ETV Bharat / state

ಎಸ್​ಐ ಕರ್ತವ್ಯಕ್ಕೆ ಅಡ್ಡಿ: ಮಾಜಿ ಶಾಸಕರ ಸಹೋದರ ಅಂದರ್​, ಮತ್ತೋರ್ವನಿಗೆ ಹುಡುಕಾಟ

author img

By

Published : Jan 10, 2020, 9:39 AM IST

ಎಸ್​ಐ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಕೆ ಆರ್​ ಪೇಟೆ ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್​ ಮಾಜಿ ಅಧ್ಯಕ್ಷ ಕೆ.ಬಿ. ಈಶ್ವರಪ್ರಸಾದ್​ರನ್ನು ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಮತ್ತೋರ್ವ ಆರೋಪಿ ಕೆ.ಬಿ. ರವಿ ತಲೆಮರೆಸಿಕೊಂಡಿದ್ದಾರೆ.

ಶಾಸಕರ ಸಹೋದರ ಅಂದರ್,  Arrest of MLA's brother in mandya
ಶಾಸಕರ ಸಹೋದರ ಅಂದರ್

ಮಂಡ್ಯ: ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕೆ.ಆರ್. ಪೇಟೆ ಸಬ್‌ಇನ್ಸ್‌ಪೆಕ್ಟರ್​ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಪ್ರಕರಣ ಸಂಬಂಧ ಮಾಜಿ ಶಾಸಕರ ಸಹೋದರನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾರೆ.

ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್​ ಮಾಜಿ ಅಧ್ಯಕ್ಷ ಕೆ.ಬಿ. ಈಶ್ವರಪ್ರಸಾದ್​ ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಕೆ.ಬಿ. ರವಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತ ಈಶ್ವರ್ ಪ್ರಸಾದ್ ಹಾಗೂ ರವಿ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರರಾಗಿದ್ದಾರೆ. ವರ್ಷಾಚರಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪಿಎಸ್‌ಐ ಬ್ಯಾಟರಾಯಗೌಡ ಅವರು ದೂರು ದಾಖಲಿಸಿಕೊಂಡಿದ್ದರು. ಪ್ರಕರಣ ಹಿನ್ನೆಲೆ ಇಬ್ಬರೂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಈಶ್ವರ್ ಪ್ರಸಾದ್​ರನ್ನು ಒಪ್ಪಿಸಲಾಗಿದೆ.

ಮಂಡ್ಯ: ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕೆ.ಆರ್. ಪೇಟೆ ಸಬ್‌ಇನ್ಸ್‌ಪೆಕ್ಟರ್​ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ ಪ್ರಕರಣ ಸಂಬಂಧ ಮಾಜಿ ಶಾಸಕರ ಸಹೋದರನನ್ನು ಬಂಧಿಸಿದ್ದು, ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದಾರೆ.

ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲೂಕು ಪಂಚಾಯತ್​ ಮಾಜಿ ಅಧ್ಯಕ್ಷ ಕೆ.ಬಿ. ಈಶ್ವರಪ್ರಸಾದ್​ ಬಂಧಿತ ಆರೋಪಿ. ಮತ್ತೋರ್ವ ಆರೋಪಿ ಕೆ.ಬಿ. ರವಿ ತಲೆಮರೆಸಿಕೊಂಡಿದ್ದು, ಆತನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ಬಂಧಿತ ಈಶ್ವರ್ ಪ್ರಸಾದ್ ಹಾಗೂ ರವಿ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರರಾಗಿದ್ದಾರೆ. ವರ್ಷಾಚರಣೆ ವೇಳೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಸಂಬಂಧ ಪಿಎಸ್‌ಐ ಬ್ಯಾಟರಾಯಗೌಡ ಅವರು ದೂರು ದಾಖಲಿಸಿಕೊಂಡಿದ್ದರು. ಪ್ರಕರಣ ಹಿನ್ನೆಲೆ ಇಬ್ಬರೂ ಕೋರ್ಟ್ ಮೊರೆ ಹೋಗಿದ್ದರು. ಆದರೆ, ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಈಶ್ವರ್ ಪ್ರಸಾದ್​ರನ್ನು ಒಪ್ಪಿಸಲಾಗಿದೆ.

Intro:ಮಂಡ್ಯ: ನೂತನ ವರ್ಷದ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕೆ.ಆರ್.ಪೇಟೆ ಸಬ್‌ಇನ್ಸ್‌ಪೆಕ್ಟರ್ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ ಸಂಬಂಧ ಮಾಜಿ ಶಾಸಕರ ಸಹೋದರ ಬಂಧನವಾಗಿದೆ.
ಟೌನ್ ಕ್ಲಬ್ ಅಧ್ಯಕ್ಷ ಹಾಗೂ ತಾಲ್ಲೂಕು ಪಂಚಾಯತ ಮಾಜಿ ಅಧ್ಯಕ್ಷ ಕೆ.ಬಿ.ಈಶ್ವರಪ್ರಸಾದ್‌ಗೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಿಸಿದ ಹಿನ್ನೆಲೆಯಲ್ಲಿ ಪಟ್ಟಣ ಪೋಲಿಸರು ಈಶ್ವರಪ್ರಸಾದ್ ಅವರನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ಕೆ.ಬಿ.ರವಿ ತಲೆಮರೆಸಿಕೊಂಡಿದ್ದು ಆತನ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬಂಧಿತ ಈಶ್ವರ್ ಪ್ರಸಾದ್ ಹಾಗೂ ರವಿ ಮಾಜಿ ಶಾಸಕ ಕೆ.ಬಿ ಚಂದ್ರಶೇಖರ್ ಸಹೋದರರಾಗಿದ್ದಾರೆ. ವರ್ಷಾಚರಣೆ ವೇಳೆ ಕರ್ತವ್ಯಕ್ಕೆ ಅಡ್ಡಿ ಸಂಬಂಧ ಪಿಎಸ್‌ಐ ಬ್ಯಾಟರಾಯಗೌಡ ದೂರು ದಾಖಲು ಮಾಡಿದ್ದರು. ಪ್ರಕರಣ ಹಿನ್ನಲೆ ಇಬ್ಬರೂ ಕೋರ್ಟ್ ಮೊರೆ ಹೋಗಿದ್ದರು. ಆದರೆ ಸೆಷನ್ಸ್ ಕೋರ್ಟ್ ಜಾಮೀನು ನಿರಾಕರಣೆ ಮಾಡಿದ ಹಿನ್ನಲೆ 10 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.Body:ಯತೀಶ್ ಬಾಬು, ಮಂಡ್ಯ

(ತಲೆಯಲ್ಲಿ ಕೂದಲು ಇಲ್ಲದವರು ಈಶ್ವರ್ ಪ್ರಸಾದ್)Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.