ETV Bharat / state

ಮೇಲ್ಛಾವಣಿ ಕುಸಿದು 3 ಸಾವಿನ ಪ್ರಕರಣ.. ಮೃತರ ಕುಟುಂಬಕ್ಕೆ ₹15 ಲಕ್ಷ ಪರಿಹಾರ.. - ಕೊಪ್ಪಳ ಜಿಲ್ಲಾಧಿಕಾರಿ ಪಿ. ಸುನೀಲ್‍ಕುಮಾರ್

ಕೊಪ್ಪಳ ತಾಲೂಕಿನ ಯಲಂಗೇರಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ವಾರಸುದಾರರಿಗೆ ತಲಾ ಐದು ಲಕ್ಷ ರೂ. ಪರಿಹಾರ ನೀಡಲು ಜಿಲ್ಲಾಧಿಕಾರಿ ಪಿ.ಸುನೀಲ್‍ಕುಮಾರ್ ಸೂಚನೆ ನೀಡಿದ್ದಾರೆ.

ಮೃತರ ಕುಟುಂಬಕ್ಕೆ 15 ಲಕ್ಷ ಪರಿಹಾರ
author img

By

Published : Oct 15, 2019, 8:44 PM IST

Updated : Oct 16, 2019, 2:53 AM IST

ಕೊಪ್ಪಳ: ತಾಲೂಕಿನ ಯಲಂಗೇರಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನೀಲ್‍ಕುಮಾರ್ ಈ ಕುರಿತಾಗಿ ಕೊಪ್ಪಳ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಸಿಆರ್​ಎಫ್ ನಿಧಿಯಲ್ಲಿ ಪರಿಹಾರ ನೀಡುವಂತೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ತಲಾ ಐದು ಲಕ್ಷ ರೂಪಾಯಿಯಂತೆ, ಒಟ್ಟು 15 ಲಕ್ಷ ರೂ. ನೇರವಾಗಿ ಮೃತರ ಕುಟುಂಬಸ್ಥರಿಗೆ ಪರಿಹಾರವಾಗಿ ನೀಡಲು ಆದೇಶದಲ್ಲಿ ಸೂಚಿಸಿದ್ದಾರೆ.

ಇನ್ನು, ಯಲಂಗೇರಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆ ಮಾಳಿಗೆ ಕುಸಿದು ಬಿದ್ದು, ಒಂದೇ ಮನೆಯಲ್ಲಿ ಸುಜಾತ,ಅಮರೇಶ ಹಾಗೂ ಗವಿಸಿದ್ದಪ್ಪ ಎಂಬ ಮೂವರು ಮಕ್ಕಳು ಸಾವನ್ನಪ್ಪಿದ್ದರು.

ಕೊಪ್ಪಳ: ತಾಲೂಕಿನ ಯಲಂಗೇರಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಜಿಲ್ಲಾಧಿಕಾರಿ ಪಿ. ಸುನೀಲ್‍ಕುಮಾರ್ ಈ ಕುರಿತಾಗಿ ಕೊಪ್ಪಳ ತಹಶೀಲ್ದಾರರಿಗೆ ಸೂಚನೆ ನೀಡಿದ್ದಾರೆ. ಸಿಆರ್​ಎಫ್ ನಿಧಿಯಲ್ಲಿ ಪರಿಹಾರ ನೀಡುವಂತೆ ಹೇಳಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ತಲಾ ಐದು ಲಕ್ಷ ರೂಪಾಯಿಯಂತೆ, ಒಟ್ಟು 15 ಲಕ್ಷ ರೂ. ನೇರವಾಗಿ ಮೃತರ ಕುಟುಂಬಸ್ಥರಿಗೆ ಪರಿಹಾರವಾಗಿ ನೀಡಲು ಆದೇಶದಲ್ಲಿ ಸೂಚಿಸಿದ್ದಾರೆ.

ಇನ್ನು, ಯಲಂಗೇರಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆ ಮಾಳಿಗೆ ಕುಸಿದು ಬಿದ್ದು, ಒಂದೇ ಮನೆಯಲ್ಲಿ ಸುಜಾತ,ಅಮರೇಶ ಹಾಗೂ ಗವಿಸಿದ್ದಪ್ಪ ಎಂಬ ಮೂವರು ಮಕ್ಕಳು ಸಾವನ್ನಪ್ಪಿದ್ದರು.

Intro:Body:ಕೊಪ್ಪಳ:-ತಾಲೂಕಿನ ಯಲಮಗೇರಿ ಗ್ರಾಮದಲ್ಲಿ ಮನೆ ಮೇಲ್ಛಾವಣಿ ಕುಸಿದು ಮೂವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ವಾರಸುದಾರರಿಗೆ ತಲಾ ಐದು ಲಕ್ಷ ರುಪಾಯಿ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಪಿ. ಸುನೀಲ್‍ಕುಮಾರ್ ಅವರು ಕೊಪ್ಪಳ ತಹಸೀಲ್ದಾರರಿಗೆ ಸೂಚನೆ ನೀಡಿದ್ದು ಸಿಆರ್‍ಎಫ್ ನಿಧಿಯಲ್ಲಿ ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ. ಯಲಮಗೇರಿ ಗ್ರಾಮದಲ್ಲಿ ಇಂದು ಬೆಳಗಿನ ಜಾವ ಮನೆ ಮಾಳಿಗೆ ಕುಸಿದು ಬಿದ್ದು ಒಂದೇ ಮನೆಯ ಸುಜಾತ, ಅಮರೇಶ ಹಾಗೂ ಗವಿಸಿದ್ದಪ್ಪ ಎಂಬ ಮಕ್ಕಳು ಸಾವನ್ನಪ್ಪಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಾರ್ಗಸೂಚಿಯನ್ವಯ ತಲಾ ಐದು ಲಕ್ಷ ರುಪಾಯಿಯಂತೆ ಒಟ್ಟು 15 ಲಕ್ಷ ರುಪಾಯಿಗಳನ್ನು ಮೃತರ ನೇರ ವಾರಸುದಾರರಿಗೆ ಪರಿಹಾರ ನೀಡುವಂತೆ ಜಿಲ್ಲಾಧಿಕಾರಿ ಪಿ. ಸುನೀಲ್‍ಕುಮಾರ್ ಅವರು ತಹಸೀಲ್ದಾರರಿಗೆ ನೀಡಿರುವ ಆದೇಶದಲ್ಲಿ ಸೂಚಿಸಿದ್ದಾರೆ.
----Conclusion:
Last Updated : Oct 16, 2019, 2:53 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.