ETV Bharat / state

ಗಂಗಾವತಿಯಲ್ಲಿ ದಿಢೀರ್​ ಸ್ಥಗಿತಗೊಂಡ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ... ಕಾರಣ?

author img

By

Published : Mar 13, 2020, 7:21 PM IST

ಗಂಗಾವತಿ ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿದ್ದ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ತಹಶೀಲ್ದಾರ್ ನೇತೃತ್ವದ ತಂಡ ಸ್ಥಗಿತಗೊಳಿಸಿದೆ.

stoped-operation-of-clearing-unauthorized-buildings-in-koppala
ದಿಢೀರ್​ ಸ್ಥಗಿತಗೊಂಡ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ.

ಗಂಗಾವತಿ(ಕೊಪ್ಪಳ): ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿಂದು ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದ ಕೆಲ ಗಂಟೆಗಳಲ್ಲೇ ಸ್ಥಗಿತಗೊಂಡಿದೆ.

ದಿಢೀರ್​ ಸ್ಥಗಿತಗೊಂಡ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ.

ತೆರವು ಪ್ರಶ್ನಿಸಿ ನಾಲ್ಕು ಹೊಟೇಲ್ ಮಾಲೀಕರು ಹೈಕೋರ್ಟ್​ ಮೊರೆ ಹೋಗಿದ್ದರು. ಈ ಪೈಕಿ ಎರಡು ಹೊಟೇಲ್​​ಗಳ ವಿರುದ್ಧವಾಗಿ ಆದೇಶ ಜಾರಿಯಾದ ಹಿನ್ನೆಲೆ ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಕೋರ್ಟ್​ನಿಂದ ಆದೇಶ ಕೈ ಸೇರದಿರುವುದು ಹಾಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು.

ಈ ಬಗ್ಗೆ ಮಾತನಾಡಿರುವ ತಹಶೀಲ್ದಾರ್ ಚಂದ್ರಕಾಂತ್ ಅವರು ಆದೇಶ ಕೈಸೇರಿದ ಬಳಿಕ ನಾಳೆಯಿಂದ ಮತ್ತೆ ತೆರವು ಕಾರ್ಯಾಚರಣೆ ಮುಂದುವರೆಸಲಿದ್ದೇವೆ ಎಂದು ತಿಳಿಸಿದರು.

ಗಂಗಾವತಿ(ಕೊಪ್ಪಳ): ತಾಲೂಕಿನ ವಿರುಪಾಪುರ ಗಡ್ಡೆಯಲ್ಲಿಂದು ತಹಶೀಲ್ದಾರ್ ನೇತೃತ್ವದಲ್ಲಿ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ ಆರಂಭಿಸಿದ ಕೆಲ ಗಂಟೆಗಳಲ್ಲೇ ಸ್ಥಗಿತಗೊಂಡಿದೆ.

ದಿಢೀರ್​ ಸ್ಥಗಿತಗೊಂಡ ಅನಧಿಕೃತ ಕಟ್ಟಡಗಳ ತೆರವು ಕಾರ್ಯಾಚರಣೆ.

ತೆರವು ಪ್ರಶ್ನಿಸಿ ನಾಲ್ಕು ಹೊಟೇಲ್ ಮಾಲೀಕರು ಹೈಕೋರ್ಟ್​ ಮೊರೆ ಹೋಗಿದ್ದರು. ಈ ಪೈಕಿ ಎರಡು ಹೊಟೇಲ್​​ಗಳ ವಿರುದ್ಧವಾಗಿ ಆದೇಶ ಜಾರಿಯಾದ ಹಿನ್ನೆಲೆ ತಹಶೀಲ್ದಾರ್ ನೇತೃತ್ವದಲ್ಲಿನ ತಂಡ ತೆರವು ಕಾರ್ಯಾಚರಣೆ ಆರಂಭಿಸಿತ್ತು. ಆದರೆ ಕೋರ್ಟ್​ನಿಂದ ಆದೇಶ ಕೈ ಸೇರದಿರುವುದು ಹಾಗೂ ಕೆಲವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆ ಕಾರ್ಯಾಚರಣೆ ಸ್ಥಗಿತಗೊಳಿಸಲಾಯಿತು.

ಈ ಬಗ್ಗೆ ಮಾತನಾಡಿರುವ ತಹಶೀಲ್ದಾರ್ ಚಂದ್ರಕಾಂತ್ ಅವರು ಆದೇಶ ಕೈಸೇರಿದ ಬಳಿಕ ನಾಳೆಯಿಂದ ಮತ್ತೆ ತೆರವು ಕಾರ್ಯಾಚರಣೆ ಮುಂದುವರೆಸಲಿದ್ದೇವೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.