ETV Bharat / state

ಗಡುವು ನೀಡಿ ಸಾಂಕೇತಿಕ ಪ್ರತಿಭಟನೆ ಹಿಂಪಡೆದ ಹೊರಗುತ್ತಿಗೆ ನೌಕರರ ಸಂಘ

author img

By

Published : May 21, 2020, 10:29 PM IST

Updated : May 21, 2020, 11:19 PM IST

ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಗೆಗಾಗಿ ಸರ್ಕಾರವು ಉನ್ನತ ಸಮಿತಿ ರಚಿಸಿ ನಮ್ಮ ಬೇಡಿಕೆ ಈಡೇರಿಸಲು ಒಂದು ತಿಂಗಳ ಕಾಲಾವಕಾಶ ಕೋರಿದೆ. ಮೇ 21ರಿಂದ 27ರವರಗೆ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳದೆ ಇದ್ದಲ್ಲಿ, ನಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತೇವೆ ಎಂದು ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಹೇಳಿದರು.

Koppal
ಗಡುವು ನೀಡಿ ಸಾಂಕೇತಿಕ ಪ್ರತಿಭಟನೆ ಹಿಂಪಡೆದ ಹೊರಗುತ್ತಿಗೆ ನೌಕರರ ಸಂಘ

ಕುಷ್ಟಗಿ(ಕೊಪ್ಪಳ): ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆಗೆ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಅಶ್ವಾಸನೆ ನೀಡಿದ್ದರಿಂದ ಮೇ 27ರವರೆಗೂ ಗಡುವು ವಿಧಿಸಲಾಗಿದೆ. ಈ ಬಗ್ಗೆ ಸಕಾರಾತ್ಮಕ ಕ್ರಮವಹಿಸದೆ ಇದ್ದಲ್ಲಿ ಮೇ 28ರಿಂದ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಯಮೋಜಿ ಹೇಳಿದರು.

ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್​​ಗಳಿಗೆ ಸನ್ಮಾನಿಸಿ ಬಳಿಕ ಈಟಿವಿ ಭಾರತ ಜೊತೆ ಮಾತನಾಡಿದ ಅವರು. ಸರ್ಕಾರದ ಆಶ್ವಾಸನೆ ಮೇರೆಗೆ ಪ್ರತಿಭಟನೆಯನ್ನು ಸಾಂಕೇತಿಕವಾಗಿ ವಾಪಸ್​​​​ ಪಡೆಯಲಾಗಿದೆ ಎಂದರು.

ಮೇ 28ರಿಂದ ಪುನಃ ಪ್ರತಿಭಟನೆ : ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಎಚ್ಚರಿಕೆ

ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಗೆಗಾಗಿ ಸರ್ಕಾರವು ಉನ್ನತ ಸಮಿತಿ ರಚಿಸಿ ನಮ್ಮ ಬೇಡಿಕೆ ಈಡೇರಿಸಲು ಒಂದು ತಿಂಗಳ ಕಾಲಾವಕಾಶ ಕೋರಿದೆ. ಮೇ 21ರಿಂದ 27ರವರಗೆ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳದೆ ಇದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತ ಬರುತ್ತಿದ್ದು, ಸರ್ಕಾರ ಕೇವಲ ಅಶ್ವಾಸನೆಗಳನ್ನು ನೀಡಿದೆ. ಸರ್ಕಾರಗಳು, ಮಂತ್ರಿಗಳು ಬದಲಾಗಿದ್ದು, ಬೇಡಿಕೆಗಳು ಯಥಾವತ್ತಾಗಿವೆ. ಕೊರೊನಾ ವೈರಸ್​ನ ಸಂಕಷ್ಟದ ನಡುವೆಯೂ ನಮ್ಮ ಸಿಬ್ಬಂದಿ, ಸೌಲಭ್ಯಗಳ ಕೊರತೆಗಳನ್ನು ಲೆಕ್ಕಿಸದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಕುಷ್ಟಗಿ(ಕೊಪ್ಪಳ): ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಸೇವಾ ಭದ್ರತೆಗೆ ಸರ್ಕಾರ ಉನ್ನತ ಮಟ್ಟದ ಸಮಿತಿ ರಚನೆ ಅಶ್ವಾಸನೆ ನೀಡಿದ್ದರಿಂದ ಮೇ 27ರವರೆಗೂ ಗಡುವು ವಿಧಿಸಲಾಗಿದೆ. ಈ ಬಗ್ಗೆ ಸಕಾರಾತ್ಮಕ ಕ್ರಮವಹಿಸದೆ ಇದ್ದಲ್ಲಿ ಮೇ 28ರಿಂದ ಸೇವೆಯನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಯಮೋಜಿ ಹೇಳಿದರು.

ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೊರೊನಾ ವಾರಿಯರ್ಸ್​​ಗಳಿಗೆ ಸನ್ಮಾನಿಸಿ ಬಳಿಕ ಈಟಿವಿ ಭಾರತ ಜೊತೆ ಮಾತನಾಡಿದ ಅವರು. ಸರ್ಕಾರದ ಆಶ್ವಾಸನೆ ಮೇರೆಗೆ ಪ್ರತಿಭಟನೆಯನ್ನು ಸಾಂಕೇತಿಕವಾಗಿ ವಾಪಸ್​​​​ ಪಡೆಯಲಾಗಿದೆ ಎಂದರು.

ಮೇ 28ರಿಂದ ಪುನಃ ಪ್ರತಿಭಟನೆ : ನೌಕರರ ಸಂಘದ ರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಎಚ್ಚರಿಕೆ

ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆಗೆಗಾಗಿ ಸರ್ಕಾರವು ಉನ್ನತ ಸಮಿತಿ ರಚಿಸಿ ನಮ್ಮ ಬೇಡಿಕೆ ಈಡೇರಿಸಲು ಒಂದು ತಿಂಗಳ ಕಾಲಾವಕಾಶ ಕೋರಿದೆ. ಮೇ 21ರಿಂದ 27ರವರಗೆ ಸರ್ಕಾರ ಸ್ಪಷ್ಟ ನಿಲುವು ತೆಗೆದುಕೊಳ್ಳದೆ ಇದ್ದಲ್ಲಿ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಹೇಳಿದರು.

ಕಳೆದ ಒಂದೂವರೆ ವರ್ಷದಿಂದ ಪ್ರತಿಭಟನೆ ನಡೆಸುತ್ತ ಬರುತ್ತಿದ್ದು, ಸರ್ಕಾರ ಕೇವಲ ಅಶ್ವಾಸನೆಗಳನ್ನು ನೀಡಿದೆ. ಸರ್ಕಾರಗಳು, ಮಂತ್ರಿಗಳು ಬದಲಾಗಿದ್ದು, ಬೇಡಿಕೆಗಳು ಯಥಾವತ್ತಾಗಿವೆ. ಕೊರೊನಾ ವೈರಸ್​ನ ಸಂಕಷ್ಟದ ನಡುವೆಯೂ ನಮ್ಮ ಸಿಬ್ಬಂದಿ, ಸೌಲಭ್ಯಗಳ ಕೊರತೆಗಳನ್ನು ಲೆಕ್ಕಿಸದೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

Last Updated : May 21, 2020, 11:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.