ಮಂಡ್ಯ: ಆಸ್ತಿ ವಿಚಾರದಲ್ಲಿ ದಾಯಾದಿಗಳ ನಡುವೆ ಕಲಹ ಏರ್ಪಟ್ಟು ಅಣ್ಣನ ಕೊಲೆಯಲ್ಲಿ ಅಂತ್ಯವಾದ ಘಟನೆ ಜಿಲ್ಲೆಯ ಕಿಕ್ಕೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಜಿಲ್ಲೆಯ ಕೆ. ಆರ್. ಪೇಟೆ ತಾಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಜಮೀನಿನ ವಿಚಾರವಾಗಿ ದಾಯಾದಿಗಳ ನಡುವೆ ಕಲಹ ಏರ್ಪಟ್ಟಿದೆ. ಈ ವೇಳೆ ಅಣ್ಣ ಕುಮಾರಸ್ವಾಮಿ ಮೇಲೆ ಆತನ ಸಹೋದರ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಸ್ಥಳಕ್ಕೆ ಕಿಕ್ಕೇರಿ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಹತ್ಯೆ ಮಾಡಿದ ಆರೋಪಿ ಸಹೋದರನಿಗಾಗಿ ಹುಡುಕಾಟ ನಡೆಸಿದ್ದಾರೆ.
ಓದಿ: ಕೊರೊನಾದಿಂದ ಮುಸ್ಲಿಂ ವ್ಯಕ್ತಿ ಸಾವು: ಮತ್ತೊಮ್ಮೆ ಆ್ಯಂಬುಲೆನ್ಸ್ ಏರಿದ ಶಾಸಕ ರೇಣುಕಾಚಾರ್ಯ