ETV Bharat / state

ಭೂ ವರಹನಾಥನ ಮೊರೆ ಹೋದ ಅನರ್ಹ ಶಾಸಕ; ರಾಜಕೀಯ ಭವಿಷ್ಯಕ್ಕಾಗಿ ವಿಶೇಷ ಪೂಜೆ

author img

By

Published : Oct 14, 2019, 9:08 PM IST

ಮೈಸೂರಿನ ಪರಕಾಲ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ವರಹನಾಥ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನಡೆದಿದ್ದು, ಪೂಜೆಗೆ ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಹಾಗೂ ಮಾಜಿ ಶಾಸಕ ಕೃಷ್ಣಮೂರ್ತಿ ಹಾಜರಾಗಿದ್ದರು.

ವಿಶೇಷ ಪೂಜೆ

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಹಾಗೂ ಸಂತೆಮರಳ್ಳಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಮೂರ್ತಿ, ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿಯ ಭೂ ವರಹನಾಥ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರಿನ ಪರಕಾಲ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ವರಹನಾಥ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಇಬ್ಬರು ರಾಜಕೀಯ ಮುಖಂಡರು ಅಭಿಷೇಕದಲ್ಲಿ ಪಾಲ್ಗೊಂಡು ದೇವರಲ್ಲಿ ಪಾರ್ಥನೆ ಸಲ್ಲಿಸಿದ್ದಾರೆ. ಈ ವಿಶೇಷ ಪೂಜೆಯು ಇಬ್ಬರು ಮುಖಂಡರ ರಾಜಕೀಯ ಭವಿಷ್ಯಕ್ಕಾಗಿ ನಡೆದಿದೆ ಎಂಬ ಕೂಗು ಕೇಳಿ ಬಂದಿದೆ.

ರಾಜಕೀಯ ಭವಿಷ್ಯಕ್ಕಾಗಿ ವಿಶೇಷ ಪೂಜೆ

ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, ಕಬ್ಬಿನ ಹಾಲು, ಜೇನುತುಪ್ಪ ಸೇರಿದಂತೆ ವಿವಿಧ ಬಗೆಯ ಸುಮಾರು 58 ವಿಶೇಷ ಪುಷ್ಪಗಳಿಂದ ದೇವರಿಗೆ ಅಲಂಕಾರ ಮಾಡಿ ವಿಶೇಷ ಅಭಿಷೇಕ ಮಾಡಲಾಯಿತು.

ಮಂಡ್ಯ: ಕೆ.ಆರ್.ಪೇಟೆ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಹಾಗೂ ಸಂತೆಮರಳ್ಳಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಮೂರ್ತಿ, ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲೂಕಿನ ಕಲ್ಲಹಳ್ಳಿಯ ಭೂ ವರಹನಾಥ ಸನ್ನಿಧಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಮೈಸೂರಿನ ಪರಕಾಲ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ವರಹನಾಥ ಸ್ವಾಮಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಇಬ್ಬರು ರಾಜಕೀಯ ಮುಖಂಡರು ಅಭಿಷೇಕದಲ್ಲಿ ಪಾಲ್ಗೊಂಡು ದೇವರಲ್ಲಿ ಪಾರ್ಥನೆ ಸಲ್ಲಿಸಿದ್ದಾರೆ. ಈ ವಿಶೇಷ ಪೂಜೆಯು ಇಬ್ಬರು ಮುಖಂಡರ ರಾಜಕೀಯ ಭವಿಷ್ಯಕ್ಕಾಗಿ ನಡೆದಿದೆ ಎಂಬ ಕೂಗು ಕೇಳಿ ಬಂದಿದೆ.

ರಾಜಕೀಯ ಭವಿಷ್ಯಕ್ಕಾಗಿ ವಿಶೇಷ ಪೂಜೆ

ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, ಕಬ್ಬಿನ ಹಾಲು, ಜೇನುತುಪ್ಪ ಸೇರಿದಂತೆ ವಿವಿಧ ಬಗೆಯ ಸುಮಾರು 58 ವಿಶೇಷ ಪುಷ್ಪಗಳಿಂದ ದೇವರಿಗೆ ಅಲಂಕಾರ ಮಾಡಿ ವಿಶೇಷ ಅಭಿಷೇಕ ಮಾಡಲಾಯಿತು.

Intro:ಮಂಡ್ಯ: ಒಬ್ಬರು ತವರಿನ ಪುತ್ರನಿಗಾಗಿ ಪಕ್ಷ ಬಿಟ್ಟು ಅನರ್ಹರಾದರು. ಮತ್ತೊಬ್ಬರು ಒಂದೇ ಒಂದು ಮತದಿಂದ ಸೋತು ರಾಜಕೀಯ ಭವಿಷ್ಯವನ್ನೇ ಕಾಣದಾದವರು. ಈಗ ರಾಜಕೀಯ ಭವಿಷ್ಯಕ್ಕಾಗಿ ಭೂವರಹನಾಥನ ಮೊರೆ ಹೋಗಿದ್ದಾರೆ.

ಹೌದು, ಕೆ.ಆರ್.ಪೇಟೆ ಕ್ಷೇತ್ರದ ಅನರ್ಹ ಶಾಸಕ ಕೆ.ಸಿ. ನಾರಾಯಣಗೌಡ ಹಾಗೂ  ಸಂತೆಮರಳ್ಳಿ ಕ್ಷೇತ್ರದ ಮಾಜಿ ಶಾಸಕ ಕೃಷ್ಣಮೂರ್ತಿ ಸೀಗೆ ಹುಣ್ಣಿಮೆ ಹಿನ್ನೆಲೆಯಲ್ಲಿ ಕೆ.ಆರ್.ಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂವರಹನಾಥ ಸನ್ನಿದಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು. ಇಂದು ಪೂಜೆ ಸಲ್ಲಿಸಿದರೆ ಸಂಕಷ್ಟ ದೂರವಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಪೂಜೆ ಸಲ್ಲಿಸಿದರು.

ಮೈಸೂರಿನ ಪರಕಾಲ ಮಠದ ಸ್ವಾಮೀಜಿಯವರ ನೇತೃತ್ವದಲ್ಲಿ ಇಂದು ವರಹನಾಥ ಸ್ವಾಮೀಜಿಗೆ ವಿಶೇಷ ಪೂಜಾ ಕೈಂಕರ್ಯ ನೆರವೇರಿತು. ಈ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಆಗಮಿಸಿದ ಈ ಇಬ್ಬರೂ ರಾಜಕೀಯ ಮುಖಂಡರು ಅಭಿಷೇಕದಲ್ಲಿ ಪಾಲ್ಗೊಂಡು ದೇವರಲ್ಲಿ ಪಾರ್ಥನೆ ಸಲ್ಲಿಸಿದ್ದಾರೆ. ಮುಂಜಾನೆಯೇ ದೇವರಿಗೆ ಹರಕೆ ಸಲ್ಲಿಸಿದ್ದು ವಿಶೇಷ.

ಸಾವಿರ ಲೀಟರ್ ಹಾಲು, 500 ಲೀಟರ್ ಎಳನೀರು, ಕಬ್ಬಿನ ಹಾಲು, ಜೇನುತುಪ್ಪ ಸೇರಿದಂತೆ ವಿವಿಧ ಬಗೆಯ ಸುಮಾರು 58 ವಿಶೇಷ ಪುಷ್ಪಗಳಿಂದ ದೇವರಿಗೆ ಅಲಂಕಾರ ಮಾಡಿ ವಿಶೇಷ ಅಭಿಷೇಕ ಮಾಡಲಾಯಿತು.  ಈ ಇಬ್ಬರೂ ನಾಯಕರು ರಾಜಕೀಯ ಭವಿಷ್ಯಕ್ಕಾಗಿ ಭೂವರಹನಾಥನ ಮೊರೆ ಹೋಗಿದ್ದು, ದೇವರ ಆಶೀರ್ವಾದ ಸಿಗುತ್ತಾ ಅಂತ ನೋಡಬೇಕಾಗಿದೆ.

Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.