ETV Bharat / state

ಪಥ ಬದಲಿಸಿದ ವಿದ್ಯಾಗಮ ಕಾರ್ಯಕ್ರಮ:ಕಾರಣ ಕೇಳಿ ನೋಟಿಸ್ ಜಾರಿ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹಲವು ಗ್ರಾಮಗಳಲ್ಲಿ "ವಿದ್ಯಾಗಮ" ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಕರು ಮಕ್ಕಳಿದ್ದಲ್ಲಿಗೆ ತೆರಳಿ ಪಾಠ ಮಾಡದೇ ಮಕ್ಕಳನ್ನು ಶಾಲೆಗೆ ಕರೆಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಭೇಟಿ ನೀಡಿ ಶಿಕ್ಷಕರಿಗೆ ನೋಟಿಸ್​ ನೀಡಿದ್ದಾರೆ.

author img

By

Published : Aug 26, 2020, 10:25 PM IST

vidhyagama programme issue in  gangavathi
ವಿದ್ಯಾಗಮ ಕಾರ್ಯಕ್ರಮ

ಗಂಗಾವತಿ: ತಾಲೂಕಿನ ಕೆಲ ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ವಠಾರದ ಬದಲಿಗೆ ಶಾಲೆಗಳಲ್ಲಿ ಮಕ್ಕಳಿಗೆ ತರಗತಿ ನಡೆಸುತ್ತಿರುವ ಬಗ್ಗೆ ಈಟಿವಿ ಭಾರತದಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾಗಮ ಕಾರ್ಯಕ್ರಮದನ್ವಯ ಶಿಕ್ಷಕರು ಮಕ್ಕಳಿರುವ ಆಯಾ ವಠಾರ ಅಥವಾ ಕೇರಿಗಳಿಗೆ ತೆರಳಿ ಮಕ್ಕಳಿಗೆ ಪಾಠ ಮಾಡಬೇಕು. ಆದರೆ ಆನೆಗೊಂದಿ ಕ್ಲಸ್ಟರ್ ವ್ಯಾಪ್ತಿಗೆ ಬರುವ ರಾಂಪುರ, ಸೋನಿಯಾ ನಗರ, ಚಿಕ್ಕರಾಂಪುರ, ಹನುಮನಹಳ್ಳಿ, ಸಣಾಪುರ ಹಾಗೂ ಚಿಕ್ಕರಾಂಪುರದ ಸರ್ಕಾರಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳನ್ನು ಶಿಕ್ಷಕರು ಶಾಲೆಗೆ ಕರೆಸಿಕೊಂಡು ಪಾಠ ಮಾಡ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಣಾಧಿಕಾರಿ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು.

ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಆಯಾ ಶಾಲಾ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿರುವ ಬಿಇಒ, ಮೂರು ದಿನದೊಳಗೆ ನೋಟಿಸ್​​ಗೆ ಉತ್ತರಿಸಬೇಕು ಇಲ್ಲದಿದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಉಲ್ಲೇಖಿಸಿದ್ದಾರೆ.

vidhyagama programme issue in  gangavathi
ವಿದ್ಯಾಗಮ ಕಾರ್ಯಕ್ರಮ

ಏನಿದು "ವಿದ್ಯಾಗಮ" ಕಾರ್ಯಕ್ರಮ:

ಕೊರೊನಾ ಬಿಕ್ಕಟ್ಟಿನ ಕಾರಣ ಶಾಲೆಗಳು ಬಾಗಿಲು ಮುಚ್ಚಿವೆ. ಹೀಗಾಗಿ ಕಲಿಕೆಯಿಲ್ಲದೇ ಮನೆಯಲ್ಲೇ ಉಳಿದಿರುವ ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದ ಕಡೆಗೆ ಸೆಳೆದು ನಿರಂತರ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು "ವಿದ್ಯಾಗಮ" ಎಂಬ ಕಾರ್ಯಕ್ರಮ ಸಾರ್ವಜನಿಕ‌ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ.

ಈ ಕಾರ್ಯಕ್ರಮದಡಿ ಆಯಾ ಶಾಲಾ ವ್ಯಾಪ್ತಿಯ ಒಂದು ಊರಿನ ಮಕ್ಕಳನ್ನು ಯಾವುದಾದರೂ ಒಂದು ಮನೆಯಲ್ಲಿ ಒಂದುಗೂಡಿಸಿ ಶಿಕ್ಷಕರೇ ತೆರಳಿ ಪಾಠ ಮಾಡುತ್ತಾರೆ. ಶಾಲೆ ಪ್ರಾರಂಭವಾಗದ ಹಿನ್ನೆಲೆ ಇಲಾಖೆ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಹೋಂ ವರ್ಕ್ ಸೇರಿದಂತೆ ಇತ್ಯಾದಿ ಚಟುವಟಿಕೆ ಮಾಡಿಸಲಾಗುತ್ತದೆ.

ಗಂಗಾವತಿ: ತಾಲೂಕಿನ ಕೆಲ ಶಾಲೆಗಳಲ್ಲಿ ವಿದ್ಯಾಗಮ ಯೋಜನೆಯಡಿಯಲ್ಲಿ ವಠಾರದ ಬದಲಿಗೆ ಶಾಲೆಗಳಲ್ಲಿ ಮಕ್ಕಳಿಗೆ ತರಗತಿ ನಡೆಸುತ್ತಿರುವ ಬಗ್ಗೆ ಈಟಿವಿ ಭಾರತದಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ, ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವಿದ್ಯಾಗಮ ಕಾರ್ಯಕ್ರಮದನ್ವಯ ಶಿಕ್ಷಕರು ಮಕ್ಕಳಿರುವ ಆಯಾ ವಠಾರ ಅಥವಾ ಕೇರಿಗಳಿಗೆ ತೆರಳಿ ಮಕ್ಕಳಿಗೆ ಪಾಠ ಮಾಡಬೇಕು. ಆದರೆ ಆನೆಗೊಂದಿ ಕ್ಲಸ್ಟರ್ ವ್ಯಾಪ್ತಿಗೆ ಬರುವ ರಾಂಪುರ, ಸೋನಿಯಾ ನಗರ, ಚಿಕ್ಕರಾಂಪುರ, ಹನುಮನಹಳ್ಳಿ, ಸಣಾಪುರ ಹಾಗೂ ಚಿಕ್ಕರಾಂಪುರದ ಸರ್ಕಾರಿ ಹಾಗೂ ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳನ್ನು ಶಿಕ್ಷಕರು ಶಾಲೆಗೆ ಕರೆಸಿಕೊಂಡು ಪಾಠ ಮಾಡ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಣಾಧಿಕಾರಿ ಭೇಟಿ ನೀಡಿ ಸ್ಥಳೀಯರೊಂದಿಗೆ ಚರ್ಚೆ ನಡೆಸಿದರು.

ಮಾಧ್ಯಮದಲ್ಲಿ ಪ್ರಕಟವಾದ ವರದಿ ಆಧರಿಸಿ ಆಯಾ ಶಾಲಾ ಶಿಕ್ಷಕರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಿರುವ ಬಿಇಒ, ಮೂರು ದಿನದೊಳಗೆ ನೋಟಿಸ್​​ಗೆ ಉತ್ತರಿಸಬೇಕು ಇಲ್ಲದಿದ್ದರೆ ಶಿಸ್ತುಕ್ರಮ ಕೈಗೊಳ್ಳುವುದಾಗಿ ಉಲ್ಲೇಖಿಸಿದ್ದಾರೆ.

vidhyagama programme issue in  gangavathi
ವಿದ್ಯಾಗಮ ಕಾರ್ಯಕ್ರಮ

ಏನಿದು "ವಿದ್ಯಾಗಮ" ಕಾರ್ಯಕ್ರಮ:

ಕೊರೊನಾ ಬಿಕ್ಕಟ್ಟಿನ ಕಾರಣ ಶಾಲೆಗಳು ಬಾಗಿಲು ಮುಚ್ಚಿವೆ. ಹೀಗಾಗಿ ಕಲಿಕೆಯಿಲ್ಲದೇ ಮನೆಯಲ್ಲೇ ಉಳಿದಿರುವ ಮಕ್ಕಳನ್ನು ಮತ್ತೆ ವಿದ್ಯಾಭ್ಯಾಸದ ಕಡೆಗೆ ಸೆಳೆದು ನಿರಂತರ ಕಲಿಕಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು "ವಿದ್ಯಾಗಮ" ಎಂಬ ಕಾರ್ಯಕ್ರಮ ಸಾರ್ವಜನಿಕ‌ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ.

ಈ ಕಾರ್ಯಕ್ರಮದಡಿ ಆಯಾ ಶಾಲಾ ವ್ಯಾಪ್ತಿಯ ಒಂದು ಊರಿನ ಮಕ್ಕಳನ್ನು ಯಾವುದಾದರೂ ಒಂದು ಮನೆಯಲ್ಲಿ ಒಂದುಗೂಡಿಸಿ ಶಿಕ್ಷಕರೇ ತೆರಳಿ ಪಾಠ ಮಾಡುತ್ತಾರೆ. ಶಾಲೆ ಪ್ರಾರಂಭವಾಗದ ಹಿನ್ನೆಲೆ ಇಲಾಖೆ ಮಕ್ಕಳನ್ನು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಸೂಚಿಸಿದ್ದು, ಮಕ್ಕಳಿಗೆ ಪಾಠದ ಜೊತೆಗೆ ಹೋಂ ವರ್ಕ್ ಸೇರಿದಂತೆ ಇತ್ಯಾದಿ ಚಟುವಟಿಕೆ ಮಾಡಿಸಲಾಗುತ್ತದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.