ETV Bharat / state

ಪ್ರತಿಕ್ರಿಯೆ ಕೇಳಿದ ಮಾಧ್ಯಮದವರ ಮೇಲೆ ರೊಚ್ಚಿಗೆದ್ದ ಮಾಜಿ ಸಚಿವ ನಾಡಗೌಡ

ತುಂಗಭದ್ರಾ ಜಲಾಶಯದ ಎಡದಂಡೆಯ ಗೇಟ್ ದುರಸ್ತಿ ಕಾರ್ಯ ಪರಿಶೀಲನೆಗೆಂದು ವೆಂಕಟರಾವ್​ ನಾಡಗೌಡ ಆಗಮಿಸಿದ್ದು, ಈ ಸಂದರ್ಭದಲ್ಲಿ ಮಾಧ್ಯಮದವರು ಪ್ರತಿಕ್ರಿಯೆ ಕೇಳಿದ್ದಕ್ಕೆ ಉತ್ತರಿಸದೆ ಕಿಡಿ ಕಾರಿದ್ದಾರೆ.

author img

By

Published : Aug 15, 2019, 10:29 PM IST

ಮಾಧ್ಯಮದವರ ಮೇಲೆ ಹರಿಹಾಯ್ದ ವೆಂಕಟರಾವ್​​

ಕೊಪ್ಪಳ: ಪ್ರತಿಕ್ರಿಯೆ ಕೇಳಲು ಮುಂದಾದ ಮಾಧ್ಯಮ ಪ್ರತಿನಿಧಿಗಳ ಮೇಲೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಕಿಡಿ ಕಾರಿದ ಘಟನೆ ತಾಲೂಕಿನ ಮುನಿರಾಬಾದ್ ಜಲಾಶಯದ ಬಳಿ ನಡೆದಿದೆ.

ಮಾಧ್ಯಮದವರ ಮೇಲೆ ಹರಿಹಾಯ್ದ ವೆಂಕಟರಾವ್​​

ತಾಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದ ಎಡದಂಡೆಯ ಮೇಲ್ಮಟ್ಟದ ನಾಲೆಯ ಗೇಟ್ ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳಕ್ಕೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಘಟನೆ ಕುರಿತಂತೆ ಹಾಗೂ ಫೋನ್ ಕದ್ದಾಲಿಕೆ ಪ್ರಕರಣ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಪಡೆಯಲು ಮುಂದಾಗಿದ್ದಾರೆ. ಆದರೆ, ಆರಂಭದಲ್ಲಿಯೇ ದರ್ಪದಿಂದ ಮಾತನಾಡಿದ್ದಾರೆ. ಅಲ್ಲದೆ ಏಕ ವಚನದಿಂದಲೇ‌‌ ನಿಂದಿಸಿ ತಮ್ಮ ಅಧಿಕಾರದ ದರ್ಪ ತೋರಿದ್ದಾರೆ.

ಈ ಸಂದರ್ಭದಲ್ಲಿ ನಾಡಗೌಡ ಮಾತ್ರವಲ್ಲದೇ ಅವರ ಜೊತೆ ಬಂದಿದ್ದ ವ್ಯಕ್ತಿಯೂ ಇದೇ ರೀತಿ ವರ್ತನೆ ತೋರಿದ್ದಾರೆ. ಇದರಿಂದ ಕೆರಳಿದ ಮಾಧ್ಯಮ ಪ್ರತಿನಿಧಿಗಳು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಅವರ ಹಿಂಬಾಲಕ ವ್ಯಕ್ತಿಯನ್ನು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡ ಪರಿಣಾಮ ಅಲ್ಲಿಂದ ಅವರು ಕಾಲ್ಕಿತ್ತರು.

ಕೊಪ್ಪಳ: ಪ್ರತಿಕ್ರಿಯೆ ಕೇಳಲು ಮುಂದಾದ ಮಾಧ್ಯಮ ಪ್ರತಿನಿಧಿಗಳ ಮೇಲೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಕಿಡಿ ಕಾರಿದ ಘಟನೆ ತಾಲೂಕಿನ ಮುನಿರಾಬಾದ್ ಜಲಾಶಯದ ಬಳಿ ನಡೆದಿದೆ.

ಮಾಧ್ಯಮದವರ ಮೇಲೆ ಹರಿಹಾಯ್ದ ವೆಂಕಟರಾವ್​​

ತಾಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದ ಎಡದಂಡೆಯ ಮೇಲ್ಮಟ್ಟದ ನಾಲೆಯ ಗೇಟ್ ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳಕ್ಕೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಘಟನೆ ಕುರಿತಂತೆ ಹಾಗೂ ಫೋನ್ ಕದ್ದಾಲಿಕೆ ಪ್ರಕರಣ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಪಡೆಯಲು ಮುಂದಾಗಿದ್ದಾರೆ. ಆದರೆ, ಆರಂಭದಲ್ಲಿಯೇ ದರ್ಪದಿಂದ ಮಾತನಾಡಿದ್ದಾರೆ. ಅಲ್ಲದೆ ಏಕ ವಚನದಿಂದಲೇ‌‌ ನಿಂದಿಸಿ ತಮ್ಮ ಅಧಿಕಾರದ ದರ್ಪ ತೋರಿದ್ದಾರೆ.

ಈ ಸಂದರ್ಭದಲ್ಲಿ ನಾಡಗೌಡ ಮಾತ್ರವಲ್ಲದೇ ಅವರ ಜೊತೆ ಬಂದಿದ್ದ ವ್ಯಕ್ತಿಯೂ ಇದೇ ರೀತಿ ವರ್ತನೆ ತೋರಿದ್ದಾರೆ. ಇದರಿಂದ ಕೆರಳಿದ ಮಾಧ್ಯಮ ಪ್ರತಿನಿಧಿಗಳು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಅವರ ಹಿಂಬಾಲಕ ವ್ಯಕ್ತಿಯನ್ನು ಸರಿಯಾಗಿಯೇ ತರಾಟೆಗೆ ತೆಗೆದುಕೊಂಡ ಪರಿಣಾಮ ಅಲ್ಲಿಂದ ಅವರು ಕಾಲ್ಕಿತ್ತರು.

Intro:


Body:ಕೊಪ್ಪಳ:- ಪ್ರತಿಕ್ರಿಯೆ ಕೇಳಲು ಮುಂದಾದ ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ದರ್ಪದಿಂದ ವರ್ತಿಸಿದ ಘಟನೆ ತಾಲೂಕಿನ ಮುನಿರಾಬಾದ್ ಜಲಾಶಯದ ಬಳಿ ನಡೆದಿದೆ. ತಾಲೂಕಿನ ಮುನಿರಾಬಾದ್ ಬಳಿಯ ತುಂಗಭದ್ರಾ ಜಲಾಶಯದ ಎಡದಂಡೆ ಮೇಲ್ಮಟ್ಟದ ನಾಲೆಯ ಗೇಟ್ ದುರಸ್ತಿ ಕಾರ್ಯ ನಡೆಯುತ್ತಿರುವ ಸ್ಥಳಕ್ಕೆ ಮಾಜಿ ಸಚಿವ ವೆಂಕಟರಾವ್ ನಾಡಗೌಡ ಬಂದಿದ್ರು. ಈ ಸಂದರ್ಭದಲ್ಲಿ ಘಟನೆ ಕುರಿತಂತೆ ಹಾಗೂ ಫೋನ್ ಕದ್ದಾಲಿಕೆ ಪ್ರಕರಣ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಪಡೆಯಲು ಮುಂದಾದರು. ಆದರೆ, ಆರಂಭದಲ್ಲಿಯೇ ದರ್ಪದಿಂದಲೇ ಮಾತನಾಡಿದರು. ಅಲ್ಲದೆ ಏಕ ವಚನದಿಂದಲೇ‌‌ ಮಾತನಾಡಿ ದರ್ಪ ತೋರಿದರು. ಈ ಸಂದರ್ಭದಲ್ಲಿ ನಾಡಗೌಡ ಜೊತೆ ಬಂದಿದ್ದ ವ್ಯಕ್ತಿಯೂ ಇದೇ ರೀತಿ ವರ್ತನೆ ತೋರಿದ. ಇದರಿಂದ ಕೆರಳಿದ ಮಾಧ್ಯಮ ಪ್ರತಿನಿಧಿಗಳು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹಾಗೂ ಅವರ ಹಿಂಬಾಲಕ ವ್ಯಕ್ತಿಯನ್ನು ತರಾಟೆಗೆ ತೆಗೆದುಕೊಂಡರು. ಪರಿಣಾಮ ಅಲ್ಲಿಂದ ಅವರು ಕಾಲ್ಕಿತ್ತರು.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.