ETV Bharat / state

ಹಣ ಪಾವತಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನೀಡಿದ ಪತ್ರಕ್ಕೆ ಸ್ವೀಕೃತಿ ನೀಡಿದ ಗ್ರಾಮ ಪಂಚಾಯತ್..! - ಕೊಪ್ಪಳದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಫಲಾನುಭವಿ ಪತ್ರ

ಕೃಷಿ ಹೊಂಡ ನಿರ್ಮಾಣಕ್ಕಾಗಿ ಅವರು ತಮ್ಮ ಪತ್ನಿ ಆಭರಣಗಳನ್ನು ಸಹ ಒತ್ತೆಯಿಟ್ಟಿದ್ದಾರೆ. ಕೃಷಿ ಹೊಂಡದ ಹಣವನ್ನು ಪಂಚಾಯತ್ ನೀಡಿದರೆ ಒತ್ತೆ ಇಟ್ಟಿರುವ ಆಭರಣ ಬಿಡಿಸಿಕೊಳ್ಳಬಹುದು ಎಂದುಕೊಂಡು ಅವರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

author img

By

Published : Feb 8, 2022, 5:08 PM IST

ಕೊಪ್ಪಳ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ಮಿಸಿಕೊಂಡ ಕೃಷಿ ಹೊಂಡದ ಹಣ ಪಾವತಿಸಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಅದಕ್ಕೆ ನೀವೇ ಕಾರಣ ಎಂದು ಫಲಾನುಭವಿಯೊಬ್ಬರು ಗ್ರಾಮ ಪಂಚಾಯತ್​​​ಗೆ ಬರೆದ ಪತ್ರಕ್ಕೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯು ಸ್ವೀಕೃತಿ ಪತ್ರ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪಿಡಿಒ ವರ್ತನೆಗೆ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರಿನ ತಾಲೂಕಿನ ಮಂಗಳೂರು ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಮಂಗಳೂರು ಗ್ರಾಮದ ಮಂಜುನಾಥ ಕಂಬಾರ ಎಂಬುವವರು ಕಳೆದ ವರ್ಷ ನರೇಗಾ ಯೋಜನೆಯಲ್ಲಿ ಸುಮಾರು 60 ಸಾವಿರ ರೂಪಾಯಿ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದಾರೆ.

ಕೃಷಿ ಹೊಂಡ ನಿರ್ಮಾಣಕ್ಕಾಗಿ ಅವರು ತಮ್ಮ ಪತ್ನಿ ಆಭರಣಗಳನ್ನು ಸಹ ಒತ್ತೆಯಿಟ್ಟಿದ್ದಾರೆ. ಕೃಷಿ ಹೊಂಡದ ಹಣವನ್ನು ಪಂಚಾಯತ್ ನೀಡಿದರೆ ಒತ್ತೆ ಇಟ್ಟಿರುವ ಆಭರಣ ಬಿಡಿಸಿಕೊಳ್ಳಬಹುದು ಎಂದುಕೊಂಡು ಅವರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಅನೇಕ ಬಾರಿ ಮನವಿ ಸಲ್ಲಿಸಿದ ಮಂಜುನಾಥ ಕಂಬಾರರು ಈಗ ಬೇಸತ್ತು ನೀವು ಕೂಲಿಕಾರರ ಹಣ ನೀಡದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಅದಕ್ಕೆ ನೀವೇ ಕಾರಣರಾಗುತ್ತೀರಿ. ಇಂತಿ ನಿಮ್ಮ ಸಾವಿಗೆ ಕಾರಣಾಗುವ ವ್ಯಕ್ತಿ ಮಂಜುನಾಥ ಎಂದು ಮನವಿ ಪತ್ರ ನೀಡಿದ್ದಾರೆ. ಈ ಮನವಿ ಪತ್ರವನ್ನು ಗ್ರಾಮ ಪಂಚಾಯ್ತಿಯಿಂದ ಸ್ವೀಕಾರ ಮಾಡಲಾಗಿದೆ. ಇದರಿಂದಾಗಿ ಕೂಲಿಕಾರ ಆತ್ಮಹತ್ಯೆ ಮಾಡಿಕೊಳ್ಳಬೇಕಾ? ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಹಣ ಪಾವತಿಸುತ್ತಿಲ್ಲ. ಹಣ ಪಾವತಿಸಿ ಎಂದರೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸಿದ್ದಾರೆ.

ಓದಿ: Hijab Row: ಅರ್ಜಿ ವಿಚಾರಣೆ ಪುನರಾರಂಭಿಸಿದ ಹೈಕೋರ್ಟ್​​​

ಕೊಪ್ಪಳ: ಉದ್ಯೋಗ ಖಾತ್ರಿ ಯೋಜನೆಯಲ್ಲಿ ನಿರ್ಮಿಸಿಕೊಂಡ ಕೃಷಿ ಹೊಂಡದ ಹಣ ಪಾವತಿಸಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಅದಕ್ಕೆ ನೀವೇ ಕಾರಣ ಎಂದು ಫಲಾನುಭವಿಯೊಬ್ಬರು ಗ್ರಾಮ ಪಂಚಾಯತ್​​​ಗೆ ಬರೆದ ಪತ್ರಕ್ಕೆ ಪಂಚಾಯತ್ ಅಭಿವೃದ್ದಿ ಅಧಿಕಾರಿಯು ಸ್ವೀಕೃತಿ ಪತ್ರ ನೀಡಿರುವ ಘಟನೆ ಬೆಳಕಿಗೆ ಬಂದಿದೆ.

ಪಿಡಿಒ ವರ್ತನೆಗೆ ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರಿನ ತಾಲೂಕಿನ ಮಂಗಳೂರು ಗ್ರಾಮ ಪಂಚಾಯ್ತಿಯ ವ್ಯಾಪ್ತಿಯ ಮಂಗಳೂರು ಗ್ರಾಮದ ಮಂಜುನಾಥ ಕಂಬಾರ ಎಂಬುವವರು ಕಳೆದ ವರ್ಷ ನರೇಗಾ ಯೋಜನೆಯಲ್ಲಿ ಸುಮಾರು 60 ಸಾವಿರ ರೂಪಾಯಿ ಖರ್ಚು ಮಾಡಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದಾರೆ.

ಕೃಷಿ ಹೊಂಡ ನಿರ್ಮಾಣಕ್ಕಾಗಿ ಅವರು ತಮ್ಮ ಪತ್ನಿ ಆಭರಣಗಳನ್ನು ಸಹ ಒತ್ತೆಯಿಟ್ಟಿದ್ದಾರೆ. ಕೃಷಿ ಹೊಂಡದ ಹಣವನ್ನು ಪಂಚಾಯತ್ ನೀಡಿದರೆ ಒತ್ತೆ ಇಟ್ಟಿರುವ ಆಭರಣ ಬಿಡಿಸಿಕೊಳ್ಳಬಹುದು ಎಂದುಕೊಂಡು ಅವರು ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಅನೇಕ ಬಾರಿ ಮನವಿ ಸಲ್ಲಿಸಿದ ಮಂಜುನಾಥ ಕಂಬಾರರು ಈಗ ಬೇಸತ್ತು ನೀವು ಕೂಲಿಕಾರರ ಹಣ ನೀಡದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ಅದಕ್ಕೆ ನೀವೇ ಕಾರಣರಾಗುತ್ತೀರಿ. ಇಂತಿ ನಿಮ್ಮ ಸಾವಿಗೆ ಕಾರಣಾಗುವ ವ್ಯಕ್ತಿ ಮಂಜುನಾಥ ಎಂದು ಮನವಿ ಪತ್ರ ನೀಡಿದ್ದಾರೆ. ಈ ಮನವಿ ಪತ್ರವನ್ನು ಗ್ರಾಮ ಪಂಚಾಯ್ತಿಯಿಂದ ಸ್ವೀಕಾರ ಮಾಡಲಾಗಿದೆ. ಇದರಿಂದಾಗಿ ಕೂಲಿಕಾರ ಆತ್ಮಹತ್ಯೆ ಮಾಡಿಕೊಳ್ಳಬೇಕಾ? ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉದ್ಯೋಗ ಖಾತರಿ ಯೋಜನೆಯಲ್ಲಿ ಕೆಲಸ ಮಾಡಿದ ಕೂಲಿಕಾರರಿಗೆ ಹಣ ಪಾವತಿಸುತ್ತಿಲ್ಲ. ಹಣ ಪಾವತಿಸಿ ಎಂದರೆ ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ. ಬೇಜವಾಬ್ದಾರಿಯಿಂದ ವರ್ತಿಸುವ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಜನತೆ ಆಗ್ರಹಿಸಿದ್ದಾರೆ.

ಓದಿ: Hijab Row: ಅರ್ಜಿ ವಿಚಾರಣೆ ಪುನರಾರಂಭಿಸಿದ ಹೈಕೋರ್ಟ್​​​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.