ETV Bharat / state

ಹೋಟೆಲ್​​ನಲ್ಲಿ ಯುವಕ ಅನುಮಾನಾಸ್ಪದ ಸಾವು

ವಿರುಪಾಪುರಗಡ್ಡೆಯಲ್ಲಿನ ಗೋವನ್ ಕಾರ್ನರ್ ಹೋಟೆಲ್​​ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವಕನೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

author img

By

Published : Feb 10, 2020, 7:30 PM IST

Man died
ಯುವಕ ಸಾವು

ಗಂಗಾವತಿ: ವಿದೇಶಿ ಪ್ರವಾಸಿಗರ ನೆಚ್ಚಿನ ತಾಣವಾದ ವಿರುಪಾಪುರಗಡ್ಡೆಯಲ್ಲಿನ ಹೋಟೆಲ್​​ವೊಂದರಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ವಿರುಪಾಪುರಗಡ್ಡೆಯಲ್ಲಿನ ಗೋವನ್ ಕಾರ್ನರ್ ಎಂಬ ರೆಸ್ಟೋರೆಂಟ್​​ನಲ್ಲಿ ಸೀನಿಯರ್ ಕುಕ್ ಆಗಿ ಕೆಲಸ ಮಾಡುತ್ತಿದ್ದ ಅರುಣಾಚಲ ಪ್ರದೇಶ ಮೂಲದ ಮಹೇಂದರ್ ಚೊಬ್ಲೆ (21) ಎಂಬಾತನೆ ಮೃತ ಯುವಕ. ಈತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸರ್ಕಾರಿ ಆಸ್ಪತ್ರೆಯ ಶವಾಗಾರ

ಯವಕ ಕೇವಲ ಎರಡು ತಿಂಗಳ ಹಿಂದಷ್ಟೆ ಗೋವನ ಕಾರ್ನರ್ ಹೋಟೆಲ್​ನಲ್ಲಿ ಕೆಲಸಕ್ಕೆಂದು ಸೇರಿಕೊಂಡಿದ್ದ ಎನ್ನಲಾಗಿದೆ, ಮರಣೋತ್ತರ ಪರೀಕ್ಷೆಗಾಗಿ ಮೃತನ ‌ಪಾರ್ಥಿವ ಶರೀರವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ದೂರು ದಾಖಲಾಗಿದೆ.

ಗಂಗಾವತಿ: ವಿದೇಶಿ ಪ್ರವಾಸಿಗರ ನೆಚ್ಚಿನ ತಾಣವಾದ ವಿರುಪಾಪುರಗಡ್ಡೆಯಲ್ಲಿನ ಹೋಟೆಲ್​​ವೊಂದರಲ್ಲಿ ಯುವಕನೋರ್ವ ಸಾವನ್ನಪ್ಪಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ವಿರುಪಾಪುರಗಡ್ಡೆಯಲ್ಲಿನ ಗೋವನ್ ಕಾರ್ನರ್ ಎಂಬ ರೆಸ್ಟೋರೆಂಟ್​​ನಲ್ಲಿ ಸೀನಿಯರ್ ಕುಕ್ ಆಗಿ ಕೆಲಸ ಮಾಡುತ್ತಿದ್ದ ಅರುಣಾಚಲ ಪ್ರದೇಶ ಮೂಲದ ಮಹೇಂದರ್ ಚೊಬ್ಲೆ (21) ಎಂಬಾತನೆ ಮೃತ ಯುವಕ. ಈತ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸರ್ಕಾರಿ ಆಸ್ಪತ್ರೆಯ ಶವಾಗಾರ

ಯವಕ ಕೇವಲ ಎರಡು ತಿಂಗಳ ಹಿಂದಷ್ಟೆ ಗೋವನ ಕಾರ್ನರ್ ಹೋಟೆಲ್​ನಲ್ಲಿ ಕೆಲಸಕ್ಕೆಂದು ಸೇರಿಕೊಂಡಿದ್ದ ಎನ್ನಲಾಗಿದೆ, ಮರಣೋತ್ತರ ಪರೀಕ್ಷೆಗಾಗಿ ಮೃತನ ‌ಪಾರ್ಥಿವ ಶರೀರವನ್ನು ಇಲ್ಲಿನ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಬಗ್ಗೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.