ಕೊಪ್ಪಳ: ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಿಎಎ ಹಾಗೂ ಎನ್ಆರ್ಸಿ ವಿರೋಧಿ ಒಕ್ಕೂಟ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ನಗರದ ನಗರಸಭೆ ಬಳಿ ಇರುವ ಈದ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಯಲಿದೆ. ಬೆಳಗ್ಗೆ 10.30ಕ್ಕೆ ಈ ಬೃಹತ್ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾಧಿಕಾರಿಗಳಿಗೆ ಪ್ರತಿಭಟನಾಕಾರರು ಮನವಿ ಸಲ್ಲಿಸಲಿದ್ದಾರೆ. ಈ ಮೊದಲು ಪ್ರತಿಭಟನಾ ಮೆರವಣಿಗೆಯನ್ನು ಗಡಿಯಾರ ಕಂಬ ಸರ್ಕಲ್ನಿಂದ ಅಶೋಕ ಸರ್ಕಲ್ವರೆಗೆ ನಡೆಸಲು ಸಂಘಟನೆ ಮುಖಂಡರು ಉದ್ದೇಶಿಸಿದ್ದರು.
ಆದರೆ, ನಾಳೆ ಮಧ್ಯರಾತ್ರಿಯವರೆಗೂ 144 ಸೆಕ್ಷನ್ ಜಾರಿಯಲ್ಲಿರುವುದರಿಂದ ಪೊಲೀಸರು ಮೆರವಣಿಗೆಗೆ ಅವಕಾಶ ನೀಡಿಲ್ಲ. ಹೀಗಾಗಿ, ಈದ್ಗಾ ಮೈದಾನದಲ್ಲಿ ಪ್ರತಿಭಟನಾಕಾರುರು ಸೇರಿ ಪ್ರತಿಭಟನೆ ಹಾಗೂ ಬಹಿರಂಗ ಸಭೆ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಈದ್ಗಾ ಮೈದಾನದ ಬಳಿ ಹಾಗೂ ನಗರದ ವಿವಿಧ ಕಡೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರತಿಭಟನೆ ಹಿನ್ನೆಲೆಯಲ್ಲಿ ಈದ್ಗಾ ಮೈದಾನದಲ್ಲಿ ಹಾಗೂ ನಗರದ ವಿವಿಧೆಡೆ ವ್ಯಾಪಕ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಸುಮಾರು 300 ಜನ ಪೊಲೀಸ್ ಹಾಗೂ ಗೃಹರಕ್ಷಕ ದಳ ಸಿಬ್ಬಂದಿ, ಇಬ್ಬರು ಡಿವೈಎಸ್ಪಿ, 6 ಸಿಪಿಐ, 13 ಪಿಎಸ್ಐ ಹಾಗೂ ಒಂದು ಕೆಎಸ್ಆರ್ಪಿ ತುಕಡಿ, ಡಿಎಆರ್ ತುಕಡಿ ಭದ್ರಗೆತೆ ನಿಯೋಜಿಸಲಾಗಿದೆ. ಯಾವುದೇ ಅಹಿತಕರ ಘಟನೆ ಜರುಗದಂತೆ ಖಾಕಿಪಡೆ ಹದ್ದಿನ ಕಣ್ಣಿಟ್ಟಿದೆ.