ETV Bharat / state

ರಸ್ತೆ ಅಪಘಾತದಲ್ಲಿ ಸವಾರ ಸಾವು: ಹೆಲ್ಮೆಟ್‌ ಧರಿಸುತ್ತಿದ್ದರೆ ಪ್ರಾಣ ಉಳಿಯುತ್ತಿತ್ತು!

ಬೈಕ್​ಗೆ ಅಡ್ಡ ಬಂದ ವ್ಯಕ್ತಿಯನ್ನು ಅಪಘಾತದಿಂದ ತಪ್ಪಿಸಲು ಹೋಗಿ ಸವಾರನ ತಲೆಗೆ ಕಲ್ಲು ಬಡಿದು ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಡಿಂಕಾ ಶೆಟ್ಟಹಳ್ಳಿ ಬಳಿ ನಡೆದಿದೆ.

author img

By

Published : Sep 21, 2019, 4:36 PM IST

ಹೆಲ್ಮೆಟ್‌ ಇರುತ್ತಿದ್ದರೆ ಪ್ರಾಣ ಉಳಿಯುತ್ತಿತ್ತು!

ಮಂಡ್ಯ: ಬೈಕ್​ಗೆ ಅಡ್ಡ ಬಂದ ವ್ಯಕ್ತಿಯನ್ನು ಅಪಘಾತದಿಂದ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಸವಾರನ ತಲೆಗೆ ಕಲ್ಲು ಬಡಿದು ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಡಿಂಕಾ ಶೆಟ್ಟಹಳ್ಳಿ ಬಳಿ ನಡೆದಿದೆ.

ಚಿನಕುರಳಿ ಗ್ರಾಮದ ಭರತ್ (20) ಸಾವಿಗೀಡಾದ ಬೈಕ್ ಸವಾರ.

ದೇವಸ್ಥಾನದಲ್ಲಿ ಪೂಜೆ ಮುಗಿಸಿ ಗ್ರಾಮಕ್ಕೆ ವಾಪಸಾಗುವಾಗ ದುರ್ಘಟನೆ ನಡೆದಿದೆ. ಸಂಚಾರದ ವೇಳೆ ರಸ್ತೆಯಲ್ಲಿ ವ್ಯಕ್ತಿಯೋರ್ವ ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಪ್ರಯತ್ನಿಸಿ ಬೈಕ್​ನಿಂದ ಕೆಳಗೆ ಆಯ ತಪ್ಪಿ ಬಿದ್ದಿದ್ದಾನೆ. ಈ ಸಂದರ್ಭ ರಸ್ತೆ ಬದಿಯ ಕಲ್ಲು ತಲೆಗೆ ಬಡಿದು ತೀವ್ರವಾಗಿ ರಕ್ತಸ್ರಾವವಾದ ಪರಿಣಾಮ ಆತ ಮೃತಪಟ್ಟಿದ್ದಾನೆ.

ತಲೆಗೆ ಹೆಲ್ಮೆಟ್ ಧರಿಸಿದ್ದರೆ ಭರತ್ ಸಾವಿನಿಂದ ಪಾರಾಗುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಕೆ.ಆರ್.ಎಸ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯ: ಬೈಕ್​ಗೆ ಅಡ್ಡ ಬಂದ ವ್ಯಕ್ತಿಯನ್ನು ಅಪಘಾತದಿಂದ ತಪ್ಪಿಸಲು ಹೋಗಿ ಕೆಳಗೆ ಬಿದ್ದು ಸವಾರನ ತಲೆಗೆ ಕಲ್ಲು ಬಡಿದು ಸಾವಿಗೀಡಾದ ಘಟನೆ ಪಾಂಡವಪುರ ತಾಲೂಕಿನ ಡಿಂಕಾ ಶೆಟ್ಟಹಳ್ಳಿ ಬಳಿ ನಡೆದಿದೆ.

ಚಿನಕುರಳಿ ಗ್ರಾಮದ ಭರತ್ (20) ಸಾವಿಗೀಡಾದ ಬೈಕ್ ಸವಾರ.

ದೇವಸ್ಥಾನದಲ್ಲಿ ಪೂಜೆ ಮುಗಿಸಿ ಗ್ರಾಮಕ್ಕೆ ವಾಪಸಾಗುವಾಗ ದುರ್ಘಟನೆ ನಡೆದಿದೆ. ಸಂಚಾರದ ವೇಳೆ ರಸ್ತೆಯಲ್ಲಿ ವ್ಯಕ್ತಿಯೋರ್ವ ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಪ್ರಯತ್ನಿಸಿ ಬೈಕ್​ನಿಂದ ಕೆಳಗೆ ಆಯ ತಪ್ಪಿ ಬಿದ್ದಿದ್ದಾನೆ. ಈ ಸಂದರ್ಭ ರಸ್ತೆ ಬದಿಯ ಕಲ್ಲು ತಲೆಗೆ ಬಡಿದು ತೀವ್ರವಾಗಿ ರಕ್ತಸ್ರಾವವಾದ ಪರಿಣಾಮ ಆತ ಮೃತಪಟ್ಟಿದ್ದಾನೆ.

ತಲೆಗೆ ಹೆಲ್ಮೆಟ್ ಧರಿಸಿದ್ದರೆ ಭರತ್ ಸಾವಿನಿಂದ ಪಾರಾಗುತ್ತಿದ್ದರು ಎಂದು ಸ್ಥಳೀಯರು ಹೇಳಿದ್ದಾರೆ.

ಕೆ.ಆರ್.ಎಸ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮಂಡ್ಯ: ಬೈಕ್ ಗೆ ಅಡ್ಡ ಬಂದ ವ್ಯಕ್ತಿಯನ್ನು ಅಪಘಾತದಿಂದ ತಪ್ಪಿಸಲು ಹೋಗಿ ಸವಾರನ ತಲೆಗೆ ಕಲ್ಲು ಬಡಿದು ಸಾವಿಗೀಡಾದ ಘಟನೆ ಪಾಂಡವಪುರ ತಾಲ್ಲೂಕಿನ ಡಿಂಕಾ ಶೆಟ್ಟಹಳ್ಳಿ ಬಳಿ ನಡೆದಿದೆ.

ಚಿನಕುರಳಿ ಗ್ರಾಮದ ಭರತ್ (20) ಸಾವಿಗೀಡಾದ ಬೈಕ್ ಸವಾರನಾಗಿದ್ದು, ಇಂದು ದೇವಸ್ಥಾನದಲ್ಲಿ ಪೂಜೆ ಮುಗಿಸಿ ಗ್ರಾಮಕ್ಕೆ ವಾಪಸ್ ಆಗುವಾಗ ಘಟನೆ ನಡೆದಿದೆ.

ಬೈಕ್ ಅಪಘಾತ ತಪ್ಪಿಸಲು ಹೋದಾಗ ಬೈಕ್ ನಿಂದ ಕೆಳಗೆ ಭರತ್ ಆಯಾ ತಪ್ಪಿ ಬಿದ್ದಿದ್ದಾನೆ. ಈ ಸಂದರ್ಭ ರಸ್ತೆ ಬದಿಯ ಕಲ್ಲು ತಲೆಗೆ ಬಡಿದು ತೀರ್ವವಾಗಿ ಗಾಯಗೊಂಡು ಸ್ಥಳದಲ್ಲೇ ಭರತ್ ಸಾವಿಗೀಡಾಗಿದ್ಧಾನೆ.

ಕೆ.ಆರ್.ಎಸ್. ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ. ತಲೆಗೆ ಹೆಲ್ಮೆಟ್ ಧರಿಸಿದ್ದರೆ ಭರತ್ ಸಾವಿನಿಂದ ಪಾರಾಗಬಹುದಾಗಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ.

Body:ಯತೀಶ್ ಬಾಬುConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.