ಮಂಡ್ಯ: ರಾಜ್ಯ ರಾಜಕೀಯ ಪರಿಸ್ಥಿತಿಯನ್ನು ವಿಡಂಬನೆ ಮಾಡಲು ಬಿಜೆಪಿ ಕಾರ್ಯಕರ್ತರು ವಿನೂತನವಾಗಿ ಪ್ರತಿಭಟನೆ ಮಾಡಿದರು. ನಗರದ ಡಿಸಿ ಕಚೇರಿ ಎದುರಿನ ಡಾ. ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ನಂತರ ಹಳೆಯ ಸ್ಪೀಕರ್ ಹಿಡಿದು ಪ್ರತಿಭಟನೆ ಮಾಡಿದರು.
ಮುಖಂಡರಾದ ಶಿವಕುಮಾರ್ ಆರಾಧ್ಯ, ಮಂಜುನಾಥ್ ಸೇರಿದಂತೆ ಹಲವರು ಹೋರಾಟದಲ್ಲಿ ಪಾಲ್ಗೊಂಡು, ವಿಶ್ವಾಸ ಮತ ಯಾಚನೆಯ ವಿಳಂಬ ಖಂಡಿಸಿ ಪ್ರತಿಭಟಿಸಿದರು. ಸೋಮವಾರವೇ ವಿಶ್ವಾಸ ಮತ ಯಾಚಿಸಬೇಕು ಎಂದು ಒತ್ತಾಯ ಮಾಡಿದರು. ಹಳೆಯ ಸ್ಪೀಕರ್ ಹಿಡಿದು ಹಾಡು ಹಾಡಿ ದೋಸ್ತಿ ಸರ್ಕಾರದ ವಿರುದ್ಧ ಲೇವಡಿ ಮಾಡಿದರು.