ಮಂಡ್ಯ: ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾ ಪ್ರಕರಣಗಳ ಸಂಖ್ಯೆ ಸಾವಿರ ಗಡಿ ದಾಟಿದ್ದು, ಜನರಲ್ಲಿ ಆತಂಕ ಶುರುವಾಗಿದೆ. ಒಂದೇ ದಿನ 1,348 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 30,462 ಕ್ಕೆ ಏರಿಕೆಯಾಗಿದೆ.
ನಿನ್ನೆ 814 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 24,525 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 5,720 ಇದ್ದು, 5 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 215 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
- ಮಂಡ್ಯ- 468
- ಮದ್ದೂರು- 169
- ಮಳವಳ್ಳಿ- 209
- ಪಾಂಡವಪುರ- 138
- ಶ್ರೀರಂಗಪಟ್ಟಣ- 120
- ಕೆ.ಆರ್.ಪೇಟೆ- 72
- ನಾಗಮಂಗಲ- 150
- ಹೊರ ಜಿಲ್ಲೆಯ- 22 ಪ್ರಕರಣಗಳು ದಾಖಲಾಗಿವೆ.