ETV Bharat / state

ಇದು ಬರೀ ಪಾದಯಾತ್ರೆ ಅಲ್ಲ, ಸರ್ಕಾರದ ವಿರುದ್ಧದ ಹೋರಾಟ: ರಾಘವೇಂದ್ರ ಹಿಟ್ನಾಳ್ - ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿಕೆ

ಮಹಾತ್ಮ ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಕೊಪ್ಪಳ ನಗರದಲ್ಲಿ ಪಾದಯಾತ್ರೆ ನಡೆಸಿದರು‌.

ಕೊಪ್ಪಳ ನಗರದಲ್ಲಿ ಪಾದಯಾತ್ರೆ
author img

By

Published : Oct 2, 2019, 5:27 PM IST

ಕೊಪ್ಪಳ: ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪಾದಯಾತ್ರೆ ನಡೆಸಿದ್ರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಭಾಗ್ಯ ನಗರದ ಮಹಾತ್ಮಗಾಂಧಿ ಸರ್ಕಲ್‌ನಿಂದ ಪ್ರಾರಂಭವಾದ ಪಾದಯಾತ್ರೆ ಬಸ್ ನಿಲ್ದಾಣದ ಮುಂಭಾಗ, ಅಶೋಕ ಸರ್ಕಲ್, ಜವಾಹರ ರಸ್ತೆ ಮೂಲಕ ಸಾಗಿ ಬಂದು ಗಡಿಯಾರ ಕಂಬ ಸರ್ಕಲ್ ಮೂಲಕ ಗವಿಮಠದ ಆವರಣದವರೆಗೂ ಸಾಗಿ ಮುಕ್ತಾಯಗೊಂಡಿತು.

ಸುಮಾರು 5 ಕಿ.ಮೀ. ವರೆಗೆ ನಡೆದ ಪಾದಯಾತ್ರೆ ಕೊನೆಗೊಂಡ ಬಳಿಕ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಇದು ಕೇವಲ ಪಾದಯಾತ್ರೆಯಾಗಿ ಉಳಿಯುವುದಿಲ್ಲ, ಸರ್ಕಾರದ ವಿರುದ್ಧದ ಹೋರಾಟವಾಗಿ ರೂಪುಗೊಳ್ಳಲಿದೆ ಎಂದರು.

ಕೊಪ್ಪಳ ನಗರದಲ್ಲಿ ಕಾಂಗ್ರೆಸ್ ಪಾದಯಾತ್ರೆ

ಸಿಎಂ ಯಡಿಯೂರಪ್ಪ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ, ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಉತ್ತರ ಕರ್ನಾಟಕದಲ್ಲಿ ನೆರೆ ಬಂದಾಗ ಹಾಗೂ ರಾಜ್ಯದಲ್ಲಿ ಬರ ಬಂದಾಗ ಪ್ರಧಾನಿ‌‌ ಮೋದಿ ತುಟಿ ಬಿಚ್ಚಲಿಲ್ಲ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ನಾವು ಹೋರಾಟ ಮಾಡುತ್ತೇವೆ. ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಎಚ್ಚರಿಸಿದ್ರು.

ಕೊಪ್ಪಳ: ಮಹಾತ್ಮಾ ಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪಾದಯಾತ್ರೆ ನಡೆಸಿದ್ರು.

ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಭಾಗ್ಯ ನಗರದ ಮಹಾತ್ಮಗಾಂಧಿ ಸರ್ಕಲ್‌ನಿಂದ ಪ್ರಾರಂಭವಾದ ಪಾದಯಾತ್ರೆ ಬಸ್ ನಿಲ್ದಾಣದ ಮುಂಭಾಗ, ಅಶೋಕ ಸರ್ಕಲ್, ಜವಾಹರ ರಸ್ತೆ ಮೂಲಕ ಸಾಗಿ ಬಂದು ಗಡಿಯಾರ ಕಂಬ ಸರ್ಕಲ್ ಮೂಲಕ ಗವಿಮಠದ ಆವರಣದವರೆಗೂ ಸಾಗಿ ಮುಕ್ತಾಯಗೊಂಡಿತು.

ಸುಮಾರು 5 ಕಿ.ಮೀ. ವರೆಗೆ ನಡೆದ ಪಾದಯಾತ್ರೆ ಕೊನೆಗೊಂಡ ಬಳಿಕ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಇದು ಕೇವಲ ಪಾದಯಾತ್ರೆಯಾಗಿ ಉಳಿಯುವುದಿಲ್ಲ, ಸರ್ಕಾರದ ವಿರುದ್ಧದ ಹೋರಾಟವಾಗಿ ರೂಪುಗೊಳ್ಳಲಿದೆ ಎಂದರು.

ಕೊಪ್ಪಳ ನಗರದಲ್ಲಿ ಕಾಂಗ್ರೆಸ್ ಪಾದಯಾತ್ರೆ

ಸಿಎಂ ಯಡಿಯೂರಪ್ಪ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ, ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಉತ್ತರ ಕರ್ನಾಟಕದಲ್ಲಿ ನೆರೆ ಬಂದಾಗ ಹಾಗೂ ರಾಜ್ಯದಲ್ಲಿ ಬರ ಬಂದಾಗ ಪ್ರಧಾನಿ‌‌ ಮೋದಿ ತುಟಿ ಬಿಚ್ಚಲಿಲ್ಲ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಎಚ್ಚರಿಸುವ ನಿಟ್ಟಿನಲ್ಲಿ ನಾವು ಹೋರಾಟ ಮಾಡುತ್ತೇವೆ. ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಎಚ್ಚರಿಸಿದ್ರು.

Intro:


Body:ಕೊಪ್ಪಳ:- ಮಹಾತ್ಮಗಾಂಧೀಜಿಯವರ 150 ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪಾದಯಾತ್ರೆ ನಡೆಸಿದರು‌. ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಮಾಜಿ ಸಚಿವ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಶಿವರಾಜ ತಂಗಡಗಿ ನೇತೃತ್ವದಲ್ಲಿ ಭಾಗ್ಯನಗರದ ಮಹಾತ್ಮಗಾಂಧಿ ಸರ್ಕಲ್ ನಿಂದ ಪ್ರಾರಂಭವಾದ ಪಾದಯಾತ್ರೆ ಬಸ್ ನಿಲ್ದಾಣದ ಮುಂಭಾಗ, ಅಶೋಕ ಸರ್ಕಲ್, ಜವಾಹರ ರಸ್ತೆ ಮೂಲಕ ಸಾಗಿ, ಗಡಿಯಾರ ಕಂಬ ಸರ್ಕಲ್ ಮೂಲಕ ಗವಿಮಠದ ಆವರಣದವರೆಗೂ ಸಾಗಿ ಮುಕ್ತಾಯಗೊಂಡಿತು. ಸುಮಾರು 5 ಕಿಲೋಮೀಟರ್ ವರೆಗೆ ನಡೆದ ಪಾದಯಾತ್ರೆ ಮುಕ್ತಾಯದ ಬಳಿಕ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ್, ಇಂದು ಪ್ರಾರಂಭ ಮಾಡಿರುವ ಪಾದಯಾತ್ರೆ ಕೇವಲ ಪಾದಯಾತ್ರೆಯಾಗಿ ಉಳಿಯುವುದಿಲ್ಲ. ಸರ್ಕಾರದ ವಿರುದ್ಧ ಹೋರಾಟವಾಗಿ ರೂಪಗೊಳ್ಳಲಿದೆ. ಯಡಿಯೂರಪ್ಪ ಸರ್ಕಾರ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ. ನೆರೆ ಸಂತ್ರಸ್ತರಿಗೆ ಪರಿಹಾರ, ಮೂಲಭೂತ ಸೌಲಭ್ಯ ಕಲ್ಪಿಸಿಲ್ಲ. ಇನ್ನು ಉತ್ತರ ಕರ್ನಾಟಕದಲ್ಲಿ ನೆರೆ ಬಂದಾಗ ಹಾಗೂ ರಾಜ್ಯದಲ್ಲಿ ಬರ ಬಂದಾಗ ಪ್ರಧಾನಿ‌‌ ಮೋದಿ ಈ ಬಗ್ಗೆ ಒಂದು ಮಾತು ಸಹ ಆಡಲಿಲ್ಲ. ಹೀಗಾಗಿ, ಕೇಂದ್ರ‌ ಮತ್ತು ರಾಜ್ಯ ಸರ್ಕಾರವನ್ನು ಎಚ್ವರಿಸುವ ನಿಟ್ಟಿನಲ್ಲಿ ನಾವು ಹೋರಾಟ ಮಾಡುತ್ತೇವೆ.‌ ಇಂದಿನ ಈ ಪಾದಯಾತ್ರೆ ಮುಂದಿನ ದಿನಗಳಲ್ಲಿ ಹೋರಾಟವಾಗಿ ರೂಪಗೊಳ್ಳಲಿದೆ ಎಂದು ಶಾಸಕ ಕೆ. ರಾಘವೇಂದ್ರ ಹಿಟ್ನಾಳ್ ಹೇಳಿದರು.

ಬೈಟ್1:- ಕೆ‌. ರಾಘವೇಂದ್ರ ಹಿಟ್ನಾಳ್, ಕೊಪ್ಪಳ ಶಾಸಕ.



Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.