ಕುಷ್ಟಗಿ (ಕೊಪ್ಪಳ): ಕೊಪ್ಪಳ ಜಿಲ್ಲೆ ಕುಷ್ಟಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಯಾಗಿ ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ದಿಢೀರ್ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.
ಸೇವೆಯಲ್ಲಿದ್ದ ಮರಿಬಸಪ್ಪ ಸಜ್ಜನ್ ಅವರನ್ನು ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಖಾಲಿ ಇರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ವರ್ಗಾಯಿಸಲಾಗಿದೆ.
ಓದಿ:ಮೌಸ್ ಹಿಡಿಯೋ ಕೈಯಲ್ಲಿ ಗುದ್ದಲಿ, ಸಲಕೆ: ಕೆಲಸ ಕಳೆದುಕೊಂಡ ಪದವೀಧರರಿಗೆ ಆಸರೆಯಾದ ನರೇಗಾ!
ಇವರ ಸ್ಥಾನಕ್ಕೆ ಬೀದರ್ ಜಿಲ್ಲೆ ಭಾಲ್ಕಿ ತಾಲೂಕಿನ ಎಪಿಎಂಸಿ ಕಾರ್ಯದರ್ಶಿ ಟಿ. ನೀಲಪ್ಪ ಶೆಟ್ಟಿ ಅವರನ್ನು ವರ್ಗಾಯಿಸಲಾಗಿದೆ ಎಂದು ಸಹಕಾರ ಇಲಾಖೆ ಅಧೀನ ಕಾರ್ಯದರ್ಶಿ ಬಿ.ಎಸ್. ಮಂಜುನಾಥ ಆದೇಶ ಹೊರಡಿಸಿದ್ದಾರೆ.