ETV Bharat / state

ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಕೊಚ್ಚಿಹೋಗಿದ್ದ ವ್ಯಕ್ತಿ ಶವ ಪತ್ತೆ

ನಿನ್ನೆ ಲೋಕೇಶ್​ ಅವರ ಕಾರು ನಿಯಂತ್ರಣ ತಪ್ಪಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದಿತ್ತು. ಇಂದು ಅವರ ಮೃತದೇಹ ಪತ್ತೆಯಾಗಿದೆ.

author img

By

Published : Jul 28, 2023, 5:54 PM IST

Body of person found who washed away after car fell into Canal
ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಬಿದ್ದು ಕೊಚ್ಚಿಹೋಗಿದ್ದ ವ್ಯಕ್ತಿ ಶವ ಪತ್ತೆ

ಮಂಡ್ಯ: ಮಂಡ್ಯದ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ನೀರು ಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಇಂದು ಪತ್ತೆಯಾಗಿದೆ. ತಾಲೂಕಿನ ಶಿವಳ್ಳಿ ಗ್ರಾಮದ ಮರಿಗೌಡರ ಪುತ್ರ ಲೋಕೇಶ್ (45) ನೀರು ಪಾಲಾಗಿದ್ದರು. ಇವರ ಮೃತ ದೇಹ ದುರಂತ ನಡೆದ ಒಂದು ಕಿಲೋಮೀಟರ್ ದೂರದಲ್ಲಿರುವ ಸೇತುವೆ ಬಳಿ ದೊರೆತಿದೆ.

ಶಿವಳ್ಳಿಯಲ್ಲಿ ಮೆಡಿಕಲ್ ಶಾಪ್‌ ನಡೆಸುತ್ತಿದ್ದ ಲೋಕೇಶ್ ಗುರುವಾರ ಕಾರ್ಯನಿಮಿತ್ತ ಪಾಂಡವಪುರಕ್ಕೆ ತೆರಳಲು ಸ್ನೇಹಿತರ ಕಾರು ತೆಗೆದುಕೊಂಡು ಹೋಗುತ್ತಿದ್ದಾಗ ತಿಬ್ಬನಹಳ್ಳಿ ಬಳಿ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಬಿದ್ದಿತ್ತು. ಕಾರು ಚಾಲನೆ ಮಾಡುತ್ತಿದ್ದ ಲೋಕೇಶ್ ಪಾರಾಗಲು ಕಾರಿನ ಮೇಲ್ಭಾಗದಲ್ಲಿ ಕುಳಿತು ರಕ್ಷಣೆಗಾಗಿ ಕೂಗಿಕೊಂಡಿದ್ದರು. ತಕ್ಷಣ ಯಾರೂ ಸಹಾಯಕ್ಕೆ ಬಂದಿರಲಿಲ್ಲ. ಕಾರು ನೀರಿನಲ್ಲಿ ಮುಳುಗಿದ್ದ ಪರಿಣಾಮ ಈಜು ಬಾರದ ಲೋಕೇಶ್ ನೀರು ಪಾಲಾಗಿದ್ದರು.

ಸ್ಥಳೀಯ ಈಜುಗಾರರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರೂ ಲೋಕೇಶ್ ಪತ್ತೆಯಾಗಿರಲಿಲ್ಲ. ನಾಲೆಯಲ್ಲಿ ನೀರು ಕಡಿಮೆ ಮಾಡಿ ನೀರಿನಲ್ಲಿ ಮುಳುಗಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಿದರೂ ಅಲ್ಲಿಯೂ ಸಹ ಮೃತದೇಹ ಇರಲಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೃತ ದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿತ್ತು. ಕತ್ತಲು ಆವರಿಸಿದ್ದರಿಂದ ಗುರುವಾರ ರಾತ್ರಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿತ್ತು.

ಶುಕ್ರವಾರ ಬೆಳಗ್ಗೆ ಶೋಧ ಕಾರ್ಯ ಮುಂದುವರಿಸಿದಾಗ ದುರಂತ ನಡೆದ ಒಂದು ಕಿಲೋಮೀಟರ್ ದೂರದಲ್ಲಿ ಲೋಕೇಶ್ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ಮೃತ ದೇಹವನ್ನು ರವಾನಿಸಲಾಗಿದೆ.

ಕಾರು ಅಪಘಾತದಲ್ಲಿ ವಿದ್ಯುತ್​ ತಗುಲಿ ಇಬ್ಬರು ಸಾವು: ಟ್ರಯಲ್​ಗೆಂದು ತೆಗೆದುಕೊಂಡು ಹೋದ ಕಾರು ಕಾಂಪೌಡ್​ಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡ ಘಡನೆ ನಿನ್ನೆ ಮೈಸೂರಿನಲ್ಲಿ ನದೆದಿತ್ತು. ಸೆಕೆಂಡ್​ ಹ್ಯಾಂಡ್​ ಇನ್ನೋವಾ ಕಾರು ಖರೀದಿಸಲೆಂದು ಹೋಗಿದ್ದ ರವಿ ಕುಮಾರ್​ ಎನ್ನುವವರು ಕಾರು ಟ್ರಯಲ್​ಗೆಂದು ತೆಗೆದುಕೊಂಡು ಹೋಗಿದ್ದರು. ಕಾರಿನಲ್ಲಿ ರವಿ ಕುಮಾರ್​ ಜೊತೆಗೆ ಇನ್ನೂ ನಾಲ್ವರಿದ್ದರು.

ನಗರದ ಹೊರವಲಯದ ಮಾನಂದವಾಡಿ ರಸ್ತೆಯ ಬಳಿ ಕಾರು ಕಾಂಪೌಂಡ್​ ಒಂದಕ್ಕೆ ಡಿಕ್ಕಿ ಹೊಡೆದು ನಂತರ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿದ್ಯುತ್​ ತಂತಿ ಕಾರಿನ ಮೇಲೆ ಬಿದ್ದಿತ್ತು. ಕಾರಿನಲ್ಲಿದ್ದ ರವಿ ಕುಮಾರ್​ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತ ಕಂಡು ರಕ್ಷಿಸಲೆಂದು ಬಂದ ಆಟೋ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಉಳಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರು ಮಾತ್ರ ಅದೃಷ್ಟವಶಾತ್​ ಪಾರಾಗಿದ್ದರು.

ಇದನ್ನೂ ಓದಿ: Car fell into canal: ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಚಾಲಕ ನಾಪತ್ತೆ, ಮುಂದುವರೆದ ಶೋಧ

ಮಂಡ್ಯ: ಮಂಡ್ಯದ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ನೀರು ಪಾಲಾಗಿದ್ದ ವ್ಯಕ್ತಿಯ ಮೃತ ದೇಹ ಇಂದು ಪತ್ತೆಯಾಗಿದೆ. ತಾಲೂಕಿನ ಶಿವಳ್ಳಿ ಗ್ರಾಮದ ಮರಿಗೌಡರ ಪುತ್ರ ಲೋಕೇಶ್ (45) ನೀರು ಪಾಲಾಗಿದ್ದರು. ಇವರ ಮೃತ ದೇಹ ದುರಂತ ನಡೆದ ಒಂದು ಕಿಲೋಮೀಟರ್ ದೂರದಲ್ಲಿರುವ ಸೇತುವೆ ಬಳಿ ದೊರೆತಿದೆ.

ಶಿವಳ್ಳಿಯಲ್ಲಿ ಮೆಡಿಕಲ್ ಶಾಪ್‌ ನಡೆಸುತ್ತಿದ್ದ ಲೋಕೇಶ್ ಗುರುವಾರ ಕಾರ್ಯನಿಮಿತ್ತ ಪಾಂಡವಪುರಕ್ಕೆ ತೆರಳಲು ಸ್ನೇಹಿತರ ಕಾರು ತೆಗೆದುಕೊಂಡು ಹೋಗುತ್ತಿದ್ದಾಗ ತಿಬ್ಬನಹಳ್ಳಿ ಬಳಿ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ವಿಶ್ವೇಶ್ವರಯ್ಯ ನಾಲೆಗೆ ಕಾರು ಉರುಳಿ ಬಿದ್ದಿತ್ತು. ಕಾರು ಚಾಲನೆ ಮಾಡುತ್ತಿದ್ದ ಲೋಕೇಶ್ ಪಾರಾಗಲು ಕಾರಿನ ಮೇಲ್ಭಾಗದಲ್ಲಿ ಕುಳಿತು ರಕ್ಷಣೆಗಾಗಿ ಕೂಗಿಕೊಂಡಿದ್ದರು. ತಕ್ಷಣ ಯಾರೂ ಸಹಾಯಕ್ಕೆ ಬಂದಿರಲಿಲ್ಲ. ಕಾರು ನೀರಿನಲ್ಲಿ ಮುಳುಗಿದ್ದ ಪರಿಣಾಮ ಈಜು ಬಾರದ ಲೋಕೇಶ್ ನೀರು ಪಾಲಾಗಿದ್ದರು.

ಸ್ಥಳೀಯ ಈಜುಗಾರರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರೂ ಲೋಕೇಶ್ ಪತ್ತೆಯಾಗಿರಲಿಲ್ಲ. ನಾಲೆಯಲ್ಲಿ ನೀರು ಕಡಿಮೆ ಮಾಡಿ ನೀರಿನಲ್ಲಿ ಮುಳುಗಿದ್ದ ಕಾರನ್ನು ಕ್ರೇನ್ ಮೂಲಕ ಮೇಲಕ್ಕೆ ಎತ್ತಿದರೂ ಅಲ್ಲಿಯೂ ಸಹ ಮೃತದೇಹ ಇರಲಿಲ್ಲ. ನೀರಿನಲ್ಲಿ ಕೊಚ್ಚಿ ಹೋಗಿರುವುದು ಖಚಿತವಾದ ಹಿನ್ನೆಲೆಯಲ್ಲಿ ಮೃತ ದೇಹಕ್ಕಾಗಿ ಶೋಧ ಕಾರ್ಯಾಚರಣೆ ಮುಂದುವರೆದಿತ್ತು. ಕತ್ತಲು ಆವರಿಸಿದ್ದರಿಂದ ಗುರುವಾರ ರಾತ್ರಿ ಕಾರ್ಯಾಚರಣೆ ಸ್ಥಗಿತ ಮಾಡಲಾಗಿತ್ತು.

ಶುಕ್ರವಾರ ಬೆಳಗ್ಗೆ ಶೋಧ ಕಾರ್ಯ ಮುಂದುವರಿಸಿದಾಗ ದುರಂತ ನಡೆದ ಒಂದು ಕಿಲೋಮೀಟರ್ ದೂರದಲ್ಲಿ ಲೋಕೇಶ್ ಮೃತದೇಹ ಪತ್ತೆಯಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮಿಮ್ಸ್ ಆಸ್ಪತ್ರೆಗೆ ಮೃತ ದೇಹವನ್ನು ರವಾನಿಸಲಾಗಿದೆ.

ಕಾರು ಅಪಘಾತದಲ್ಲಿ ವಿದ್ಯುತ್​ ತಗುಲಿ ಇಬ್ಬರು ಸಾವು: ಟ್ರಯಲ್​ಗೆಂದು ತೆಗೆದುಕೊಂಡು ಹೋದ ಕಾರು ಕಾಂಪೌಡ್​ಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂವರು ಗಾಯಗೊಂಡ ಘಡನೆ ನಿನ್ನೆ ಮೈಸೂರಿನಲ್ಲಿ ನದೆದಿತ್ತು. ಸೆಕೆಂಡ್​ ಹ್ಯಾಂಡ್​ ಇನ್ನೋವಾ ಕಾರು ಖರೀದಿಸಲೆಂದು ಹೋಗಿದ್ದ ರವಿ ಕುಮಾರ್​ ಎನ್ನುವವರು ಕಾರು ಟ್ರಯಲ್​ಗೆಂದು ತೆಗೆದುಕೊಂಡು ಹೋಗಿದ್ದರು. ಕಾರಿನಲ್ಲಿ ರವಿ ಕುಮಾರ್​ ಜೊತೆಗೆ ಇನ್ನೂ ನಾಲ್ವರಿದ್ದರು.

ನಗರದ ಹೊರವಲಯದ ಮಾನಂದವಾಡಿ ರಸ್ತೆಯ ಬಳಿ ಕಾರು ಕಾಂಪೌಂಡ್​ ಒಂದಕ್ಕೆ ಡಿಕ್ಕಿ ಹೊಡೆದು ನಂತರ ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ವಿದ್ಯುತ್​ ತಂತಿ ಕಾರಿನ ಮೇಲೆ ಬಿದ್ದಿತ್ತು. ಕಾರಿನಲ್ಲಿದ್ದ ರವಿ ಕುಮಾರ್​ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅಪಘಾತ ಕಂಡು ರಕ್ಷಿಸಲೆಂದು ಬಂದ ಆಟೋ ಚಾಲಕ ಕೂಡ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಉಳಿದಂತೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಒಬ್ಬರು ಮಾತ್ರ ಅದೃಷ್ಟವಶಾತ್​ ಪಾರಾಗಿದ್ದರು.

ಇದನ್ನೂ ಓದಿ: Car fell into canal: ಮಂಡ್ಯದ ವಿಸಿ ನಾಲೆಗೆ ಬಿದ್ದ ಕಾರು: ಚಾಲಕ ನಾಪತ್ತೆ, ಮುಂದುವರೆದ ಶೋಧ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.