ETV Bharat / state

ಬಸ್​ ಸಮಸ್ಯೆ ಬಗೆಹರಿಸುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಬಸ್​ ಸಮಸ್ಯೆ ಬಗೆಹರಿಸುವಂತೆ ಕೊಪ್ಪಳ ತಾಲೂಕಿನ ವಿವಿಧ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಇಂದು ನಗರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

author img

By

Published : Feb 23, 2021, 1:55 PM IST

ವಿದ್ಯಾರ್ಥಿಗಳ ಪ್ರತಿಭಟನೆ
Students protest

ಕೊಪ್ಪಳ: ಬಸ್ ಸಮಸ್ಯೆಯಿಂದ ರೋಸಿಹೋದ ತಾಲೂಕಿನ ವಿವಿಧ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಇಂದು ನಗರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ವನಬಳ್ಳಾರಿಯಿಂದ ಬರುವ ಬಸ್​ನಲ್ಲಿ ಆ ಭಾಗದಿಂದ ನೂರಾರು ವಿದ್ಯಾರ್ಥಿಗಳು ಬಸ್​ನಲ್ಲಿ ಜಾಗವಿಲ್ಲದೇ ಬಸ್​ನ ಫೋಟ್​ ಬೋರ್ಡ್​ ಹಾಗೂ ಬಸ್​ನ ಟಾಪ್​ ಮೇಲೆ ಕುಳಿತು ಬರುತ್ತಿದ್ದು, ಇದರಿಂದ ನಿತ್ಯವೂ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ವಿದ್ಯಾರ್ಥಿಗಳ ಪ್ರತಿಭಟನೆ

ವನಬಳ್ಳಾರಿಯಿಂದ ಕೊಪ್ಪಳಕ್ಕೆ ಬರುವ ಬಸ್​ನಲ್ಲಿ ಗಬ್ಬೂರು, ಕಲ್ಲತಾವರಗೇರಾ, ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಬರುತ್ತಾರೆ ಆದರೆ ಅಷ್ಟೂ ವಿದ್ಯಾರ್ಥಿಗಳಿಗೂ ಸರಿಯಾಗಿ ಬಸ್​ ವ್ಯವಸ್ಥೆ ಇಲ್ಲದ ಕಾರಣ ಇಂದು ವಿದ್ಯಾರ್ಥಿಗಳೆಲ್ಲ ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಯಿತು. ಇದೆ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಕೊಪ್ಪಳ: ಬಸ್ ಸಮಸ್ಯೆಯಿಂದ ರೋಸಿಹೋದ ತಾಲೂಕಿನ ವಿವಿಧ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಇಂದು ನಗರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ವನಬಳ್ಳಾರಿಯಿಂದ ಬರುವ ಬಸ್​ನಲ್ಲಿ ಆ ಭಾಗದಿಂದ ನೂರಾರು ವಿದ್ಯಾರ್ಥಿಗಳು ಬಸ್​ನಲ್ಲಿ ಜಾಗವಿಲ್ಲದೇ ಬಸ್​ನ ಫೋಟ್​ ಬೋರ್ಡ್​ ಹಾಗೂ ಬಸ್​ನ ಟಾಪ್​ ಮೇಲೆ ಕುಳಿತು ಬರುತ್ತಿದ್ದು, ಇದರಿಂದ ನಿತ್ಯವೂ ವಿದ್ಯಾರ್ಥಿಗಳು ಪರದಾಡುವಂತಾಗಿದೆ.

ವಿದ್ಯಾರ್ಥಿಗಳ ಪ್ರತಿಭಟನೆ

ವನಬಳ್ಳಾರಿಯಿಂದ ಕೊಪ್ಪಳಕ್ಕೆ ಬರುವ ಬಸ್​ನಲ್ಲಿ ಗಬ್ಬೂರು, ಕಲ್ಲತಾವರಗೇರಾ, ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ನಿತ್ಯ ಬರುತ್ತಾರೆ ಆದರೆ ಅಷ್ಟೂ ವಿದ್ಯಾರ್ಥಿಗಳಿಗೂ ಸರಿಯಾಗಿ ಬಸ್​ ವ್ಯವಸ್ಥೆ ಇಲ್ಲದ ಕಾರಣ ಇಂದು ವಿದ್ಯಾರ್ಥಿಗಳೆಲ್ಲ ಸೇರಿ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆ ವೇಳೆ ವಿದ್ಯಾರ್ಥಿಗಳು ಹಾಗೂ ಸಾರಿಗೆ ಅಧಿಕಾರಿಗಳೊಂದಿಗೆ ಮಾತಿನ ಚಕಮಕಿ ನಡೆಯಿತು. ಇದೆ ವೇಳೆ, ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.