಸೇರಿ ತೆರವು ಕಾರ್ಯಾಚರಣೆ ನಡೆಸಿದರು.

ಕೋಟ್ಯಾಂತರ ರೂಪಾಯಿ ಬಂಡವಾಳ ಹೂಡಿ, ದೊಡ್ಡ ಅಂಗಡಿಗಳನ್ನು ಕಟ್ಟಿಕೊಂಡಿರುವ ನೂರಾರು ವ್ಯಾಪಾರ ಸಂಕಿರಣ ಕಟ್ಟಡಗಳು ನಗರದ ಪಾದಚಾರಿ ರಸ್ತೆ ಆಕ್ರಮಿಸಿವೆ. ಈ ಬಗ್ಗೆ ಗಮನ ಹರಿಸದ ಅಧಿಕಾರಿಗಳು, ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿದ್ದಾರೆ ಎಂದು ಗೂಡಂಗಡಿ ಮಾಲೀಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Intro:ಇನ್ನೇನು ದೀಪಾವಳಿ ಹಬ್ಬ ಆರಂಭವಾಯಿತು ಎನ್ನುವಷ್ಟರಲ್ಲಿ ಪೊಲೀಸ್, ಜೆಸ್ಕಾಂ ಮತ್ತು ನಗರಸಭೆಯ ಅಧಿಕಾರಿಗಳು ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿನ ಬೀದಿಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.
Body:
ಹಬ್ಬಕ್ಕೂ ಮುಂಚೆ ವ್ಯಾಪಾರಿಗಳಿಗೆ ಶಾಕ್ ನೀಡಿದ ಅಧಿಕಾರಿಗಳು
ಗಂಗಾವತಿ:
ಇನ್ನೇನು ದೀಪಾವಳಿ ಹಬ್ಬ ಆರಂಭವಾಯಿತು ಎನ್ನುವಷ್ಟರಲ್ಲಿ ಪೊಲೀಸ್, ಜೆಸ್ಕಾಂ ಮತ್ತು ನಗರಸಭೆಯ ಅಧಿಕಾರಿಗಳು ಇಲ್ಲಿನ ಮಹಾತ್ಮಗಾಂಧಿ ವೃತ್ತದಲ್ಲಿನ ಬೀದಿಬದಿಯ ವ್ಯಾಪಾರಿಗಳಿಗೆ ಶಾಕ್ ನೀಡಿದ್ದಾರೆ.
ಕಳೆದ ಹಲವು ವರ್ಷದಿಂದ ತಮ್ಮ ಅಂಗಡಿಗಳ ಮುಂದೆ ಇರುವ ಫುಟ್ಪಾತ್ ಜಾಗವನ್ನು ಅಲ್ಪ ಪ್ರಮಾಣದಲ್ಲಿ ಅತಿಕ್ರಮಿಸಿ ಗೂಡಂಗಡಿ ಮಾಡಿಕೊಂಡಿದ್ದ ಕೆಲ ಸಣ್ಣಾಪುಟ ವ್ಯಾಪಾರಿಗಳನ್ನೇ ಗುರಿಯಾಗಿಸಿಕೊಂಡ ಅಧಿಕಾರಿಗಳು, ತೆರವು ಕಾಯರ್ಾಚರಣೆ ನಡೆಸಿದ್ದಾರೆ.
ನಗರಸಭೆ ಪೌರಾಯುಕ್ತ ದೇವಾನಂದ ದೊಡ್ಮನಿ ನೇತೃತ್ವದಲ್ಲಿ ನಗರಸಭೆ ಅಧಿಕಾರಿಗಳು ತೆರವು ಕಾಯರ್ಾಚರಣೆ ಮಾಡಿದರು. ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ಪೊಲೀಸ್ ಅಧಿಕಾರಿಗಳು ನಗರಸಭೆ ಸಿಬ್ಬಂದಿಗೆ ಸಾಥ್ ನೀಡಿದರು.
ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ದೊಡ್ಡ ಅಂಗಡಿಗಳನ್ನು ಕಟ್ಟಿಕೊಂಡಿರುವ ನೂರಾರು ವ್ಯಾಪಾರಿ ಸಂಕಿರಣಗಳು ನಗರದಲ್ಲಿ ಫುಟ್ಪಾತ್ ಅತಿಕ್ರಮಿಸಿವೆ. ಈ ಬಗ್ಗೆ ಗಮನ ಹರಿಸಬೇಕಿದ್ದ ಅಧಿಕಾರಿಗಳು, ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂಬ ಅಸಮಧಾನ ಜನರಿಂದ ವ್ಯಕ್ತವಾಯಿತು.
Conclusion:ಕೋಟ್ಯಂತರ ರೂಪಾಯಿ ಬಂಡವಾಳ ಹೂಡಿ ದೊಡ್ಡ ಅಂಗಡಿಗಳನ್ನು ಕಟ್ಟಿಕೊಂಡಿರುವ ನೂರಾರು ವ್ಯಾಪಾರಿ ಸಂಕಿರಣಗಳು ನಗರದಲ್ಲಿ ಫುಟ್ಪಾತ್ ಅತಿಕ್ರಮಿಸಿವೆ. ಈ ಬಗ್ಗೆ ಗಮನ ಹರಿಸಬೇಕಿದ್ದ ಅಧಿಕಾರಿಗಳು, ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ ಎಂಬ ಅಸಮಧಾನ ಜನರಿಂದ ವ್ಯಕ್ತವಾಯಿತು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.