ಮಂಡ್ಯ: ಕ್ಯಾಂಟರ್ಗೆ ಬೊಲೇರೋ ಡಿಕ್ಕಿ ಹೊಡೆದು ಬಲೇರೋ ಚಾಲಕ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಮದ್ದೂರು ಪಟ್ಟಣದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.
ಮದ್ದೂರು ತಾಲೂಕಿನ ರುದ್ರಾಕ್ಷಿಪುರದ ಸುನೀಲ್ (37) ಮೃತ ಚಾಲಕನಾಗಿದ್ದಾನೆ. ಅಪಘಾತದ ರಭಸಕ್ಕೆ ಬೊಲೇರೋ ವಾಹನ ಸಂಪೂರ್ಣ ಜಖಂಗೊಂಡಿದೆ.
ಮದ್ದೂರು ಸಂಚಾರಿ ಠಾಣೆ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.