ಮಂಡ್ಯ: ಕೋರ್ಟ್ ಸಿಬ್ಬಂದಿಗೆ ಸೋಂಕು ದೃಢಪಟ್ಟಿದ್ದು, ಕೋರ್ಟ್ ಆವರಣವನ್ನು ಸ್ಯಾನಿಟೈಸ್ ಮಾಡಲಾಯಿತು.
ಹೌದು, ಸಾರ್ವಜನಿಕರ ಜೊತೆ ಸಂಪರ್ಕದಲ್ಲಿದ್ದ ಕೋರ್ಟ್ ಸಿಬ್ಬಂದಿಗೂ ಸೋಂಕು ತಗುಲಿದೆ. ಹಾಗಾಗಿ ಇಂದು ಸಂಜೆ ಕೋರ್ಟ್ ಆವರಣವನ್ನು ಸ್ಯಾನಿಟೈಸ್ ಮಾಡಲಾಗಿದ್ದು, ಶನಿವಾರದವರೆಗೂ ರಜೆ ಘೋಷಿಸಲಾಗಿದೆ.
ಅಲ್ಲದೇ, ಜಿಲ್ಲೆಯಲ್ಲಿಂದು ಐವರಲ್ಲಿ ಸೋಂಕು ಪತ್ತೆಯಾಗಿದೆ. ಓರ್ವ ಸೋಂಕಿತ ಮಾತ್ರ ಮುಂಬೈ ಪ್ರವಾಸದ ಹಿನ್ನಲೆ ಹೊಂದಿದ್ದು, ಉಳಿದವರಿಗೆ ಸ್ಥಳೀಯವಾಗಿಯೆ ಸೋಂಕು ಪತ್ತೆಯಾಗಿದೆ. ಇನ್ನೂ ಇಬ್ಬರು ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಜಿಲ್ಲೆಯ ಕೆಲವು ಕಡೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.