ಕುಷ್ಟಗಿ/ಕೊಪ್ಪಳ: ಕೊರೊನಾ ನಿಯಂತ್ರಣದ ಲಾಕ್ಡೌನ್ ಸಂದರ್ಭದಲ್ಲಿ ಜನಜಾಗೃತಿ, ಉತ್ತಮ ಕಾರ್ಯನಿರ್ವಹಣೆ ಹಿನ್ನೆಲೆಯಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣಾ ಪಿಎಸ್ಐ ಗೀತಾಂಜಲಿ ಶಿಂಧೆ ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಉತ್ತಮ ಸೇವೆ ಪರಿಗಣಿಸಿರುವ ರಾಜ್ಯದ 115 ಪೊಲೀಸ್ ಅಧಿಕಾರಿಗಳಲ್ಲಿ ಕುಷ್ಟಗಿ ತಾಲೂಕಿನ ತಾವರಗೇರಾ ಪೊಲೀಸ್ ಠಾಣೆಯ ಪಿಎಸ್ಐ ಗೀತಾಂಜಲಿ ಶಿಂಧೆ ಒಬ್ಬರಾಗಿದ್ದಾರೆ. 2020ರ ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ನಿಯಂತ್ರಣದ ಹಿನ್ನೆಲೆಯಲ್ಲಿ ಜನಜಾಗೃತಿ ಮೂಡಿಸಿ ಉತ್ತಮ ಸೇವೆಯೊಂದಿಗೆ ಕಡಿಮೆ ಶೇಕಡಾವಾರು ಪ್ರಕರಣಗಳ ತನಿಖೆ ಬಾಕಿ ಇರಿಸಿಕೊಂಡಿರುವುದು, ತುರ್ತಾಗಿ ಅಪರಾಧ ಪ್ರಕರಣಗಳ ಪತ್ತೆ ಹಚ್ಚಿ, ವಸ್ತುಗಳ ರಿಕವರಿ ಮಾಡಿದ ಹಿನ್ನೆಲೆಯಲ್ಲಿ ಈ ಮಾನ್ಯತೆ ಸಿಕ್ಕಿದೆ.
ಕುಷ್ಟಗಿ ತಾಲೂಕಿನಲ್ಲಿ ಮೊದಲ ಸಿಎಂ ಪದಕ ಪಡೆದ ಮಹಿಳಾ ಸಬ್ ಇನ್ಸ್ಪೆಕ್ಟರ್ ಎನ್ನುವ ಕೀರ್ತಿಗೆ ಗೀತಾಂಜಲಿ ಶಿಂಧೆ ಪಾತ್ರರಾಗಿದ್ದಾರೆ.