ETV Bharat / state

ಆಶಾ ಕಾರ್ಯಕರ್ತೆಯರಿಗೆ ಜೀವನ ಭದ್ರತೆ ಕಲ್ಪಿಸಲು ಕರವೇ ಒತ್ತಾಯ - ಕರ್ನಾಟಕ ರಕ್ಷಣಾ ವೇದಿಕೆ

ಆಶಾ ಕಾರ್ಯಕರ್ತೆಯರನ್ನು ಕೊರೊನಾ ಸಂದರ್ಭದಲ್ಲಿ ಸೇವೆಗೆ ಬಳಸಿಕೊಂಡು, ಅವರಿಗೆ ಕೊರೊನಾ ವಾರಿಯರ್ಸ್​ ಎಂದು ಹೂಮಳೆ ಗೈದರೇ ಅವರ ಹೊಟ್ಟೆ ತುಂಬುವುದಿಲ್ಲ. ಕೂಡಲೇ ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

Provide life security to Asha activists
ಕರವೇ ಒತ್ತಾಯ
author img

By

Published : Jul 6, 2020, 8:56 PM IST

ಕುಷ್ಟಗಿ (ಕೊಪ್ಪಳ) : ಕೊರೊನಾ ಸಂದರ್ಭದಲ್ಲಿ ಮುಂಚೂಣಿಯಾಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತರಿಗೆ, ಸೇವಾ ಹಾಗೂ ಜೀವನ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್ ಶಿವರಾಮೇಗೌಡ ಬಣ) ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್‌ ವಿಜಯಾ ಮುಂಡರಗಿ ಅವರಿಗೆ ಮನವಿ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರು 12 ಸಾವಿರ ರೂ. ಗೌರವಧನ ನಿಗದಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರ ಸ್ಪಂದಿಸಿಲ್ಲ. ಆದ್ದರಿಂದ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಹೋರಾಟಕ್ಕೆ ಕರವೇ ಸಂಘಟನೆ ಬೆಂಬಲಿಸಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರನ್ನು ಕೊರೊನಾ ಸಂದರ್ಭದಲ್ಲಿ ಸೇವೆಗೆ ಬಳಸಿಕೊಂಡು, ಅವರಿಗೆ ಕೊರೊನಾ ವಾರಿಯರ್ಸ್​ ಎಂದು ಹೂಮಳೆ ಗೈದರೇ ಅವರ ಹೊಟ್ಟೆ ತುಂಬುವುದಿಲ್ಲ. ಕೂಡಲೇ ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಜಿಲ್ಲಾಧ್ಯಕ್ಷ ಅಜ್ಜಪ್ಪ ಕರಡಕಲ್, ಮಲ್ಲಿಕಾರ್ಜುನ ಗುಗ್ರಿ, ಮಾರುತಿ ಹಲಗಿ, ಯಮನೂರ ಭೋವಿ, ಹೊನ್ನಪ್ಪ ಭೋವಿ ಮತ್ತಿತರರಿದ್ದರು.

ಕುಷ್ಟಗಿ (ಕೊಪ್ಪಳ) : ಕೊರೊನಾ ಸಂದರ್ಭದಲ್ಲಿ ಮುಂಚೂಣಿಯಾಗಿ ಕಾರ್ಯ ನಿರ್ವಹಿಸುವ ಆಶಾ ಕಾರ್ಯಕರ್ತರಿಗೆ, ಸೇವಾ ಹಾಗೂ ಜೀವನ ಭದ್ರತೆ ಕಲ್ಪಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಹೆಚ್ ಶಿವರಾಮೇಗೌಡ ಬಣ) ಕಾರ್ಯಕರ್ತರು ಗ್ರೇಡ್-2 ತಹಶೀಲ್ದಾರ್‌ ವಿಜಯಾ ಮುಂಡರಗಿ ಅವರಿಗೆ ಮನವಿ ಸಲ್ಲಿಸಿದರು.

ಆಶಾ ಕಾರ್ಯಕರ್ತೆಯರು 12 ಸಾವಿರ ರೂ. ಗೌರವಧನ ನಿಗದಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರ ಸ್ಪಂದಿಸಿಲ್ಲ. ಆದ್ದರಿಂದ ಜುಲೈ 10ರಿಂದ ಸೇವೆ ಸ್ಥಗಿತಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಈ ಹೋರಾಟಕ್ಕೆ ಕರವೇ ಸಂಘಟನೆ ಬೆಂಬಲಿಸಲಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರನ್ನು ಕೊರೊನಾ ಸಂದರ್ಭದಲ್ಲಿ ಸೇವೆಗೆ ಬಳಸಿಕೊಂಡು, ಅವರಿಗೆ ಕೊರೊನಾ ವಾರಿಯರ್ಸ್​ ಎಂದು ಹೂಮಳೆ ಗೈದರೇ ಅವರ ಹೊಟ್ಟೆ ತುಂಬುವುದಿಲ್ಲ. ಕೂಡಲೇ ಅವರ ಬೇಡಿಕೆಯನ್ನು ಸರ್ಕಾರ ಈಡೇರಿಸಬೇಕೆಂದು ಮನವಿಯಲ್ಲಿ ತಿಳಿಸಲಾಗಿದೆ.

ಜಿಲ್ಲಾಧ್ಯಕ್ಷ ಅಜ್ಜಪ್ಪ ಕರಡಕಲ್, ಮಲ್ಲಿಕಾರ್ಜುನ ಗುಗ್ರಿ, ಮಾರುತಿ ಹಲಗಿ, ಯಮನೂರ ಭೋವಿ, ಹೊನ್ನಪ್ಪ ಭೋವಿ ಮತ್ತಿತರರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.